Advertisement
Opinion

ಅಡಿಕೆ “ಹಳದಿ ಎಲೆರೋಗ”ದ ಬಣ್ಣಗಳು…!

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಸಂಪಾಜೆ ಸೇರಿದಂತೆ ಆಸುಪಾಸಿನ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಎಲೆರೋಗ ಬಾಧಿಸಿ ಅನೇಕ ವರ್ಷಗಳಾದವು. ಇದಕ್ಕೊಂದು ಪರಿಹಾರ ಅಗತ್ಯ ಇದೆ ಎಂದು ಅನೇಕ ಸಮಯಗಳಿಂದ ಪ್ರಯತ್ನಗಳು ಆಗುತ್ತಿವೆ. ಅಂತಹ ಕೆಲವು ಸಂಗತಿಗಳ ನೆನಪುಗಳು ಹೀಗಿದೆ..…..ಮುಂದೆ ಓದಿ….

ವರ್ಷಗಳ ಹಿಂದೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಾಜೇಂದ್ರ ಕುಮಾರ್‌ ಅವರು ಗುತ್ತಿಗಾರಿನ ಸಹಕಾರ ಸಂಘದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತಾಡುತ್ತಾ ಅಡಿಕೆಯ ಹಳದಿ ಎಲೆ ರೋಗ ನಿವಾರಣೆಯ ಪ್ರಯತ್ನಕ್ಕಾಗಿ ಬ್ಯಾಂಕಿನಿಂದ ಒಂದು ಕೋಟಿ ರುಪಾಯಿ ಕೊಡುವುದಾಗಿ ಘೋಷಣೆ ಮಾಡಿದ್ದಾಗ ಸಂಚಲನ ಉಂಟಾಗಿತ್ತು.

ಇದರ ಮೊದಲು ಶತಮಾನದಿಂದ ಪರಿಹಾರ ಕಾಣದೇ ಇರುವ ಅಡಿಕೆಯ ಹಳದಿ ಎಲೆ ರೋಗದ ನಿವಾರಣೆಗಾಗಿ YLD ತಡೆ ಗಿಡಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಸಂಶೋಧನಾ ಕೇಂದ್ರ ಹಾಕಿಕೊಂಡಿತ್ತು.ಈ ಯೋಜನೆಯ ಅನುಷ್ಟಾನಕ್ಕಿದ್ದ ಪ್ರಮುಖ ಅಡ್ಡಿಯೆಂದರೆ ಅಡಿಕೆ ಮೇಲಿನ ಯಾವುದೇ ಸಂಶೋಧನೆಗಾಗಿ ಕೇಂದ್ರ ಸರಕಾರದಿಂದ ವಿಶೇಷ ಅನುದಾನ ಸಿಗದೇ ಇರುವುದು ಆಗಿತ್ತು.ಜೊತೆಗೆ ಯೋಜನೆಯ ಅನುಷ್ಟಾನಕ್ಕಾಗಿ ಬೇಕಿದ್ದ ಟಿಶ್ಯೂ ಕಲ್ಚರ್ ತಂತ್ರಜ್ಞಾನವು ಅಗತ್ಯವಿದ್ದಷ್ಟು ಅಭಿವೃದ್ಧಿಗೊಳ್ಳದೇ ಇರುವುದೂ ಇನ್ನೊಂದು ಕಾರಣವಾಗಿತ್ತು.ಇನ್ನೊಂದು ಸಾಧ್ಯತೆಯಾದ ಕೃತಕ ಪರಾಗ ಸ್ಪರ್ಷದ ಮೂಲಕ ಅಭಿವೃದ್ಧಿ ಸಾಧ್ಯತೆ ಇಲ್ಲಿ ಅನುಷ್ಟಾನ ಸಾಧ್ಯವಿಲ್ಲದ್ದು ಅಂತ ಗೊತ್ತಾಗಿತ್ತು.

ದೊಡ್ಡ ಪ್ರಮಾಣದಲ್ಲಿ ಯೋಜನೆ ಕಾರ್ಯಗತವಾಗ ಬೇಕಾಗಿದ್ದದ್ದರಿಂದ ಸಾಕಷ್ಟು ದೊಡ್ಡ ಮೊತ್ತದ ಅನುದಾನವೇ ಬೇಕಾಗಿದ್ದಿದ್ದರಿಂದ ನಾವು ಒಂದಷ್ಟು ಜನ ಇದಕ್ಕಾಗಿ ಪ್ರಯತ್ನ ಪಡುತ್ತಿದ್ದೆವು, ಓಡಾಡುತ್ತಿದ್ದೆವು.ಆದರೆ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಎಲ್ಲೆಡೆಯಿಂದಲೂ ನಮಗೆ ಸಿಕ್ಕಿದ್ದು ನಿರುತ್ಸಾಹದ ಪ್ರತಿಕ್ರಿಯೆ ,ಒಂದೆರಡು ಕಡೆ ವಿರೋಧ ಕೂಡಾ. ಆ ವೇಳೆಗಾಗಲೇ ಈ ವಿಷಯಕ್ಕೆ ಸಂಬಂಧ ಪಟ್ಟಂತೆ ಕ್ಯಾಂಪ್ಕೋ ಸೇರಿದಂತೆ ಯಾವುದೇ ಜನಪ್ರತಿನಿಧಿಗಳಿಂದ ಯಾವುದೇ ಬೆಂಬಲ ಸಿಗುವುದಿಲ್ಲ ಎಂಬುದೂ ಸ್ಪಷ್ಟವಾಗಿತ್ತು.

ಆ ಬಳಿಕ ಎಲಿಮಲೆಯಲ್ಲಿ ನಡೆದ ಸಹಕಾರ ಸಂಘದ ಕಾರ್ಯಕ್ರಮದಲ್ಲಿ ರಾಜೇಂದ್ರ ಕುಮಾರ್‌ ಅವರು ತಮ್ಮ ಹೇಳಿಕೆಯನ್ನು ಪರಿಷ್ಕರಿಸಿ YLD ನಿರ್ಮೂಲನೆಯ ವೈಜ್ಞಾನಿಕ ಯೋಜನೆಗೆ ಎಷ್ಟು ಬೇಕೋ ಅಷ್ಟೂ ಹಣವನ್ನು ಬ್ಯಾಂಕಿನಿಂದ ಒದಗಿಸುವುದಾಗಿ ಘೋಷಿಸಿದಾಗ ನಮಗೆ ಲಾಟರಿ ಹೊಡೆದ ಭಾವನೆ ಬಂದದ್ದಂತೂ ಸುಳ್ಳಲ್ಲ.ಆ ಬಳಿಕ ಈ ಬಗ್ಗೆ ಸಮಾಲೋಚಿಸಲು ನಮ್ಮನ್ನು ಮಂಗಳೂರಿಗೆ ಬರಹೇಳಿದರು. ಆ ಪ್ರಯುಕ್ತ ನಾವೊಂದಷ್ಟು ಜನ ಮಂಗಳೂರಿಗೆ ಹೋಗಿದ್ದೆವು.ಅಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರ ಕೊಠಡಿಯಲ್ಲಿ ಒಂದಷ್ಟು ಇತರ ನಿರ್ದೇಶಕರುಗಳ ಉಪಸ್ಥಿತಿಯಲ್ಲಿ ಅಧ್ಯಕ್ಷರೊಂದಿಗೆ ನಮ್ಮ ಮಾತುಕತೆ ನಡೆಯಿತು.

ಅಧ್ಯಕ್ಷರು ಹೇಳಿದ್ದು ಇಷ್ಟು… ” ತನಗೆ ಕೃಷಿ ಬಗೆಗೆ ಇನಿತೂ ಗೊತ್ತಿಲ್ಲ.ಆದ್ದರಿಂದ ಈ ಯೋಜನೆ ಬಗ್ಗೆ ಏನು ನಿರ್ಧಾರ ತಗೊಳ್ಳ ಬೇಕೆಂದು ಕೃಷಿಕರೂ ಆಗಿರುವ  ರಾಜಾರಾಮ ಭಟ್ಟರು ಹೇಳಲಿ”

ಅವರ ಅಭಿಪ್ರಾಯ ಹೀಗಿತ್ತು, “ಹೊಸ ಗಿಡ ಮಾಡುವ ಯೋಜನೆ ಬೇಡ.ಇದ್ದ ರೋಗ ಗುಣ ಪಡಿಸುವ ಯೋಜನೆ ಮುಂದಿಡಿ” , ಗೊತ್ತಿರುವ ಪ್ರಕಾರ, ಈ ರೋಗ ಫೈಟೋಪ್ಲಾಸ್ಮಾದಿಂದ ಬಂದದ್ದು. ಇಲ್ಲಿ ಮಾತ್ರ ಅಲ್ಲ .ಇಡೀ ಪ್ರಪಂಚದಲ್ಲಿ ಫೈಟೋಪ್ಲಾಸ್ಮಾ ರೋಗ ಗುಣಪಡಿಸುವ ತಂತ್ರಜ್ಞಾನ ಇಲ್ಲ ಅಂತ ನಾವು ಹೇಳಿದರೆ, ಅದನ್ನು ಕೇಳಿಸಿಕೊಳ್ಳಲೂ ಅವರು ಸಿದ್ಧರಿಲ್ಲ. ರಾಜಾರಾಮ ಭಟ್ಟರು ಅಡಿಕೆಯ ಹಳದಿ ಎಲೆ ರೋಗ ನಿವಾರಣೆಯ ಯೋಜನೆಗೆ ಸಹಕಾರ ಕೊಡಬೇಕಾಗಿಲ್ಲ ಅಂತ ನಿರ್ಧರಿಸಿದರು.

ಹಿಂದೊಮ್ಮೆ ಬರೆದಿದ್ದೆ, ಹೇಳಿದ್ದೆ , ವೈಜ್ಞಾನಿಕ ವಿಷಯಗಳ ಬಗೆಗೆ ಇನಿತೂ ಜ್ಞಾನ ಇಲ್ಲದವರು ನಿರ್ಣಾಯಕ ಅಧಿಕಾರ ಸ್ಥಾನದಲ್ಲಿ ಇರುವುದು ಕೃಷಿಕರ ದೌರ್ಭಾಗ್ಯ ಅಂತ.

ಈ ನಾಯಕರುಗಳು ಹೀಗೆ. ಮೊದಲು ಘೋಷಣೆ ಮಾಡುವುದು. ನಂತರ ಘೋಷಣೆಯನ್ನು ಕಾರ್ಯಗತ ಗೊಳಿಸಲು ಸಾಧ್ಯವೋ ಅಂತ ಆಲೋಚಿಸುವುದು. ನಡುವೆ ಸಿಗುವ ಚಪ್ಪಾಳೆ,ಪುರಸ್ಕಾರಗಳನ್ನೆಲ್ಲಾ ಅನುಭವಿಸುವುದು. ಹಾಗಿದ್ದರೆ ಕೃಷಿಕ, ಕೃಷಿ ಕ್ಷೇತ್ರದ ಬೆಳವಣಿಗೆ ಹೇಗೆ ಸಾಧ್ಯ ಎನ್ನುವುದು ಅಂತರಂಗದ ಪ್ರಶ್ನೆಯಾಗಿಯೇ ಉಳಿಯುತ್ತದೆ.

ಇತ್ತೀಚೆಗೆ, ಅಡಿಕೆ ಕ್ಯಾನ್ಸರ್ ಕಾರಕ ವಿಷಯದಲ್ಲೂ ಘೋಷಣೆಯೊಂದು ಬಂತು. ಹತ್ತೋ ಹನ್ನೆರಡೋ ಸಂಸ್ಥೆಗಳು ಜೊತೆ ಸೇರಿ ಈ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸುವುದು ಅಂತ.ಕೇಂದ್ರ ಮಂತ್ರಿಗಳೂ ಘಂಟಾಘೋಷವಾಗಿ ಇದನ್ನು ಘೋಷಿಸಿದರು.ಈ ಘೋಷಣೆ ಅನುಷ್ಟಾನಕ್ಕೆ ಬರುವುದು ಇದಕ್ಕಾಗಿ ಸರಕಾರ ಹತ್ತು ಕೋಟಿ ರುಪಾಯಿಗಳನ್ನು ಬಿಡುಗಡೆ ಗೊಳಿಸಿದ ಮೇಲಷ್ಟೇ ಎಂಬುದು ಯಾರ ಗಮನಕ್ಕೂ ಬಂದಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

54 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago