Advertisement
MIRROR FOCUS

ಕಾಸರಗೋಡಿಗೂ ಕಾಲಿಟ್ಟಿತೇ ಅಡಿಕೆ ಹಳದಿ ಎಲೆರೋಗ ? |

Share

ರಾಜ್ಯದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಹಳದಿ ಎಲೆ ರೋಗವು ಈಗ ನೆರೆಯ ಕಾಸರಗೋಡು ಜಿಲ್ಲೆಯಲ್ಲೂ ಕಾಣಿಸಿಕೊಂಡಿದೆಯೇ ಎಂಬ ಆತಂಕ ಅಲ್ಲಿನ ಕೃಷಿಕರನ್ನು ಕಾಡುತ್ತಿದೆ. ಕುಂಬಳೆ ಸಮೀಪದ ಕೃಷಿಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸುಳ್ಯ ,ಪುತ್ತೂರು ತಾಲೂಕಿನ ಅಡಿಕೆ ತೋಟಗಳನ್ನು ಆಕ್ರಮಿಸಿಕೊಂಡ ಅಡಿಕೆಯ ಹಳದಿ ಎಲೆ ರೋಗ ಇದೀಗ ಕಾಸರಗೋಡು ತಾಲೂಕಿನ ತೋಟಗಳಿಗೂ ವ್ಯಾಪಿಸಿದೆಯೇ ಎಂಬ ಸಂದೇಹ ಉಂಟಾಗಿದೆ.ಕಾಸರಗೋಡು ತಾಲೂಕಿನ ಅಡೂರು,ಕುಂಬಳೆ ,ಮಧೂರು ಪ್ರದೇಶಗಳ ಕೆಲವು ತೋಟಗಳಲ್ಲಿ ಅಡಿಕೆ ಸೋಗೆ ಹಳದಿಯಾಗಿರುವುದನ್ನು ಸರಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು  ಕೃಷಿಕರು ಆತಂಕ ಪಡುತ್ತಿದ್ದಾರೆ.

ಕುಂಬಳೆ ಸಮೀಪದ ಎಡನಾಡು ಬಳಿಯ ಕೃಷಿಕರೊಬ್ಬರ ತೋಟದಲ್ಲಿ ಕಳೆದ ಕೆಲವು ಸಮಯಗಳಿಂದ ಅಡಿಕೆ ಮರದ ಸೋಗೆ ಹಳದಿಯಾಗಿತ್ತು. ಇದಕ್ಕೆ ವಿಜ್ಞಾನಿಗಳ ಸಲಹೆ ಪಡೆದು ಸೂಕ್ಷ್ಮಪೋಷಕಾಂಶಗಳನ್ನು ಬಳಕೆ ಮಾಡಿದ್ದಾರೆ. ಅದರ ಜೊತೆಗೆ ಮೆಗ್ನೀಷಿಯಂ ಸಲ್ಫೇಟ್ ಮತ್ತು ಡೊಲೋಮೈಟ್ ಕೂಡಾ ಬಳಕೆ ಮಾಡಿದ್ದಾರೆ. ಅದಾದ ಬಳಿಕ ಅಡಿಕೆ ಮರದ ಸೋಗೆ ಹಸಿರಾದರೂ ಇದೀಗ ಮತ್ತೆ ಹಳದಿ ಆಗುವುದಕ್ಕೆ ಕಾರಣವೇನು ಎಂದು ತಿಳಿದಿಲ್ಲ ಎನ್ನುತ್ತಾರೆ ಸ್ಥಳೀಯ ಕೃಷಿಕರು. ಕೆಲವು ಬಾರಿ ಅಡಿಕೆ ಮರದ ಸೋಗೆ ಹಳದಿಯಾಗುವುದಕ್ಕೆ ಹಳದಿ ಎಲೆರೋಗವೇ ಕಾರಣ ಆಗಿರುವುದಿಲ್ಲ. ಪೋಷಕಾಂಶಗಳ ಕೊರತೆಯೂ ಕಾರಣವಾಗಿರುತ್ತದೆ.ಮೆಗ್ನೀಷಿಯಂ ಕೊರತೆ ಲಕ್ಷಣವೂ ಹಳದಿ ಎಲೆರೋಗದ ಲಕ್ಷಣಗಳೂ ಹೆಚ್ಚೂ ಕಡಿಮೆ ಒಂದೇ ರೀತಿ ಇರುತ್ತದೆ. ಹೀಗಾಗಿ ಸೋಗೆ ಹಳದಿಯಾದ ತಕ್ಷಣವೇ ಹಳದಿ ಎಲೆರೋಗ ಎಂದು ಕೃಷಿಕರು ಭಾವಿಸಬೇಕಾಗಿಲ್ಲ ಎಂದು ಈ ಹಿಂದೆ ವಿಜ್ಞಾನಿಗಳು ಹೇಳಿದ್ದರು. ಆದರೆ ಕಾಸರಗೋಡಿನ ಕುಂಬಳೆಯ  ಎಡನಾಡಿನ ಈ ಪ್ರದೇಶದಲ್ಲಿ ಮತ್ತೆ ಹಳದಿಯಾಗಿರುವುದು  ಈಗ ಕೃಷಿಕರ ಆತಂಕಕ್ಕೆ ಕಾರಣ.

ಅಡಿಕೆ ಹಳದಿ ಎಲೆರೋಗವು ದ ಕ ಜಿಲ್ಲೆ ಮಾತ್ರವಲ್ಲ ಶೃಂಗೇರಿ, ಕೊಪ್ಪ ಮೊದಲಾದ ಕಡೆಗಳಲ್ಲಿ ಕಂಡುಬಂದಿತ್ತು. ಕೇರಳದಲ್ಲಿ ಆರಂಭವಾದ ಈ ರೋಗವು ವ್ಯಾಪಕವಾಗಿತ್ತು. ಈಗ ಸಂಪಾಜೆ ಸೇರಿದಂತೆ ದ ಕ ಜಿಲ್ಲೆಯ ಹಲವು ಕಡೆ ವ್ಯಾಪಿಸಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪ್ರದೇಶದಲ್ಲಿ ಅಡಿಕೆ ಸೋಗೆ ಏಕೆ  ಹಳದಿಯಾಗುತ್ತಿದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸುವುದು  ಅಗತ್ಯವಿದೆ.
ರಮೇಶ್‌ ದೇಲಂಪಾಡಿ, ಕೃಷಿಕರು, ಮರ್ಕಂಜ, ಸುಳ್ಯ

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

7 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

15 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago