Advertisement
MIRROR FOCUS

ಮತ್ತೆ ವಿವಿದೆಡೆ ಅಡಿಕೆ ಕಳ್ಳಸಾಗಾಣಿಕೆಗೆ ತಡೆ | 10 ಸಾವಿರ ಕೆಜಿಗಿಂತಲೂ ಅಧಿಕ ಬರ್ಮಾ ಅಡಿಕೆ ವಶ |

Share

ಅಸ್ಸಾಂ ಸೇರಿದಂತೆ ಆಸುಪಾಸಿನ ರಾಜ್ಯಗಳಲ್ಲಿ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಸುಮಾರು 10 ಸಾವಿರಕ್ಕೂ ಅಧಿಕ ಪ್ರಮಾಣದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕ್ಯಾಚಾರ್ ಜಿಲ್ಲೆಯ ಧೋಲೈನಲ್ಲಿ  ನಾಲ್ಕು ವಕಾರ್ಯಾಚರಣೆಗಳಲ್ಲಿ ಸುಮಾರು 1300 ಕೆಜಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಧೋಲೈ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಎರಡು ಟ್ರಕ್‌ಗಳು ಮತ್ತು ಕಾರುಗಳನ್ನು ತಡೆಹಿಡಿಯಲಾಗಿದ್ದು, ನಾಲ್ಕು ವಾಹನಗಳಿಂದ ಸುಮಾರು 1300 ಕೆಜಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಜಯಂತ್ ಸಾಹು (19), ಫಾರೂಕ್ ಅಹ್ಮದ್ ಬರ್ಭುಯಾ (19), ಆಜಾದ್ ಹುಸೇನ್ ಲಸ್ಕರ್ (24), ನಾಸಿರ್ ಉದ್ದೀನ್ ಲಸ್ಕರ್ (22), ಸರೀಮ್ ಉದ್ದೀನ್ ತಾಲೂಕ್ಡರ್ (21) ಮತ್ತು ಸುಬ್ರತಾ ದಾಸ್ ಎಂಬ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬರ್ಮಾ ಅಡಿಕೆಯನ್ನು ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ  ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ಹೈಲಕಂಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೂ ಅಕ್ರಮವಾಗಿ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಇಲ್ಲಿ ಕೂಡಾ 5750 ಕೆಜಿ ಬರ್ಮಾ ಅಡಿಕೆ ವಶಕ್ಕೆ ಪಡೆಯಲಾಗಿದೆ. ಇದೇ ಪೊಲೀಸ್‌ ಠಾಣಾ ವ್ಯಾಪ್ತಿಯ ಇನ್ನೊಂದು ಪ್ರದೇಶದಲ್ಲಿ 4000 ಕೆಜಿ ಅಡಿಕೆ ವಶಕ್ಕೆ ಪಡೆಯಲಾಗಿದೆ.

ಈಗ ಮತ್ತೆ ಅಡಿಕೆ ಕಳ್ಳಸಾಗಾಣಿಕೆ ತಡೆಗೆ ಪ್ರಯತ್ನ ನಡೆಸಲಾಗುತ್ತಿದೆ. ಹೀಗಾಗಿ ಬರ್ಮಾ ಅಡಿಕೆ ಆಮದು ತಡೆಗೆ ಇನ್ನಿಲ್ಲದ ಪ್ರಯತ್ನ ಪೊಲೀಸರು ನಡೆಸುತ್ತಿದ್ದಾರೆ. ಹಾಗಿದ್ದರೂ ಇಲಾಖೆಗಳ ಕಣ್ಣುತಪ್ಪಿಸಿ ಅಡಿಕೆ ಆಮದಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

6 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

7 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

17 hours ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago