Advertisement
MIRROR FOCUS

ಕಾಸರಗೋಡಿಗೂ ಕಾಲಿಟ್ಟಿತೇ ಅಡಿಕೆ ಹಳದಿ ಎಲೆರೋಗ ? |

Share

ರಾಜ್ಯದ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಹಳದಿ ಎಲೆ ರೋಗವು ಈಗ ನೆರೆಯ ಕಾಸರಗೋಡು ಜಿಲ್ಲೆಯಲ್ಲೂ ಕಾಣಿಸಿಕೊಂಡಿದೆಯೇ ಎಂಬ ಆತಂಕ ಅಲ್ಲಿನ ಕೃಷಿಕರನ್ನು ಕಾಡುತ್ತಿದೆ. ಕುಂಬಳೆ ಸಮೀಪದ ಕೃಷಿಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಸುಳ್ಯ ,ಪುತ್ತೂರು ತಾಲೂಕಿನ ಅಡಿಕೆ ತೋಟಗಳನ್ನು ಆಕ್ರಮಿಸಿಕೊಂಡ ಅಡಿಕೆಯ ಹಳದಿ ಎಲೆ ರೋಗ ಇದೀಗ ಕಾಸರಗೋಡು ತಾಲೂಕಿನ ತೋಟಗಳಿಗೂ ವ್ಯಾಪಿಸಿದೆಯೇ ಎಂಬ ಸಂದೇಹ ಉಂಟಾಗಿದೆ.ಕಾಸರಗೋಡು ತಾಲೂಕಿನ ಅಡೂರು,ಕುಂಬಳೆ ,ಮಧೂರು ಪ್ರದೇಶಗಳ ಕೆಲವು ತೋಟಗಳಲ್ಲಿ ಅಡಿಕೆ ಸೋಗೆ ಹಳದಿಯಾಗಿರುವುದನ್ನು ಸರಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು  ಕೃಷಿಕರು ಆತಂಕ ಪಡುತ್ತಿದ್ದಾರೆ.

Advertisement

ಕುಂಬಳೆ ಸಮೀಪದ ಎಡನಾಡು ಬಳಿಯ ಕೃಷಿಕರೊಬ್ಬರ ತೋಟದಲ್ಲಿ ಕಳೆದ ಕೆಲವು ಸಮಯಗಳಿಂದ ಅಡಿಕೆ ಮರದ ಸೋಗೆ ಹಳದಿಯಾಗಿತ್ತು. ಇದಕ್ಕೆ ವಿಜ್ಞಾನಿಗಳ ಸಲಹೆ ಪಡೆದು ಸೂಕ್ಷ್ಮಪೋಷಕಾಂಶಗಳನ್ನು ಬಳಕೆ ಮಾಡಿದ್ದಾರೆ. ಅದರ ಜೊತೆಗೆ ಮೆಗ್ನೀಷಿಯಂ ಸಲ್ಫೇಟ್ ಮತ್ತು ಡೊಲೋಮೈಟ್ ಕೂಡಾ ಬಳಕೆ ಮಾಡಿದ್ದಾರೆ. ಅದಾದ ಬಳಿಕ ಅಡಿಕೆ ಮರದ ಸೋಗೆ ಹಸಿರಾದರೂ ಇದೀಗ ಮತ್ತೆ ಹಳದಿ ಆಗುವುದಕ್ಕೆ ಕಾರಣವೇನು ಎಂದು ತಿಳಿದಿಲ್ಲ ಎನ್ನುತ್ತಾರೆ ಸ್ಥಳೀಯ ಕೃಷಿಕರು. ಕೆಲವು ಬಾರಿ ಅಡಿಕೆ ಮರದ ಸೋಗೆ ಹಳದಿಯಾಗುವುದಕ್ಕೆ ಹಳದಿ ಎಲೆರೋಗವೇ ಕಾರಣ ಆಗಿರುವುದಿಲ್ಲ. ಪೋಷಕಾಂಶಗಳ ಕೊರತೆಯೂ ಕಾರಣವಾಗಿರುತ್ತದೆ.ಮೆಗ್ನೀಷಿಯಂ ಕೊರತೆ ಲಕ್ಷಣವೂ ಹಳದಿ ಎಲೆರೋಗದ ಲಕ್ಷಣಗಳೂ ಹೆಚ್ಚೂ ಕಡಿಮೆ ಒಂದೇ ರೀತಿ ಇರುತ್ತದೆ. ಹೀಗಾಗಿ ಸೋಗೆ ಹಳದಿಯಾದ ತಕ್ಷಣವೇ ಹಳದಿ ಎಲೆರೋಗ ಎಂದು ಕೃಷಿಕರು ಭಾವಿಸಬೇಕಾಗಿಲ್ಲ ಎಂದು ಈ ಹಿಂದೆ ವಿಜ್ಞಾನಿಗಳು ಹೇಳಿದ್ದರು. ಆದರೆ ಕಾಸರಗೋಡಿನ ಕುಂಬಳೆಯ  ಎಡನಾಡಿನ ಈ ಪ್ರದೇಶದಲ್ಲಿ ಮತ್ತೆ ಹಳದಿಯಾಗಿರುವುದು  ಈಗ ಕೃಷಿಕರ ಆತಂಕಕ್ಕೆ ಕಾರಣ.

ಅಡಿಕೆ ಹಳದಿ ಎಲೆರೋಗವು ದ ಕ ಜಿಲ್ಲೆ ಮಾತ್ರವಲ್ಲ ಶೃಂಗೇರಿ, ಕೊಪ್ಪ ಮೊದಲಾದ ಕಡೆಗಳಲ್ಲಿ ಕಂಡುಬಂದಿತ್ತು. ಕೇರಳದಲ್ಲಿ ಆರಂಭವಾದ ಈ ರೋಗವು ವ್ಯಾಪಕವಾಗಿತ್ತು. ಈಗ ಸಂಪಾಜೆ ಸೇರಿದಂತೆ ದ ಕ ಜಿಲ್ಲೆಯ ಹಲವು ಕಡೆ ವ್ಯಾಪಿಸಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಪ್ರದೇಶದಲ್ಲಿ ಅಡಿಕೆ ಸೋಗೆ ಏಕೆ  ಹಳದಿಯಾಗುತ್ತಿದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸುವುದು  ಅಗತ್ಯವಿದೆ.
ರಮೇಶ್‌ ದೇಲಂಪಾಡಿ, ಕೃಷಿಕರು, ಮರ್ಕಂಜ, ಸುಳ್ಯ
Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago