Advertisement
MIRROR FOCUS

ಅಡಿಕೆ ಹಳದಿ ಎಲೆ ರೋಗ | ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ ಕಡೆಗೆ ಹೆಜ್ಜೆ | ಬೆಳೆಗಾರರಿಗೆ ಇನ್ನೊಂದು ಆಶಾಕಿರಣ |

Share

ಅಡಿಕೆ ಹಳದಿ ಎಲೆ ರೋಗ ಹರಡುತ್ತಿದೆ. ವಿವಿಧ ಪ್ರಯತ್ನವಾದರೂ ಯಾವುದೇ ಪ್ರಯತ್ನ ಯಶಸ್ಸು ಕಾಣಲಿಲ್ಲ. ಆದರೆ ಈಗ ಜಗತ್ತಿನಾದ್ಯಂತ ಪ್ರಯತ್ನ ಮಾಡುತ್ತಿರುವಂತೆಯೇ ಅಡಿಕೆ ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿಯ ಬಗ್ಗೆ ಹೊಸ ಹೆಜ್ಜೆಯನ್ನು ಇಡಲಾಗುತ್ತಿದೆ. ಅಡಿಕೆ ಬೆಳೆಗಾರರಿಗೆ ಇದೊಂದು ಆಶಾವಾದ ಮೂಡಿಸುತ್ತಿದೆ.

 

ವಿಡಿಯೋ ವರದಿ :

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು , ಮರ್ಕಂಜ ಪ್ರದೇಶದಲ್ಲಿ ಈಗ ಹಳದಿ ಎಲೆ ರೋಗ ಹೆಚ್ಚು ಹರಡಿದೆ. ಜಿಲ್ಲೆಯ ವಿವಿದೆಡೆಗೆ ಹರಡುತ್ತಿದೆ. ಅಡಿಕೆ ತೋಟದಲ್ಲಿ ಹಳದಿ ಎಲೆ ರೋಗಕ್ಕೆ ಫೈಟೋಪ್ಲಾಸ್ಮಾ ಎಂಬ ವೈರಸ್‌ ಕಾರಣ ಹಾಗೂ ಹರಡುವಿಕೆಗೆ ಜಿಗಿ ಹುಳ ಕಾರಣ ಎಂದು ಗುರುತಿಸಲಾಗಿದ್ದರೂ ಇದುವರೆಗೂ ಸೂಕ್ತವಾದ ಔಷಧಿ ಕಂಡುಹಿಡಿಯಲು ಆಗಿಲ್ಲ. ಹೀಗಾಗಿ ಈಗ ಅಡಿಕೆ ಬೆಳೆಗಾರರ ಶೇ.90 ರಷ್ಟು ಅಡಿಕೆ ತೋಟಗಳು ನಾಶವಾಗಿದೆ. ಪರ್ಯಾಯ ದಾರಿಗಳು ಇಲ್ಲವಾಗಿದೆ. ಇಡೀ ರಾಜ್ಯದಲ್ಲಿ ಸುಮಾರ 14,೦೦೦ ಪ್ರದೇಶದಲ್ಲಿ ಹಳದಿ ಎಲೆ ರೋಗ ಹರಡಿದೆ ಎನ್ನುವುದು  ದಾಖಲೆಗಳು ಹೇಳುತ್ತವೆ. ದಕ ಜಿಲ್ಲೆಯಲ್ಲಿಯೇ 1700 ಹೆಕ್ಟೇರ್‌ ಪ್ರದೇಶದಲ್ಲಿ ಹಳದಿ ಎಲೆ ರೋಗ ಹರಡಿದೆ ಎನ್ನುವುದು  ಈಗಿನ ಲೆಕ್ಕಾಚಾರ.

ಸಂಪಾಜೆಯಲ್ಲಿ 2013 ರ ವೇಳೆಗೆ ಸುಮಾರು 750  ಕ್ವಿಂಟಾಲ್ ಅಡಿಕೆ ಕ್ಯಾಂಪ್ಕೋ ಶಾಖೆಗೆ ಅಡಿಕೆ ಬರುತ್ತಿದ್ದ ದಾಖಲೆಗಳು ಇದೆ. ಆದರೆ ಈಚೆಗೆ 350 ಕ್ವಿಂಟಾಲ್‌ ಗೆ ತಲುಪಿದೆ ಎನ್ನುವುದು  ಹಳದಿ ಎಲೆ ರೋಗ ಭೀಕರತೆ ಹಾಗೂ ವಿಸ್ತರಣೆಯ ಪ್ರಭಾವವನ್ನು ತಿಳಿಸುತ್ತದೆ. ಈ ನಡುವೆ ಇಲ್ಲಿ ಸಹಕಾರಿ ಸಂಘಗಳು ಅಡಿಕೆ ಬೆಳೆಗಾರರ ಭವಿಷ್ಯವನ್ನು ರೂಪಿಸಿರುವುದು  ತಿಳಿಯುತ್ತದೆ. ಸದ್ಯ ಅಡಿಕೆಯನ್ನು ಕೂಡಾ ಸಂಪಾಜೆ, ಅರಂತೋಡು ಪ್ರದೇಶದಲ್ಲಿ ಬೆಳೆಯುತ್ತಾರೆ.

ಅಡಿಕೆಗೆ ಪರ್ಯಾಯವಾಗಿ ಕೆಲವರು ರಬ್ಬರ್‌, ತಾಳೆ ಹಾಕಿದ್ದರೂ ಆದಾಯದ ದೃಷ್ಟಿಯಿಂದ ಅಡಿಕೆ ಮಾತ್ರವೇ ಇಲ್ಲಿ ಹೆಚ್ಚು ಸೂಕ್ತವಾಗಿದೆ. ಈ ಕಾರಣದಿಂದ ಹಳದಿ ಎಲೆ ರೋಗ ಇದ್ದರೂ ಮತ್ತೆ ಆದಾಯದ ಕಾರಣದಿಂದಲೇ ಅಡಿಕೆಯನ್ನು ಮತ್ತೆ ನಾಟಿ ಮಾಡುತ್ತಾರೆ, ಎಡೆ ಸಸಿಯಾಗಿಯೂ ಅಡಿಕೆಯೇ ಅನಿವಾರ್ಯವಾಗಿದೆ. ಇದು ಕೂಡಾ ಐದಾರು ವರ್ಷದಲ್ಲಿ ಮತ್ತೆ ಹಳದಿ ಎಲೆರೋಗದಿಂದ ಬಾಧಿತವಾಗುತ್ತದೆ. ಇಂತಹ ಮರದಲ್ಲಿನ ಅಡಿಕೆಯೂ ಗುಣಮಟ್ಟದಿಂದ ಕೂಡಿರುವುದಿಲ್ಲ.

ಇದೀಗ ಇನ್ನೊಂದು ಆಶಾವಾದ ಹುಟ್ಟಿಕೊಂಡಿದೆ. ಜಗತ್ತಿನ ವಿವಿದೆಡೆ ರೋಗ ಇರುವ ತಳಿಗಳಿಗೆ ರೋಗನಿರೋಧಕ ತಳಿಗಳನ್ನು ಅಭಿವೃದ್ಧಿ ಮಾಡಲಾಗಿದೆ.ಈಚೆಗೆ ದೇಶದಲ್ಲೂ ಅದೇ ಪ್ರಯತ್ನವಾಗುತ್ತಿದೆ. ಬೆಂಡೆ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಪ್ರಯತ್ನವಾಗಿದೆ. ಇತ್ತೀಚೆಗೆ ಅದೇ ಮಾದರಿಯ 35 ತಳಿಗಳನ್ನು ಬಿಡುಗಡೆ ಕೂಡಾ ಮಾಡಲಾಗಿದೆ.  ಹೀಗಾಗಿ ಅಡಿಕೆ ಹಳದಿ ಎಲೆ ರೋಗಕ್ಕೂ ಅದೇ ಮಾದರಿಯಲ್ಲಿ ರೋಗ ನಿರೋಧಕ ತಳಿ ಅಭಿವೃದ್ಧಿ ಏಕೆ ಸಾಧ್ಯವಿಲ್ಲ ಎನ್ನುವುದು  ಅಡಿಕೆ ಬೆಳೆಗಾರರ ಪ್ರಶ್ನೆಯಾಗಿತ್ತು.

ಈ ಬಗ್ಗೆ ವಿಜ್ಞಾನಿಗಳಲ್ಲಿ  ಚರ್ಚೆ ಮಾಡಿದಾಗಲೂ ಅಂತಹದ್ದೇ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡಲು ಸಾಧ್ಯವಿದೆ ಎನ್ನುವ ಅಭಿಪ್ರಾಯ  ಲಭ್ಯವಾದ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳೂ ಈ ಬಗ್ಗೆ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಇಂತಹ ಪ್ರಯತ್ನ ಮಾಡಲು  ಮುಂದೆ ಬಂದಿದ್ದಾರೆ. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಈಗಾಗಲೇ ವಿವಿಧ ಇಲಾಖೆಗಳಿಗೆ, ಜಿಲ್ಲೆಯ ಜನಪ್ರತಿನಿಧಿಗಳಿಗೆ ಮನವಿ ಮಾಡಲಾಗಿದೆ.  ಸುಳ್ಯ ತಾಲೂಕಿನ ಸಹಕಾರಿ ಸಂಸ್ಥೆಗಳು, ಕ್ಯಾಂಪ್ಕೋದಂತಹ ಸಂಸ್ಥೆಗಳು ಕೈಜೋಡಿಸಿದರೆ ಈ ಯೋಜನೆ ಯಶಸ್ಸಾಗಬಹುದು. ಈ ನಿಟ್ಟಿನಲ್ಲಿ  ಪ್ರಯತ್ನಗಳು ಸಾಗುತ್ತಿವೆ.

 

ರೋಗ ನಿರೋಧಕ ತಳಿ ಅಭಿವೃದ್ಧಿ ಹೇಗೆ: ?

ಸಂಪಾಜೆ ಪ್ರದೇಶವು ಅಡಿಕೆ ಹಳದಿ ಎಲೆ ರೋಗ ಪೀಡಿತ ಹಾಟ್‌ ಸ್ಫಾಟ್‌ ಎಂದು ಗುರುತಿಸಲಾಗಿದೆ. ಅನೇಕ ವರ್ಷಗಳಿಂದ ಇಲ್ಲಿ ಅಡಿಕೆ ಹಳದಿ ರೋಗ ಕಂಡುಬಂದಿತ್ತು. ಕನಿಷ್ಟ 25 ವರ್ಷಗಳಿಂದ ಮೇಲ್ಪಟ್ಟು ವರ್ಷಗಳಿಂದ ಅಡಿಕೆ ಹಳದಿ ಎಲೆ ರೋಗ ಕಂಡುಬಂದಿದ್ದ ತೋಟವನ್ನು ಪತ್ತೆ ಮಾಡಿ ಅಷ್ಟು ವರ್ಷಗಳಿಂದಲೂ ಅಡಿಕೆ ಹಳದಿ ರೋಗ ಬಾಧಿತವಾಗಿ ಇನ್ನೂ ಹಸಿರಾಗಿಯೇ ಇರುವ ಅಡಿಕೆ ಮರಗಳನ್ನು ಹುಡುಕಿ  ವಿಜ್ಞಾನಿಗಳ ಮೂಲಕ ಈ ಮರದಲ್ಲಿ ರೋಗದ ಪ್ರಭಾವದ ಬಗ್ಗೆ ಸ್ಯಾಂಪಲ್‌ ಮೂಲಕ ಪರಿಶೀಲನೆ ಮಾಡಿದ ಬಳಿಕ ಅಡಿಕೆ ಮರಗಳನ್ನು ಗುರುತಿಸಿ, ಮುಂದೆ ಹಿಂಗಾರ ಬರುವ ಸಮಯದಲ್ಲಿ  ಅಂತಹದ್ದೇ ಮರಗಳಿಂದ ಪಾಲಿನೇಶನ್‌ ಮಾಡಿಸಿ ಅಡಿಕೆಯನ್ನು ಪಡೆದು ಅದರಲ್ಲಿ  ಗುಣಮಟ್ಟದ ಅಡಿಕೆಯನ್ನು ಗಿಡ ಮಾಡಿ ನಾಟಿ ಮಾಡುವ ಮೂಲಕ ರೋಗ ನಿರೋಧಕ ತಳಿ ಅಭಿವೃದ್ಧಿ ಸಾಧ್ಯವಿದೆ ಎನ್ನುವುದು  ಇಲ್ಲಿನ ಆಶಾವಾದ. ಈ ಹಿಂದೆ ಇಂತಹ ಪ್ರಯತ್ನ ಒಮ್ಮೆ ನಡೆದಿದ್ದೂ ಬಳಿಕ ಆ ಯೋಜನೆ ಮುಂದುವರಿಯಲಿಲ್ಲ. ಅಡಿಕೆ ಮರ ಏರುವುದು  ಹಾಗೂ ಇನ್ನಿತರ ತಾಂತ್ರಿಕ ಕಾರಣದಿಂದ ಹಿನ್ನಡೆಯಾಗಲು ಕಾರಣವಾಗಿತ್ತು ಎನ್ನುವುದು ಸದ್ಯದ ಮಾಹಿತಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

11 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago