Advertisement
MIRROR FOCUS

ಮತ್ತೆ ವಿವಿದೆಡೆ ಅಡಿಕೆ ಕಳ್ಳಸಾಗಾಣಿಕೆಗೆ ತಡೆ | 10 ಸಾವಿರ ಕೆಜಿಗಿಂತಲೂ ಅಧಿಕ ಬರ್ಮಾ ಅಡಿಕೆ ವಶ |

Share

ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಸುಮಾರು 10 ಸಾವಿರಕ್ಕೂ ಅಧಿಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕ್ಯಾಚಾರ್ ಜಿಲ್ಲೆಯ ಧೋಲೈನಲ್ಲಿ  ನಾಲ್ಕು ವಕಾರ್ಯಾಚರಣೆಗಳಲ್ಲಿ ಸುಮಾರು 1300 ಕೆಜಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧೋಲೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಎರಡು ಟ್ರಕ್‌ಗಳು ಮತ್ತು ಕಾರುಗಳನ್ನು ತಡೆಹಿಡಿಯಲಾಗಿದ್ದು, ನಾಲ್ಕು ವಾಹನಗಳಿಂದ ಸುಮಾರು 1300 ಕೆಜಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಜಯಂತ್ ಸಾಹು (19), ಫಾರೂಕ್ ಅಹ್ಮದ್ ಬರ್ಭುಯಾ (19), ಆಜಾದ್ ಹುಸೇನ್ ಲಸ್ಕರ್ (24), ನಾಸಿರ್ ಉದ್ದೀನ್ ಲಸ್ಕರ್ (22), ಸರೀಮ್ ಉದ್ದೀನ್ ತಾಲೂಕ್ಡರ್ (21) ಮತ್ತು ಸುಬ್ರತಾ ದಾಸ್ ಎಂಬ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬರ್ಮಾ ಅಡಿಕೆಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ  ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಹೈಲಕಂಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೂ ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಇಲ್ಲಿ ಕೂಡಾ 5750 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆಯಲಾಗಿದೆ. ಇದೇ ಪೊಲೀಸ್‌ ಠಾಣಾ ವ್ಯಾಪ್ತಿಯ ಇನ್ನೊಂದು ಪ್ರದೇಶದಲ್ಲಿ 4000 ಕೆಜಿ ಅಡಿಕೆ ವಶಕ್ಕೆ ಪಡೆಯಲಾಗಿದೆ.

ಈಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಪ್ರಯತ್ನ ನಡೆಸಲಾಗುತ್ತಿದೆ. ಹೀಗಾಗಿ ಬರ್ಮಾ ಅಡಿಕೆ ಆಮದು ತಡೆಗೆ ಇನ್ನಿಲ್ಲದ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ. ಹಾಗಿದ್ದರೂ ಇಲಾಖೆಗಳ ಕಣ್ಣುತಪ್ಪಿಸಿ ಅಡಿಕೆ ಆಮದಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

5 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

5 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

5 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

16 hours ago