Advertisement
MIRROR FOCUS

ಅಡಿಕೆಯ ಧಾರಣೆಯ ಆಟ ಇನ್ನು ಶುರು | ಏರಿಕೆ-ಇಳಿಕೆಯ ನಡುವೆ ಅಸ್ಸಾಂನಲ್ಲಿ ಮತ್ತೆ ತಡೆಯಾಯ್ತು 370 ಚೀಲ ಆಮದು ಅಡಿಕೆ |

Share
ಅಡಿಕೆ ಏರಿಕೆ-ಇಳಿಕೆಯ ಆಟ ಮತ್ತೆ ಅರಂಭವಾಗುತ್ತಿದೆ. ಅಡಿಕೆ ಬೆಳೆಗಾರರು ಅಧೀರರಾಗಬೇಕಾದ್ದಿಲ್ಲ. ಮಾರುಕಟ್ಟೆಯಲ್ಲಿ ಅಡಿಕೆಯ ಕೊರತೆ ಇದೆ. ಸದ್ಯ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಈ ಧಾರಣೆ ತಿಂಗಳೊಳಗೆ 500  ರೂಪಾಯಿ ಆಸುಪಾಸಿಗೆ ಬಂದು ನಿಲ್ಲುತ್ತದೆ. ಈ ನಡುವೆಯೇ ಅಸ್ಸಾಂ ಮೂಲಕ ಭಾರತದೊಳಕ್ಕೆ ಬಂದ ಆಮದು ಅಡಿಕೆಯನ್ನು ಅಸ್ಸಾಂ ಗಡಿಭದ್ರತಾ ಪಡೆ ವಿಜೋರಾಂನಲ್ಲಿ ವಶಪಡಿಸಿಕೊಂಡಿದೆ.

ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ  ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370  ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.

ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

15 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

16 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

16 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

16 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

16 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

24 hours ago