ಹನ್ನೆರಡು ವರ್ಷದ ಪುಟ್ಟ ನಾಯಿ… ನಮ್ಮನೆ ನಾಯಿ… ಹೆಸರು ಮಂಜು…ಜೊತೆಗಾತಿಯೊಬ್ಬಳಿದ್ದಳು ಸಂಜು…ಹತ್ತು ವರ್ಷಕ್ಕೆ ಮಂಜುವನ್ನು ಬಿಟ್ಟು ಹೊಗೇ ಬಿಟ್ಲ್ಳು. ಇವಕ್ಕೆಲ್ಲ ಹಿರಿಯಕ್ಕ ಪುಟ್ಟ ಪ್ರೀತಿಯ ಲಾಲಿ…..
ಲಾಲಿಯ ನೇತೃತ್ವದ ಸಂಜು ಮಂಜುಗಳು ನಮ್ಮನೆ ಕಾವಲು ಪಡೆಯಾಗಿತ್ತು. ಲಾಲಿ ಕೂಡಾ,ತನ್ನ ಹದಿಮೂರನೇ ವರ್ಷಕ್ಕೆ ಬಿಟ್ಟೋಯ್ತು. ಈಗ ಮಂಜು ಏಕಾಂಗಿ… ಅವನಿಗೆ ಜೊತೆಯಾಗಿ ಬಂದವ ರಾಣ. ಅದ್ರೆ ರಾಣ ದಢೂತಿ ಜರ್ಮನ್ ಶೆಫರ್ಡ್, ಆದರೆ ಈ ಲಾಲಿ ತಂಡದ ಮಂಜು ಪುಟ್ಟ ಶರೀರದ ಡೇಶ್ ಹೌಂಡ್. ಮಂಜನಿಗೂ ರಾಣನಿಗೂ ಸೇರಿ ಬರೋದೇ ಇಲ್ಲ….ರಾಣ ಇವನನ್ನ ಆಟಕ್ಕೆ ಕರೆದರೆ ಗುರ್ರೆನ್ನುತ್ತಾನೆ ಮಂಜ….ಕಾರಣ ಮಂಜ ಹನ್ನೆರಡು ವರ್ಷದ ಅಜ್ಜ, ರಾಣ ಎಂಟು ತಿಂಗಳ ಪೋರ. ಮಂಜನ ಗುರ್ರೆಂಬ ಗದರುವಿಕೆಗೇ ರಾಣ ದೂರ ದೂರ…ಮಂಜನನ್ನು ಮುಟ್ಟವ ಸಾಹಸ ಇಂದಿನ ತನಕವೂ ಈ ರಾಣ ಮಾಡಿಲ್ಲ. ಕಾರಣ ಮಂಜನ ಹಿರಿತನ. ಈ ಮಂಜ ಇದ್ದಾನಲ್ಲಾ….ಈಗ್ಗೆ ,ಏಕಾಂಗಿಯಾದ ನಂತರ ನಮ್ಮೊಂದಿಗೆ ಹೆಚ್ಚೆಚ್ಚು ಒಡನಾಟ. ಮನೆಯ ಮೆಟ್ಟುಕಲ್ಲೇ ತನ್ನ ಸಿಂಹಾಸನ, ಪರಿವೀಕ್ಷಣಾ ಗೋಪುರ. ಈ ಲಾಲಿ ತಂಡ ಡೇಶ್ಹೋಂಡಗಳು ತುಂಬಾ ಸೂಕ್ಷ್ಮ ಮತಿಗಳು. ತನ್ನ ಗೂಡಿನಿಂದ ನೂರು ಮೀಟರ್ ದೂರದಲ್ಲಿರುವ ಗೇಟ್ ತೆಗೆದ ಶಬ್ದ ದಲ್ಲೇ ಮನೆಯವರೋ,ಅತಿಥಿಗಳೋ ಎಂದು ಗುರುತಿಸಿ,ಅದಕ್ಕೆ ತಕ್ಕಂತೆ ಬೊಗಳುವ ಸ್ವರ ವ್ಯತ್ಯಾಸದಲ್ಲಿ ಸಂಜ್ಞೆ ಕೊಡಬಲ್ಲವು. ನೊಡಲು ಚಿಕ್ಕದಾದರೂ ಕೀರ್ತಿ, ಶೌರ್ಯ ದೊಡ್ಡದು.ಹಿಡಿದ ಕೆಲಸ ಮುಗಿಸಿಯೇ ಬರುವ ಲಿಲಿಪುಟ್ ಗಳು. ಚಿಕ್ಕವೆಂದು ಕಡೆಗಣಿಸಲು ಅಸಾದ್ಯವಾದವು. ನಾವೊಂದು ಸುತ್ತು ತಿರುಗುವಾಗ ಅವು ಎಂಟು ಸುತ್ತು ತಿರುಗಿರುತ್ತವೆ.ಅಷ್ಟು ಚಾಣಾಕ್ಷಮತಿಗಳು ಈ ಪುಟ್ಟ ಕಾವಲುಪಡೆ. ಹೌದು..ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…