Advertisement
ಸುದ್ದಿಗಳು

ಧನ್ವಂತರಿ ಜಯಂತಿ | ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ | ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ |

Share

ಬದುಕಿನಲ್ಲಿ ಎಲ್ಲವನ್ನೂ  ಸಮತೋಲನದಲ್ಲಿಟ್ಟುಕೊಂಡಾಗ ಮೋಕ್ಷಕ್ಕೆ ದಾರಿ. ಧರ್ಮವನ್ನು ಅನುಸರಿಸಿಕೊಂಡು ಅರ್ಥ ಕಾಮಗಳು ಇರಬೇಕಾಗುತ್ತದೆ.  ಉಪಾಸನೆಯೂ ಕೂಡ ಆಯುರ್ವೇದ ಚಿಕಿತ್ಸೆಯ ಒಂದು ಭಾಗ ಎಂದು ಆಯುರ್ವೇದದಲ್ಲಿ  ಉಲ್ಲೇಖವಾಗಿದೆ ಎಂದು ಆರೋಗ್ಯ ಭಾರತಿಯ ಜಿಲ್ಲಾ ಉಪಾಧ್ಯಕ್ಷ, ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ತಜ್ಞ ವೈದ್ಯ,  ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ  ಹೇಳಿದರು.

Advertisement
Advertisement

ಅವರು ಪುತ್ತೂರು ಜಿಲ್ಲೆಯ ಆರೋಗ್ಯ ಭಾರತಿಯ ವತಿಯಿಂದ ಸುಳ್ಯ ತಾಲೂಕಿನ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ನಡೆದ ಧನ್ವಂತರಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮನುಷ್ಯನ ಅಹಂ  ತ್ಯಜಿಸುವುದರಿಂದ ದೇವರನ್ನು ತನ್ನೊಳಗೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ನಾನು ಭಾರಿ ಸೇವೆ ಮಾಡಿದ್ದೇನೆ, ನಾನು ಭಾರಿ ಒಳ್ಳೆ ಜನ ಎನ್ನುವುದು ಕೂಡ ಒಂದು ರೀತಿಯ ಅಹಂಕಾರಗಳು. ಇದನ್ನು ಸುತ್ತಮುತ್ತಲಿನ ಪರಿಸರದಲ್ಲಿ ನಾವು ದಿನನಿತ್ಯ ಕಾಣುತ್ತಿರುತ್ತೇವೆ. ಆದರೆ ಈ ರೀತಿಯ ಮನೋಧರ್ಮಗಳು ನಮ್ಮ ನರಮಂಡಲಕ್ಕೆ ಹೊತ್ತುಕೊಳ್ಳುವುದಕ್ಕೆ ಭಾರ. ಭಗವಂತನ ಭಕ್ತಿಯ ಸ್ಪರ್ಶವಿಲ್ಲದ ಸೇವೆಯೂ ಕೂಡ ಕೇವಲ ಅಹಂಕಾರವನ್ನು ಪುಷ್ಟಿಗೊಳಿಸುವ ಸಂಗತಿ ಆಗುತ್ತದೆ, ನೀರಿನ ಸ್ಪರ್ಶವಿಲ್ಲದ ಸಾಬೂನಿನಂತೆ ನೊರೆಯು ಇಲ್ಲ, ಸುಗಂಧವು ಇಲ್ಲ.ಅಹಂಕಾರದಿಂದ ಕೋಪ ಪ್ರಕಟಗೊಳ್ಳುತ್ತದೆ ಮತ್ತು ಅದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದು  ಹೇಳಿದರು.

Advertisement

ತುಳಸಿಯ ನೀರನ್ನು ನಿತ್ಯವೂ ಸೇವಿಸುವುದರಿಂದ ಆರೋಗ್ಯದಿಂದಿರಬಹುದು ಮತ್ತು ಹೃದಯದ ರೋಗ ಬರದಂತೆ ತಡೆಗಟ್ಟಬಹುದು.ಜೀವನ ನಡೆಸುವ ಕ್ರಮದ ಬಗ್ಗೆ ಒತ್ತು ನೀಡಿದರು.

ವಳಲಂಬೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ  ಬೆಳ್ಯಪ್ಪಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಭಾರತೀಯ ಜಿಲ್ಲಾ ಕಾರ್ಯದರ್ಶಿ ಗಣೇಶ್ ಭಟ್ ಮುವ್ವಾರು ಆರೋಗ್ಯ ಭಾರತೀಯ ಕಾರ್ಯವೈಖರಿ ಹಾಗೂ ಉದ್ದೇಶ ವಿವರಿಸಿದರು. ಕಿಶೋರ್ ಕುಮಾರ್ ಪೈಕ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

14 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

16 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago