ಕೊರೋನಾ ಹೆಚ್ಚಳ | ಮೇ.15 ವರೆಗೆ ಕ್ಯಾಂಪ್ಕೋದಿಂದ ಅಡಿಕೆ ಖರೀದಿ ಇಲ್ಲ | ಅಡಿಕೆ ಮಾರುಕಟ್ಟೆ ಬಗ್ಗೆ ಆತಂಕ ಬೇಕಾಗಿಲ್ಲ – ಬೆಳೆಗಾರರಿಗೆ ಕ್ಯಾಂಪ್ಕೋ ಭರವಸೆ|

May 10, 2021
10:25 PM

ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ಕ್ಯಾಂಪ್ಕೋ ವತಿಯಿಂದ ಮೇ.11  ರಿಂದ ಮೇ.15  ರವರೆಗೆ ತಾತ್ಕಾಲಿಕವಾಗಿ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಡ್ಗಿ ತಿಳಿಸಿದ್ದಾರೆ. ಆದರೆ ಅಡಿಕೆ ಮಾರುಕಟ್ಟೆ ಯಾವುದೇ ಬೆಳೆಗಾರರು ಆತಂಕ ಪಡಬೇಕಾಗಿಲ್ಲ ಎಂದು ಭರವಸೆ ನೀಡಿದ್ದಾರೆ.

ಕರ್ನಾಟಕ ಹಾಗೂ ಕೇರಳದಲ್ಲಿ ಕೊರೋನಾ ಪಾಸಿಟಿವ್‌ ಪ್ರಕರಣ ಹೆಚ್ಚುತ್ತಿದ್ದು ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರಗಳ ಕಠಿಣ ನಿಯಮ ಪಾಲನೆ ಹಾಗೂ ಪ್ರಸ್ತುತ ಪರಿಸ್ಥಿತಿಯಲ್ಲಿ ಸದಸ್ಯರ ಮತ್ತು ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ರೋಗ ಹರಡುವಿಕೆಯ ನಿಯಂತ್ರಣಕ್ಕಾಗಿ ಸರಕಾರಗಳ ಪ್ರಯತ್ನವನ್ನು ಬೆಂಬಲಿಸಿ ಮೇ.11 ರಿಂದ 15 ರ ವರೆಗೆ ಕೇರಳ ಹಾಗೂ ಕರ್ನಾಟಕದಲ್ಲಿ  ಸಂಸ್ಥೆಯ ಯಾವುದೇ ಶಾಖೆಗಳಲ್ಲಿ ಸರಕು ಖರೀದಿ ಸಹಿತ ಯಾವುದೇ ವಹಿವಾಟುಗಳು ನಡೆಯುವುದಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ. ಈ ಹಿಂದೆ ಕೆಲವು ನಿಯಮಗಳೊಂದಿಗೆ ಖರೀದಿ ನಡೆಸುತ್ತಿತ್ತು. ಈಗಿನ ಅನಿವಾರ್ಯ ಪರಿಸ್ಥಿತಿಯಲ್ಲಿ ಖರೀದಿ ಸಾಧ್ಯವಾಗುತ್ತಿಲ್ಲ. ಆದರೆ ಇದುವರೆಗಿನ ಅಧ್ಯಯನದ ಪ್ರಕಾರ ಅಡಿಕೆಗೆ ಬೇಡಿಕೆ ಹೆಚ್ಚುತ್ತಿದೆ. ಅಡಿಕೆ ಮಾರುಕಟ್ಟೆ ಯಾವುದೇ ಕಾರಣಕ್ಕೂ ಅಸ್ಥಿರವಾಗುವುದಿಲ್ಲ, ಅಸ್ಥಿರಗೊಳಿಸಲೂ ಬಿಡುವುದಿಲ್ಲ. ಬೆಳೆಗಾರರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ಸರಕಾರದ ನಡೆಗಳ ಅನುಸಾರ ಖರೀದಿ ಪ್ರಕ್ರಿಯೆಯನ್ನು ಪುನರಾರಂಭಿಸುವ ಎಲ್ಲ ಪ್ರಯತ್ನಗಳನ್ನು ಸಂಸ್ಥೆಯು ಮಾಡಲಿದೆ ಮತ್ತು ಮುಂದಿನ ದಿನಗಳಲ್ಲಿ  ಸದಸ್ಯರಿಗೆ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡುವ ಬಗ್ಗೆ ಸಂಸ್ಥೆಯ ಆಡಳಿತಮಂಡಳಿ ತೀರ್ಮಾನಗಳನ್ನು ತೆಗೆದುಕೊಳ್ಳಲಿದೆ ಎಂದು ಕಿಶೋರ್‌ ಕುಮಾರ್‌ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್‌  ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ 11,000 ಕಿ.ಮೀ ಕರಾವಳಿ ಅಪಾಯದ ಅಂಚಿನಲ್ಲಿ – ಮುಂದಿನ 15 ವರ್ಷ ಕರಾವಳಿ ಕರ್ನಾಟಕಕ್ಕೆ ನಿರ್ಣಾಯಕ | ಹೊಸ ಹವಾಮಾನ ವರದಿ ಎಚ್ಚರಿಕೆ
May 31, 2026
7:16 AM
by: ದ ರೂರಲ್ ಮಿರರ್.ಕಾಂ
‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?
May 31, 2026
6:55 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಕರಕುಶಲ ಗ್ರಾಮಗಳಿಗೆ ಹೊಸ ಜೀವ ತುಂಬುತ್ತಿರುವ ಪ್ರವಾಸೋದ್ಯಮ – ವಿಯೆಟ್ನಾಂ ಮಾದರಿ ಗಮನ ಸೆಳೆಯುತ್ತಿದೆ
May 31, 2026
6:46 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂ ಅಭಿವೃದ್ಧಿಗೆ ₹339 ಕೋಟಿ ಹೂಡಿಕೆ – ಕೃಷಿ, ಪ್ರವಾಸೋದ್ಯಮ, ರಸ್ತೆ ಸಂಪರ್ಕಕ್ಕೆ ಉತ್ತೇಜನ
May 31, 2026
6:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror