Advertisement
MIRROR FOCUS

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

Share

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು. 

ಪ್ರದರ್ಶನದ ಮೂಲಕ ಕಲಾ ಪ್ರೇಮಿಗಳಿಗೆ ಹತ್ತಿರವಾಗಲು ಸಹಾಯಕವಾಗಿದ್ದು, ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ದೊರೆತಿದೆ ಎಂದು  ಕಲಾವಿದ ಶ್ರೀನಿವಾಸ್  ಸಂತಸ ವ್ಯಕ್ತ ಪಡಿಸಿದರು. ಚಿತ್ರಕಲಾ ಪರಿಷತ್ತು ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವ ಮೂಲಕ  ಪ್ರೋತ್ಸಾಹಿಸುತ್ತಿದ್ದು ಪ್ರದರ್ಶನದ ಮೂಲಕ ತಮ್ಮ ಕಲಾಕೃತಿಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗಿದೆ ಎಂದು ಕಲಾವಿದ ಕ್ರಿಸ್ಟೋಫರ್ ಹೇಳಿದರು.  ಪ್ರದರ್ಶನದಲ್ಲಿ ಐದು ಜನರ ಕಲಾವಿದರ ಕಲಾಕೃತಿಗಳನ್ನು ಆಯ್ಕೆ ಮಾಡಿ ಪ್ರದರ್ಶಿಸಲಾಗಿದೆ, ಕಲಾಕೃತಿಗಳ ಮೂಲಕ ಬದುಕಿನ ಸಂದೇಶವನ್ನು ತಿಳಿಸಲಾಗಿದೆ ಎಂದು  ಕಲಾವಿದರಾದ ಮೇಘನಾ ಚೌಹಾಣ್ ಹೇಳಿದ್ದಾರೆ.

ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

3 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago