Advertisement
ಸುದ್ದಿಗಳು

ಧನ್ವಂತರಿ ಜಯಂತಿ | ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ | ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ |

Share

ಬದುಕಿನಲ್ಲಿ ಎಲ್ಲವನ್ನೂ  ಸಮತೋಲನದಲ್ಲಿಟ್ಟುಕೊಂಡಾಗ ಮೋಕ್ಷಕ್ಕೆ ದಾರಿ. ಧರ್ಮವನ್ನು ಅನುಸರಿಸಿಕೊಂಡು ಅರ್ಥ ಕಾಮಗಳು ಇರಬೇಕಾಗುತ್ತದೆ.  ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ ಎಂದು ಆಯುರ್ವೇದದಲ್ಲಿ  ಉಲ್ಲೇಖವಾಗಿದೆ ಎಂದು ಆರೋಗ್ಯ ಭಾರತಿಯ ಜಿಲ್ಲಾ ಉಪಾಧ್ಯಕ್ಷ, ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ತಜ್ಞ ವೈದ್ಯ,  ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ  ಹೇಳಿದರು.

ಅವರು ಪುತ್ತೂರು ಜಿಲ್ಲೆಯ ಆರೋಗ್ಯ ಭಾರತಿಯ ವತಿಯಿಂದ ಸುಳ್ಯ ತಾಲೂಕಿನ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ನಡೆದ ಧನ್ವಂತರಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮನುಷ್ಯನ ಅಹಂ  ತ್ಯಜಿಸುವುದರಿಂದ ದೇವರನ್ನು ತನ್ನೊಳಗೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ನಾನು ಭಾರಿ ಸೇವೆ ಮಾಡಿದ್ದೇನೆ, ನಾನು ಭಾರಿ ಒಳ್ಳೆ ಜನ ಎನ್ನುವುದು ಕೂಡ ಒಂದು ರೀತಿಯ ಅಹಂಕಾರಗಳು. ಇದನ್ನು ಸುತ್ತಮುತ್ತಲಿನ ಪರಿಸರದಲ್ಲಿ ನಾವು ದಿನನಿತ್ಯ ಕಾಣುತ್ತಿರುತ್ತೇವೆ. ಆದರೆ ಈ ರೀತಿಯ ಮನೋಧರ್ಮಗಳು ನಮ್ಮ ನರಮಂಡಲಕ್ಕೆ ಹೊತ್ತುಕೊಳ್ಳುವುದಕ್ಕೆ ಭಾರ. ಭಗವಂತನ ಭಕ್ತಿಯ ಸ್ಪರ್ಶವಿಲ್ಲದ ಸೇವೆಯೂ ಕೂಡ ಕೇವಲ ಅಹಂಕಾರವನ್ನು ಪುಷ್ಟಿಗೊಳಿಸುವ ಸಂಗತಿ ಆಗುತ್ತದೆ, ನೀರಿನ ಸ್ಪರ್ಶವಿಲ್ಲದ ಸಾಬೂನಿನಂತೆ ನೊರೆಯು ಇಲ್ಲ, ಸುಗಂಧವು ಇಲ್ಲ.ಅಹಂಕಾರದಿಂದ ಕೋಪ ಪ್ರಕಟಗೊಳ್ಳುತ್ತದೆ ಮತ್ತು ಅದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು  ಹೇಳಿದರು.

Advertisement

ತುಳಸಿಯ ನೀರನ್ನು ನಿತ್ಯವೂ ಸೇವಿಸುವುದರಿಂದ ಆರೋಗ್ಯದಿಂದಿರಬಹುದು ಮತ್ತು ಹೃದಯದ ರೋಗ ಬರದಂತೆ ತಡೆಗಟ್ಟಬಹುದು.ಜೀವನ ನಡೆಸುವ ಕ್ರಮದ ಬಗ್ಗೆ ಒತ್ತು ನೀಡಿದರು.

ವಳಲಂಬೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಬೆಳ್ಯಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಭಾರತೀಯ ಜಿಲ್ಲಾ ಕಾರ್ಯದರ್ಶಿ ಗಣೇಶ್ ಭಟ್ ಮುವ್ವಾರು ಆರೋಗ್ಯ ಭಾರತೀಯ ಕಾರ್ಯವೈಖರಿ ಹಾಗೂ ಉದ್ದೇಶ ವಿವರಿಸಿದರು. ಕಿಶೋರ್ ಕುಮಾರ್ ಪೈಕ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

5 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

5 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

5 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

2 days ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

2 days ago