ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370 ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.
ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…