ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370 ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.
ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…