Exclusive - Mirror Hunt

ಅಡಿಕೆ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಆಶಾಕಿರಣ | ಸತತ ಪ್ರಯತ್ನದ ಬಳಿಕ ಅಡಿಕೆ ಫಸಲು ಕಂಡ ಕೃಷಿಕ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗಾರರಿಗೆ ಈಚೆಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ. ಅದರಲ್ಲೂ ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗದಿಂದ ತೋಟವೇ ನಾಶವಾಗಿತ್ತು. ಇದೀಗ ಅನೇಕ ವರ್ಷಗಳ ಬಳಿಕ ಸತತ ಪ್ರಯತ್ನದಿಂದ ಸಂಪಾಜೆಯಂತಹ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಅಡಿಕೆ ಬೆಳೆದು ಕೃಷಿಕರೊಬ್ಬರು ಫಸಲು ಕಂಡಿದ್ದಾರೆ.

Advertisement
Advertisement

ಸುಳ್ಯ ತಾಲೂಕು ಗಡಿಭಾಗವಾದ ಸಂಪಾಜೆಯ ಜೇಡ್ಲ ಪ್ರದೇಶದಲ್ಲಿರುವ ಕೃಷಿಕ ಶ್ರೀಧರ್‌ ಭಟ್‌ ಜೇಡ್ಲ ಅವರು  ಅನೇಕ ವರ್ಷಗಳಿಂದ ಅಡಿಕೆ ಕೃಷಿ ಮಾಡಿಕೊಂಡು ಬಂದವರು. ಸುಮಾರು 20 ವರ್ಷಗಳ ಹಿಂದೆ ಹಳದಿ ಎಲೆರೋಗ ಕಾಣಿಸಿಕೊಂಡು ಅಡಿಕೆ ತೋಟ ನಾಶವಾಗಿತ್ತು. ಅಡಿಕೆ ಬೆಳೆ ಸಂಪೂರ್ಣ ನಾಶವಾಗಿ ರಬ್ಬರ್‌ ಸೇರಿದಂತೆ ಪರ್ಯಾಯ ಬೆಳೆಯತ್ತ ಹೋದವರು. 2016 ರ ಸುಮಾರಿಗೆ ಇದ್ದ ಅಡಿಕೆ ಮರಗಳನ್ನು ಕಡಿದು ಮತ್ತೆ ಅಡಿಕೆ ಗಿಡಗಳ ಮರುನಾಟಿ ಮಾಡಿದರು. ಸತತ ಪ್ರಯತ್ನದಿಂದ ಹಾಗೂ ಸೂಕ್ತ ರೀತಿಯಲ್ಲಿ ತೋಟ ನಿರ್ವಹಣೆ ಮಾಡುತ್ತಾ ಬಂದರು. ಗಿಡ ಉತ್ತಮವಾಗಿ ಬೆಳೆಯಿತು.

ಅಡಿಕೆ ತೋಟ
ಶ್ರೀಧರ ಭಟ್‌, ಜೇಡ್ಲ

ಕಳೆದ ವರ್ಷ ಮೂಲತ: ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು ಇಂದೋರ್‌ನ ಶ್ರೀಸಿದ್ಧಿ ಎಗ್ರಿ ಕೆಮಿಕಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಪೆರುವೋಡಿ ನಾರಾಯಣ ಭಟ್‌ ಅವರ ಸಂಪರ್ಕದಿಂದ ಕೆಲವು ಔಷಧಿಗಳನ್ನು ಹಳದಿ ಎಲೆರೋಗ ನಿಯಂತ್ರಣಕ್ಕಾಗಿ ಹಾಗೂ ಗಿಡಗಳ ಬೆಳವಣಿಗೆಗೆ ಅಗತ್ಯವಾದ ಔಷಧಿಗಳನ್ನು ಅವರ ಸಲಹೆಯಂತೆಯೇ ಬಳಕೆ ಮಾಡಿದರು. ಅಂದರೆ ಹಳದಿ ಎಲೆರೋಗವು ಟೊಮೆಟೋ ಸೇರಿದಂತೆ ಹಲವು ಬೆಳೆಗಳಲ್ಲಿ ಕಾಣಿಸುತ್ತಿದೆ. ಈ ಬೆಳೆಗಳಲ್ಲಿ ಮಾಡುವ ಪ್ರಯೋಗಗಳನ್ನು ಅಡಿಕೆ ಬೆಳೆಯ ಹಳದಿ ಎಲೆರೋಗದಲ್ಲೂ ಪ್ರಯೋಗ ಮಾಡಿದರು. ಇದೀಗ ಸಂಪಾಜೆಯಲ್ಲೂ ಈ ಪ್ರಯೋಗವನ್ನು ಮಾಡಿದ್ದಾರೆ. ಹೀಗಾಗಿ ಸದ್ಯ ಅಡಿಕೆ ಫಸಲು ಉತ್ತಮವಾ ಸಂಪಾಜೆಯ ಜೇಡ್ಲದಲ್ಲಿ‌ ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಇನ್ನೂ ಒಂದೆರಡು ವರ್ಷ ಇದೇ ಔಷಧಿಯ ಪ್ರಯೋಗ ನಡೆದ ಬಳಿಕ ಅಂತಿಮವಾದ ನಿರ್ಧಾರಕ್ಕೆ ಬರಬೇಕಿದೆ.ಆರಂಭದ ಹಂತದಲ್ಲಿ ಅಡಿಕೆ ಬೆಳೆಯಲ್ಲಿ ಈ ಪ್ರಯೋಗ ಯಶಸ್ಸಾಗಿದ್ದು ಸಂಪಾಜೆಯ ಜೇಡ್ಲ ಶ್ರೀಧರ ಭಟ್‌ ಅವರು ಈ ಪ್ರಯೋಗದಲ್ಲಿ ವಿಶ್ವಾಸ ಹೊಂದಿದ್ದಾರೆ. ಅಡಿಕೆಯ ಗುಣಮಟ್ಟದಲ್ಲಿ ಕೂಡಾ ಹಳದಿ ಎಲೆರೋಗ ಪೀಡತ ಪ್ರದೇಶದ ಮಾದರಿಯಂತಹ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ.

Advertisement

ಅಡಿಕೆ ಹಳದಿ ಎಲೆರೋಗ ನಿಯಂತ್ರಣ ಹಾಗೂ ನಿವಾರಣೆಯ ದೃಷ್ಟಿಯಿಂದ ವಿವಿಧ ಪ್ರಯತ್ನಗಳು ನಡೆಯುತ್ತಲೇ ಇದೆ. ವೈಜ್ಞಾನಿಕ ಅಧ್ಯಯನ , ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿದೆ. ಈ ಕಡೆ ಹಳದಿ ಎಲೆರೋಗದ ಹಾಟ್‌ ಸ್ಫಾಟ್‌ ಪ್ರದೇಶದಲ್ಲೂ ಮತ್ತೆ ಮತ್ತೆ ಅಡಿಕೆ ಗಿಡ ನಾಟಿ ಮಾಡುತ್ತಲೇ ಇದ್ದಾರೆ. ಇದೀಗ ಇಂತಹ ಹೊಸ ಪ್ರಯೋಗದ ಮೂಲಕ ಅಡಿಕೆ ಗಿಡಗಳ ಆಯಸ್ಸು ಹೆಚ್ಚಿಸುವ, ಉತ್ತಮ ಫಸಲು ನೀಡುವ ಪ್ರಯೋಗಗಳು ಅಡಿಕೆ ಬೆಳೆಗಾರರಿಗೆ ಭರವಸೆ ಮೂಡಿಸುತ್ತಿದೆ.

ಅಡಿಕೆ ಫಸಲು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು

ರಾಜ್ಯದ ಕರಾವಳಿಯಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ,…

2 hours ago

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

22 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

23 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

24 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

1 day ago