ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370 ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.
ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ…