Advertisement
Exclusive - Mirror Hunt

ಅಡಿಕೆ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಆಶಾಕಿರಣ | ಸತತ ಪ್ರಯತ್ನದ ಬಳಿಕ ಅಡಿಕೆ ಫಸಲು ಕಂಡ ಕೃಷಿಕ |

Share

ಅಡಿಕೆ ಬೆಳೆಗಾರರಿಗೆ ಈಚೆಗೆ ಕಾಡುತ್ತಿರುವ ಸಮಸ್ಯೆಗಳಲ್ಲಿ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ. ಅದರಲ್ಲೂ ಸಂಪಾಜೆ ಸೇರಿದಂತೆ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗದಿಂದ ತೋಟವೇ ನಾಶವಾಗಿತ್ತು. ಇದೀಗ ಅನೇಕ ವರ್ಷಗಳ ಬಳಿಕ ಸತತ ಪ್ರಯತ್ನದಿಂದ ಸಂಪಾಜೆಯಂತಹ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಅಡಿಕೆ ಬೆಳೆದು ಕೃಷಿಕರೊಬ್ಬರು ಫಸಲು ಕಂಡಿದ್ದಾರೆ.

ಸುಳ್ಯ ತಾಲೂಕು ಗಡಿಭಾಗವಾದ ಸಂಪಾಜೆಯ ಜೇಡ್ಲ ಪ್ರದೇಶದಲ್ಲಿರುವ ಕೃಷಿಕ ಶ್ರೀಧರ್‌ ಭಟ್‌ ಜೇಡ್ಲ ಅವರು  ಅನೇಕ ವರ್ಷಗಳಿಂದ ಅಡಿಕೆ ಕೃಷಿ ಮಾಡಿಕೊಂಡು ಬಂದವರು. ಸುಮಾರು 20 ವರ್ಷಗಳ ಹಿಂದೆ ಹಳದಿ ಎಲೆರೋಗ ಕಾಣಿಸಿಕೊಂಡು ಅಡಿಕೆ ತೋಟ ನಾಶವಾಗಿತ್ತು. ಅಡಿಕೆ ಬೆಳೆ ಸಂಪೂರ್ಣ ನಾಶವಾಗಿ ರಬ್ಬರ್‌ ಸೇರಿದಂತೆ ಪರ್ಯಾಯ ಬೆಳೆಯತ್ತ ಹೋದವರು. 2016 ರ ಸುಮಾರಿಗೆ ಇದ್ದ ಅಡಿಕೆ ಮರಗಳನ್ನು ಕಡಿದು ಮತ್ತೆ ಅಡಿಕೆ ಗಿಡಗಳ ಮರುನಾಟಿ ಮಾಡಿದರು. ಸತತ ಪ್ರಯತ್ನದಿಂದ ಹಾಗೂ ಸೂಕ್ತ ರೀತಿಯಲ್ಲಿ ತೋಟ ನಿರ್ವಹಣೆ ಮಾಡುತ್ತಾ ಬಂದರು. ಗಿಡ ಉತ್ತಮವಾಗಿ ಬೆಳೆಯಿತು.

ಅಡಿಕೆ ತೋಟ
ಶ್ರೀಧರ ಭಟ್‌, ಜೇಡ್ಲ

ಕಳೆದ ವರ್ಷ ಮೂಲತ: ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು ಇಂದೋರ್‌ನ ಶ್ರೀಸಿದ್ಧಿ ಎಗ್ರಿ ಕೆಮಿಕಲ್‌ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಪೆರುವೋಡಿ ನಾರಾಯಣ ಭಟ್‌ ಅವರ ಸಂಪರ್ಕದಿಂದ ಕೆಲವು ಔಷಧಿಗಳನ್ನು ಹಳದಿ ಎಲೆರೋಗ ನಿಯಂತ್ರಣಕ್ಕಾಗಿ ಹಾಗೂ ಗಿಡಗಳ ಬೆಳವಣಿಗೆಗೆ ಅಗತ್ಯವಾದ ಔಷಧಿಗಳನ್ನು ಅವರ ಸಲಹೆಯಂತೆಯೇ ಬಳಕೆ ಮಾಡಿದರು. ಅಂದರೆ ಹಳದಿ ಎಲೆರೋಗವು ಟೊಮೆಟೋ ಸೇರಿದಂತೆ ಹಲವು ಬೆಳೆಗಳಲ್ಲಿ ಕಾಣಿಸುತ್ತಿದೆ. ಈ ಬೆಳೆಗಳಲ್ಲಿ ಮಾಡುವ ಪ್ರಯೋಗಗಳನ್ನು ಅಡಿಕೆ ಬೆಳೆಯ ಹಳದಿ ಎಲೆರೋಗದಲ್ಲೂ ಪ್ರಯೋಗ ಮಾಡಿದರು. ಇದೀಗ ಸಂಪಾಜೆಯಲ್ಲೂ ಈ ಪ್ರಯೋಗವನ್ನು ಮಾಡಿದ್ದಾರೆ. ಹೀಗಾಗಿ ಸದ್ಯ ಅಡಿಕೆ ಫಸಲು ಉತ್ತಮವಾ ಸಂಪಾಜೆಯ ಜೇಡ್ಲದಲ್ಲಿ‌ ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಇನ್ನೂ ಒಂದೆರಡು ವರ್ಷ ಇದೇ ಔಷಧಿಯ ಪ್ರಯೋಗ ನಡೆದ ಬಳಿಕ ಅಂತಿಮವಾದ ನಿರ್ಧಾರಕ್ಕೆ ಬರಬೇಕಿದೆ.ಆರಂಭದ ಹಂತದಲ್ಲಿ ಅಡಿಕೆ ಬೆಳೆಯಲ್ಲಿ ಈ ಪ್ರಯೋಗ ಯಶಸ್ಸಾಗಿದ್ದು ಸಂಪಾಜೆಯ ಜೇಡ್ಲ ಶ್ರೀಧರ ಭಟ್‌ ಅವರು ಈ ಪ್ರಯೋಗದಲ್ಲಿ ವಿಶ್ವಾಸ ಹೊಂದಿದ್ದಾರೆ. ಅಡಿಕೆಯ ಗುಣಮಟ್ಟದಲ್ಲಿ ಕೂಡಾ ಹಳದಿ ಎಲೆರೋಗ ಪೀಡತ ಪ್ರದೇಶದ ಮಾದರಿಯಂತಹ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ.

ಅಡಿಕೆ ಹಳದಿ ಎಲೆರೋಗ ನಿಯಂತ್ರಣ ಹಾಗೂ ನಿವಾರಣೆಯ ದೃಷ್ಟಿಯಿಂದ ವಿವಿಧ ಪ್ರಯತ್ನಗಳು ನಡೆಯುತ್ತಲೇ ಇದೆ. ವೈಜ್ಞಾನಿಕ ಅಧ್ಯಯನ , ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿದೆ. ಈ ಕಡೆ ಹಳದಿ ಎಲೆರೋಗದ ಹಾಟ್‌ ಸ್ಫಾಟ್‌ ಪ್ರದೇಶದಲ್ಲೂ ಮತ್ತೆ ಮತ್ತೆ ಅಡಿಕೆ ಗಿಡ ನಾಟಿ ಮಾಡುತ್ತಲೇ ಇದ್ದಾರೆ. ಇದೀಗ ಇಂತಹ ಹೊಸ ಪ್ರಯೋಗದ ಮೂಲಕ ಅಡಿಕೆ ಗಿಡಗಳ ಆಯಸ್ಸು ಹೆಚ್ಚಿಸುವ, ಉತ್ತಮ ಫಸಲು ನೀಡುವ ಪ್ರಯೋಗಗಳು ಅಡಿಕೆ ಬೆಳೆಗಾರರಿಗೆ ಭರವಸೆ ಮೂಡಿಸುತ್ತಿದೆ.

ಅಡಿಕೆ ಫಸಲು
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

19 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

19 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

21 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago