Advertisement
MIRROR FOCUS

ಕಾಸರಗೋಡಿಗೂ ಕಾಲಿಟ್ಟಿತೇ ಅಡಿಕೆ ಹಳದಿ ಎಲೆರೋಗ ? |

Share

ರಾಜ್ಯದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಹಳದಿ ಎಲೆ ರೋಗವು ಈಗ ನೆರೆಯ ಕಾಸರಗೋಡು ಜಿಲ್ಲೆಯಲ್ಲೂ ಕಾಣಿಸಿಕೊಂಡಿದೆಯೇ ಎಂಬ ಆತಂಕ ಅಲ್ಲಿನ ಕೃಷಿಕರನ್ನು ಕಾಡುತ್ತಿದೆ. ಕುಂಬಳೆ ಸಮೀಪದ ಕೃಷಿಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸುಳ್ಯ ,ಪುತ್ತೂರು ತಾಲೂಕಿನ ಅಡಿಕೆ ತೋಟಗಳನ್ನು ಆಕ್ರಮಿಸಿಕೊಂಡ ಅಡಿಕೆಯ ಹಳದಿ ಎಲೆ ರೋಗ ಇದೀಗ ಕಾಸರಗೋಡು ತಾಲೂಕಿನ ತೋಟಗಳಿಗೂ ವ್ಯಾಪಿಸಿದೆಯೇ ಎಂಬ ಸಂದೇಹ ಉಂಟಾಗಿದೆ.ಕಾಸರಗೋಡು ತಾಲೂಕಿನ ಅಡೂರು,ಕುಂಬಳೆ ,ಮಧೂರು ಪ್ರದೇಶಗಳ ಕೆಲವು ತೋಟಗಳಲ್ಲಿ ಅಡಿಕೆ ಸೋಗೆ ಹಳದಿಯಾಗಿರುವುದನ್ನು ಸರಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು  ಕೃಷಿಕರು ಆತಂಕ ಪಡುತ್ತಿದ್ದಾರೆ.

ಕುಂಬಳೆ ಸಮೀಪದ ಎಡನಾಡು ಬಳಿಯ ಕೃಷಿಕರೊಬ್ಬರ ತೋಟದಲ್ಲಿ ಕಳೆದ ಕೆಲವು ಸಮಯಗಳಿಂದ ಅಡಿಕೆ ಮರದ ಸೋಗೆ ಹಳದಿಯಾಗಿತ್ತು. ಇದಕ್ಕೆ ವಿಜ್ಞಾನಿಗಳ ಸಲಹೆ ಪಡೆದು ಸೂಕ್ಷ್ಮಪೋಷಕಾಂಶಗಳನ್ನು ಬಳಕೆ ಮಾಡಿದ್ದಾರೆ. ಅದರ ಜೊತೆಗೆ ಮೆಗ್ನೀಷಿಯಂ ಸಲ್ಫೇಟ್ ಮತ್ತು ಡೊಲೋಮೈಟ್ ಕೂಡಾ ಬಳಕೆ ಮಾಡಿದ್ದಾರೆ. ಅದಾದ ಬಳಿಕ ಅಡಿಕೆ ಮರದ ಸೋಗೆ ಹಸಿರಾದರೂ ಇದೀಗ ಮತ್ತೆ ಹಳದಿ ಆಗುವುದಕ್ಕೆ ಕಾರಣವೇನು ಎಂದು ತಿಳಿದಿಲ್ಲ ಎನ್ನುತ್ತಾರೆ ಸ್ಥಳೀಯ ಕೃಷಿಕರು. ಕೆಲವು ಬಾರಿ ಅಡಿಕೆ ಮರದ ಸೋಗೆ ಹಳದಿಯಾಗುವುದಕ್ಕೆ ಹಳದಿ ಎಲೆರೋಗವೇ ಕಾರಣ ಆಗಿರುವುದಿಲ್ಲ. ಪೋಷಕಾಂಶಗಳ ಕೊರತೆಯೂ ಕಾರಣವಾಗಿರುತ್ತದೆ.ಮೆಗ್ನೀಷಿಯಂ ಕೊರತೆ ಲಕ್ಷಣವೂ ಹಳದಿ ಎಲೆರೋಗದ ಲಕ್ಷಣಗಳೂ ಹೆಚ್ಚೂ ಕಡಿಮೆ ಒಂದೇ ರೀತಿ ಇರುತ್ತದೆ. ಹೀಗಾಗಿ ಸೋಗೆ ಹಳದಿಯಾದ ತಕ್ಷಣವೇ ಹಳದಿ ಎಲೆರೋಗ ಎಂದು ಕೃಷಿಕರು ಭಾವಿಸಬೇಕಾಗಿಲ್ಲ ಎಂದು ಈ ಹಿಂದೆ ವಿಜ್ಞಾನಿಗಳು ಹೇಳಿದ್ದರು. ಆದರೆ ಕಾಸರಗೋಡಿನ ಕುಂಬಳೆಯ  ಎಡನಾಡಿನ ಈ ಪ್ರದೇಶದಲ್ಲಿ ಮತ್ತೆ ಹಳದಿಯಾಗಿರುವುದು  ಈಗ ಕೃಷಿಕರ ಆತಂಕಕ್ಕೆ ಕಾರಣ.

ಅಡಿಕೆ ಹಳದಿ ಎಲೆರೋಗವು ದ ಕ ಜಿಲ್ಲೆ ಮಾತ್ರವಲ್ಲ ಶೃಂಗೇರಿ, ಕೊಪ್ಪ ಮೊದಲಾದ ಕಡೆಗಳಲ್ಲಿ ಕಂಡುಬಂದಿತ್ತು. ಕೇರಳದಲ್ಲಿ ಆರಂಭವಾದ ಈ ರೋಗವು ವ್ಯಾಪಕವಾಗಿತ್ತು. ಈಗ ಸಂಪಾಜೆ ಸೇರಿದಂತೆ ದ ಕ ಜಿಲ್ಲೆಯ ಹಲವು ಕಡೆ ವ್ಯಾಪಿಸಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪ್ರದೇಶದಲ್ಲಿ ಅಡಿಕೆ ಸೋಗೆ ಏಕೆ  ಹಳದಿಯಾಗುತ್ತಿದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸುವುದು  ಅಗತ್ಯವಿದೆ.
ರಮೇಶ್‌ ದೇಲಂಪಾಡಿ, ಕೃಷಿಕರು, ಮರ್ಕಂಜ, ಸುಳ್ಯ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

3 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago