ಏಕೋಹಂ ಬಹುಸ್ಯಾಮಃ… ಸೃಷ್ಟಿಯ ಆದಿಯಲ್ಲಿ ದೇವನೊಬ್ಬನೇ, ಆದರೆ ತನ್ನ ಸಂಕಲ್ಪದಂತೆ ಬಹುವಾಗಿ ಪ್ರಕಟನಾದನಂತೆ,ಮತ್ತೆ ತಾನೇ ಶ್ರದ್ಧೆ, ಭಕ್ತಿ, ನಂಬಿಕೆ,ಆಚಾರ ಉತ್ಸವಗಳೆಂಬ ಸೂತ್ರದಾರದಲ್ಲಿ ಬಹುತ್ವವನ್ನು ಏಕತೆಯಲ್ಲಿ ಪೋಣಿಸಿದನಂತೆ.ಸರಳವಲ್ಲವೇ… ದೇವನೇ ಹಲವನಾದ ಮೇಲೆ ಈ ಹುಲುಮಾನವನೇನು. ತಾನೂ ತನ್ನತನದ ಅಹಂ ತ್ಯಜಿಸಿ ಸಮಾಜಪುರುಷನ ಮುಂದೆ ಲೀನವಾಗಬೇಕಲ್ಲವೇ…ಹೌದು…ಅದಕ್ಕ್ಕಾಗಿಯೇ ಆಚರಣೆಗಳು, ಹಬ್ಬ ಹರಿದಿನಗಳು, ಪೂಜೆ ಪುರಸ್ಕಾರಗಳು. ಅಂತೆಯೇ…
ಪ್ರೀತಿಯ ಸ್ವಾಗತ ಕೋರಿದ ಮನೆಮಂದಿ , ಭಾವಪೂರಿತರಾಗಿ, ನಿರ್ಮಲ ಮನದೊಂದಿಗೆ ಅಮ್ಮನ ಸೇವೆಯಲ್ಲಿ ನಿರತರಾಗಿದ್ದರು. ಸರಳವಾದ ವ್ಯವಸ್ಥೆಗಳು. ಭಕ್ತಿ ,ಪೂಜೆಗಳಿಗಷ್ಟೇ ಮೊದಲ ಸ್ಥಾನ. ಮನೆಯೊಳಗಣ ದೇವರ ಕೋಣೆಯಲ್ಲಿ ಮನೆ ಯಜಮಾನ ,ಹಿರಿಯರು, ಪೂಜಾರಿಗಳ ಉಪಸ್ಥಿತಿ. ಅಲಂಕಾರ ಪ್ರಿಯಳಾಗಿ ಗದ್ದಿಗೆಯೇರಿದ ಅಮ್ಮನಿಗೆ ತಮ್ಮದೇ ಆಚರಣಾ ಪದ್ದತಿಗಳಂತೆ ಅಲಂಕಾರ, ಚಿತ್ತಾರ ಹಾಗೂ ನೈವೇದ್ಯ ಪ್ರಸಾದಗಳ ಸಮರ್ಪಣೆ. ಆಹಾ ಏನು ವೈವಿಧ್ಯಮಯ ಆಚರಣೆಗಳು. ಅಮ್ಮನಿಗೆ, ಗುರುಸ್ಥಾನಕ್ಕೆ,ಪಿತೃಗಳಿಗೆ, ದೇವದೂತ ಸಾನ್ನಿಧ್ಯಗಳಿಗೆ,ವಿಶೇಷವಾಗಿ ,ಪದ್ದತಿಯಂತೆ ನೈವೇದ್ಯ, ಪ್ರಸಾದಗಳು.ಹೊರಗೆ ಭಜನಾ ಸೇವೆ.
ಭಜನಾ ಸೇವೆ ಎಂದಾಗ ಕಂಡುಬಂದದ್ದು ಭಜಕರ ತನ್ಮಯತೆ ಹಾಗೂ ಶುದ್ಧ ಚಿತ್ತ. ಭಕ್ತಿ, ಭಾವಗಳನ್ನೊಳಗೊಂಡ ಇಂಪಾದ, ಮನಕ್ಕೊಪ್ಪುವ ಶುದ್ಧ ಭಜನೆ. ಭಜಕರೆಲ್ಲರೂ ಒಬ್ಬರಿಗಿಂತ ಒಬ್ಬರು ಮಿಗಿಲು. ಕೆಲವು ಮರಾಠಿ ಅಭಂಗ್ ಭಜನೆಗಳಂತೂ ಮನದ ಪರದೆಯಲ್ಲಿ ಅವ್ಯಕ್ತವಾಗಿ ದೇವ ಸಾನ್ನಿಧ್ಯ ಮೂಡಿಸಿತು. ಭಜನೆಯ ನಂತರ ಪದ್ದತಿಯಂತೆ ದೀವಟಿಗೆ ಬೆಳಗಿ ಅಂಗಳಕ್ಕಿಳಿದ ಯುವಕರು ಅಂಗಳಕ್ಕಿಳಿದು ವಿವಿಧ ಪ್ರಾಕಾರಗಳಲ್ಲಿ ಕುಣಿತ ಸೇವೆ ಮಾಡಿದರು. ಇದಕ್ಕೆಲ್ಲ ಹಿಮ್ಮೇಳದಂತೆ ಸಾಂಪ್ರದಾಯಿಕ ಕೊಳಲು ವಾದನ ಮತ್ತು ವಾದ್ಯಗಳ ನಾದ ಆಕಾಶದ ಅವಕಾಶಗಳೆಡೆಯಲ್ಲಿ ಎತ್ತರೆತ್ತರಕ್ಕೇರಿ ನಂಬುಗೆಯ ಇಂಬಿತ್ತವರಿಗೆ ಸಮರ್ಪಣೆಯಾಗುತಿತ್ತು. ಇದೆಲ್ಲಾ ನಡೆಯುತ್ತಿದ್ದಂತೆ ಮಹಾಮಾಯೆ ಆವಾಹನೆಯಾದ ಪೂಜಾರಿ ಅಲಂಕೃತರಾಗಿ ದರುಷನ ರೂಪದಲ್ಲಿ ಹೊರ ಬಂದು ಕುಣಿಯುತ್ತಿದ್ದ ಯುವಕರಿಂದ ದೀವಟಿಗೆಗಳನ್ನು ಸೆಳೆದು ಅವ್ಯಕ್ತವಾಗಿ ಪೂಜಾರಿಯ ಮೇಲೆ ಪ್ರಕಟವಾಗಿ ಮನೆಯವರಿಗೆ, ಕೂಡು ಕಟ್ಟಿನವರಿಗೆ ಅಭಯವಿತ್ತು, ಸದಾ ಇಂಬನೀವ,ರಕ್ಷಣೆಯನ್ನೀಡುವ ನುಡಿಗಳನ್ನಾಡಿದಾಗ ಸೇವೆ ಕೊಟ್ಟ ಮನೆಯವರ ಕೃಥಾರ್ಥ ಭಾವ ಪರಮೋಚ್ಚವಾಗಿತ್ತು, ಅಮ್ಮನ ಚರಣಗಳಲ್ಲಿ ಒಂದರೆ ಕ್ಷಣ ಒಂದಾದಂತೆ ಕಂಡುಬರುತ್ತಿತ್ತು. ಪದ್ದತಿಯಂತೆ ಕರೆದು ಪ್ರಸಾದ ನೀಡಿದಂತೆ ನಾವೂ ಪ್ರಸಾದ ಪಡೆದು ಮನೆಯವರಲ್ಲಿ ಸಂತಸ ವ್ಯಕ್ತಪಡಿಸಿ ಹೊರಬಂದಾಗ ಆಕಾಶದೆತ್ತರದಲ್ಲಿ ಚಂದಿರ ತನ್ನ ಬೆಳ್ಗೊಡೆಯ ರಥದಲ್ಲಿ ಆದಿಮಾಯೆಯನ್ನು ಕುಳ್ಳಿರಿಸಿ ಅನತಿದೂರದಲ್ಲಿ ಕೇಳಿ ಬರುತ್ತಿದ್ದ ಚೆಂಡೆ ತಾಸೆ ಪೆಟ್ಟುಗಳ ನಾದದತ್ತ, ಮುಂದೆ ಮುಂದೆ ನಡೆಸುತ್ತಿದ್ದನೋ ಎಂಬಂತೆ,ನಕ್ಷತ್ರಗಳ ತೋರಣ ದೂರದ ಊರಿನ ಯಾವುದೋ ಮನೆಯವರ ಸೇವೆಯನ್ನು ಪಡೆಯಲೋಸುಗ ದಿಕ್ಪಥ ದರ್ಶಿಸುತ್ತವೋ ಎಂಬಂತೆ ಅನಿಸಿತು. ಮಧ್ಯರಾತ್ರಿಯ ತನಕ ಕುಳಿತು ಸರಳ ಸಜ್ಜನ ಸೇವಾ ಪ್ರಾಕಾರದಲ್ಲಿ ಭಾಗಿಗಳಾದ ಹಿತಾನುಬವ ಮನವ ತುಂಬಿತ್ತು.ಕವಿ ಡಿವಿಜಿಯವರ ಕಗ್ಗದ ಸಾಲುಗಳು ಈ ಸತ್ಯ ದೇವ ದರ್ಶನ ಮಾಡಬಲ್ಲುದಲ್ಲವೇ..
"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490