Advertisement
MIRROR FOCUS

ಅಡಿಕೆಯ ಧಾರಣೆಯ ಆಟ ಇನ್ನು ಶುರು | ಏರಿಕೆ-ಇಳಿಕೆಯ ನಡುವೆ ಅಸ್ಸಾಂನಲ್ಲಿ ಮತ್ತೆ ತಡೆಯಾಯ್ತು 370 ಚೀಲ ಆಮದು ಅಡಿಕೆ |

Share
ಅಡಿಕೆ ಏರಿಕೆ-ಇಳಿಕೆಯ ಆಟ ಮತ್ತೆ ಅರಂಭವಾಗುತ್ತಿದೆ. ಅಡಿಕೆ ಬೆಳೆಗಾರರು ಅಧೀರರಾಗಬೇಕಾದ್ದಿಲ್ಲ. ಮಾರುಕಟ್ಟೆಯಲ್ಲಿ ಅಡಿಕೆಯ ಕೊರತೆ ಇದೆ. ಸದ್ಯ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಈ ಧಾರಣೆ ತಿಂಗಳೊಳಗೆ 500  ರೂಪಾಯಿ ಆಸುಪಾಸಿಗೆ ಬಂದು ನಿಲ್ಲುತ್ತದೆ. ಈ ನಡುವೆಯೇ ಅಸ್ಸಾಂ ಮೂಲಕ ಭಾರತದೊಳಕ್ಕೆ ಬಂದ ಆಮದು ಅಡಿಕೆಯನ್ನು ಅಸ್ಸಾಂ ಗಡಿಭದ್ರತಾ ಪಡೆ ವಿಜೋರಾಂನಲ್ಲಿ ವಶಪಡಿಸಿಕೊಂಡಿದೆ.

ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ  ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370  ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.

Advertisement
Advertisement

ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

7 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago