Advertisement
MIRROR FOCUS

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

Share

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ ವಿಭಾಗದ ಆಸ್ಪತ್ರೆಯು ಐದು ದಿನಗಳಲ್ಲಿ 700 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಿದೆ, ಹಲವಾರು ಶಸ್ತ್ರಚಿಕಿತ್ಸೆಗಳು ಮತ್ತುಆರೋಗ್ಯ ಪರೀಕ್ಷೆಗಳನ್ನು ನಡೆಸಿದೆ. ಶನಿವಾರದವರೆಗೆ ಆಸ್ಪತ್ರೆಯು  716 ರೋಗಿಗಳಿಗೆ ಚಿಕಿತ್ಸೆ ನೀಡಿದೆ.……..ಮುಂದೆ ಓದಿ…..

ಸವಾಲಿನ ಪರಿಸ್ಥಿತಿಗಳ ನಡುವೆಯೂ, ಸೇನಾ ಆಸ್ಪತ್ರೆಯು 51 ಹೊಸ ರೋಗಿಗಳನ್ನು ದಾಖಲಿಸಿಕೊಂಡಿತು, 14 ಮಂದಿ ಚಿಕಿತ್ಸೆಯ ನಂತರ ಬಿಡುಗಡೆಯಾದರು. ವೈದ್ಯಕೀಯ ತಂಡವು ಇಂದು 38 ಸಣ್ಣ ಶಸ್ತ್ರಚಿಕಿತ್ಸೆಗಳು ಮತ್ತು 5 ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಿತು. ಶಸ್ತ್ರಚಿಕಿತ್ಸಾ ವಿಧಾನಗಳ ಜೊತೆಗೆ, ಆಸ್ಪತ್ರೆಯು 715 ಪ್ರಯೋಗಾಲಯದ ಪರೀಕ್ಷೆಗಳು ಮತ್ತು 65 ಎಕ್ಸ್-ರೇ ಗಳನ್ನು ನಡೆಸಿತು. ಹೀಗೆ ಎಲ್ಲಾ ವಿಧದಲ್ಲೂ ಸೇನೆಯು ಸೇವಾ ಕೆಲಸವನ್ನು ನಡೆಸಿದೆ. ಹೀಗಾಗಿ ಭಾರತೀಯ ಸೇನೆಯ ವೈದ್ಯಕೀಯ ತಂಡವು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ.

ಈ ನಡುವೆ  ಭಾರತದಿಂದ  ಶನಿವಾರ ಮ್ಯಾನ್ಮಾರ್‌ನ ತಿಲಾವಾ ಬಂದರಿಗೆ  ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಮತ್ತು ಬಿಸ್ಕೆಟ್ ಸೇರಿದಂತೆ 442 ಟನ್ ತೂಕದ ಆಹಾರ ವಸ್ತುವನ್ನು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿ ಅಭಯ್ ಠಾಕೂರ್ ಹಸ್ತಾಂತರಿಸಿದರು.

The Indian Army Field Hospital has set new standards in medical relief operations, treating over 700 victims in just five days. As of April 5, the hospital has attended to 716 patients, including 173 in the last 24 hours.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

4 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

5 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

11 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

12 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

14 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

15 hours ago