Advertisement
ಸುದ್ದಿಗಳು

ಧನ್ವಂತರಿ ಜಯಂತಿ | ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ | ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ |

Share

ಬದುಕಿನಲ್ಲಿ ಎಲ್ಲವನ್ನೂ  ಸಮತೋಲನದಲ್ಲಿಟ್ಟುಕೊಂಡಾಗ ಮೋಕ್ಷಕ್ಕೆ ದಾರಿ. ಧರ್ಮವನ್ನು ಅನುಸರಿಸಿಕೊಂಡು ಅರ್ಥ ಕಾಮಗಳು ಇರಬೇಕಾಗುತ್ತದೆ.  ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ ಎಂದು ಆಯುರ್ವೇದದಲ್ಲಿ  ಉಲ್ಲೇಖವಾಗಿದೆ ಎಂದು ಆರೋಗ್ಯ ಭಾರತಿಯ ಜಿಲ್ಲಾ ಉಪಾಧ್ಯಕ್ಷ, ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ತಜ್ಞ ವೈದ್ಯ,  ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ  ಹೇಳಿದರು.

ಅವರು ಪುತ್ತೂರು ಜಿಲ್ಲೆಯ ಆರೋಗ್ಯ ಭಾರತಿಯ ವತಿಯಿಂದ ಸುಳ್ಯ ತಾಲೂಕಿನ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ನಡೆದ ಧನ್ವಂತರಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮನುಷ್ಯನ ಅಹಂ  ತ್ಯಜಿಸುವುದರಿಂದ ದೇವರನ್ನು ತನ್ನೊಳಗೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ನಾನು ಭಾರಿ ಸೇವೆ ಮಾಡಿದ್ದೇನೆ, ನಾನು ಭಾರಿ ಒಳ್ಳೆ ಜನ ಎನ್ನುವುದು ಕೂಡ ಒಂದು ರೀತಿಯ ಅಹಂಕಾರಗಳು. ಇದನ್ನು ಸುತ್ತಮುತ್ತಲಿನ ಪರಿಸರದಲ್ಲಿ ನಾವು ದಿನನಿತ್ಯ ಕಾಣುತ್ತಿರುತ್ತೇವೆ. ಆದರೆ ಈ ರೀತಿಯ ಮನೋಧರ್ಮಗಳು ನಮ್ಮ ನರಮಂಡಲಕ್ಕೆ ಹೊತ್ತುಕೊಳ್ಳುವುದಕ್ಕೆ ಭಾರ. ಭಗವಂತನ ಭಕ್ತಿಯ ಸ್ಪರ್ಶವಿಲ್ಲದ ಸೇವೆಯೂ ಕೂಡ ಕೇವಲ ಅಹಂಕಾರವನ್ನು ಪುಷ್ಟಿಗೊಳಿಸುವ ಸಂಗತಿ ಆಗುತ್ತದೆ, ನೀರಿನ ಸ್ಪರ್ಶವಿಲ್ಲದ ಸಾಬೂನಿನಂತೆ ನೊರೆಯು ಇಲ್ಲ, ಸುಗಂಧವು ಇಲ್ಲ.ಅಹಂಕಾರದಿಂದ ಕೋಪ ಪ್ರಕಟಗೊಳ್ಳುತ್ತದೆ ಮತ್ತು ಅದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು  ಹೇಳಿದರು.

ತುಳಸಿಯ ನೀರನ್ನು ನಿತ್ಯವೂ ಸೇವಿಸುವುದರಿಂದ ಆರೋಗ್ಯದಿಂದಿರಬಹುದು ಮತ್ತು ಹೃದಯದ ರೋಗ ಬರದಂತೆ ತಡೆಗಟ್ಟಬಹುದು.ಜೀವನ ನಡೆಸುವ ಕ್ರಮದ ಬಗ್ಗೆ ಒತ್ತು ನೀಡಿದರು.

ವಳಲಂಬೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಬೆಳ್ಯಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಭಾರತೀಯ ಜಿಲ್ಲಾ ಕಾರ್ಯದರ್ಶಿ ಗಣೇಶ್ ಭಟ್ ಮುವ್ವಾರು ಆರೋಗ್ಯ ಭಾರತೀಯ ಕಾರ್ಯವೈಖರಿ ಹಾಗೂ ಉದ್ದೇಶ ವಿವರಿಸಿದರು. ಕಿಶೋರ್ ಕುಮಾರ್ ಪೈಕ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

30 minutes ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

5 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

9 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago