Advertisement
Categories: ಅನುಕ್ರಮ

ಕಪಾಟು ಪರಿಮಳಯುಕ್ತವಾಗಿರಲಿ

Share

ಬಟ್ಟೆ ಅಂಗಡಿಗೆ ಶಾಪಿಂಗ್‍ಗೆ ಹೋಗಲು ತುದಿಗಾಲಲ್ಲಿ ನಿಲ್ಲುವವರಲ್ಲಿ ಹೆಂಗಳೆಯರು ಮುಂದು. ಒಂದೆರಡು ಸಾರಿಯೋ, ಡ್ರೆಸ್ ಮೆಟೀರಿಯಲ್‍ ಖರೀದಿಸಲು ಮನೆಯಿಂದ ಹೋದವರಿಗೆ ಅತ್ಯಾಕರ್ಷಕ ರೀತಿಯಲ್ಲಿ ಜೋಡಿಸಿಟ್ಟ ನಾನಾ ತರಾವಳಿಯ ಸೀರೆ, ಡ್ರೆಸ್, ಮೆತ್ತನೆಯ ಬೆಡ್‍ಶೀಟ್ ಕಂಡಾಗ ಕಣ್ಣರಳದೆ ಇರದು. ಡಿಸ್ಕೌಂಟ್‍ ಇದ್ದರಂತು ಬೇರೆ ಹೇಳಬೇಕೆ ?

ಅವಶ್ಯಕವೋ ಅನಾವಶ್ಯವೋ ಕಂಡದ್ದೆಲ್ಲಾ ಖರೀದಿಸಿ ಮನೆಯ ಕಪಾಟಿನಲ್ಲಿ ತುಂಬಿಸಿ ಇಡುವುದರಲ್ಲಿ ಹೆಂಗಳೆಯರು ಎಲ್ಲರಿಗಿಂತ ಮುಂದು.

Advertisement

ಖರೀದಿಸಿ ತಂದರೆ ಸಾಕೇ..? ಅದನ್ನು ಒಪ್ಪಓರಣವಾಗಿ ಹಾಳಾಗದಂತೆ ಇಡುವ ಕೆಲಸವೂ ಇದೆ. ಅದರಲ್ಲೂಈಗಂತು 5-6 ತಿಂಗಳಿಂದ ಪೂಜೆ- ಪುನಸ್ಕಾರ, ಮದುವೆ-ಮುಂಜಿಯಂತಹ ಯಾವುದೇ ಕಾರ್ಯಕ್ರಮಗಳಿಲ್ಲ. ಇದ್ದರೂ ಬೆರಳೆಣಿಕೆಯಷ್ಟು. ಪ್ರವಾಸ-ಸುತ್ತಾಟಗಳಿಗೂ ಕಡಿವಾಣ ಬಿದ್ದಿದೆ. ಹೆಚ್ಚಿನ ಬಟ್ಟೆಗಳು ತಿಂಗಳುಗಳಿಂದ ಸೂರ್ಯನ ಬೆಳಕು ಕಾಣದೆ ಕಪಾಟಿನಲ್ಲಿ ಭದ್ರವಾಗಿವೆ. ಬಳಸದೇ ಬಹಳ ಕಾಲ ಹಾಗೇ ಇಟ್ಟರೆ ಬಟ್ಟೆಗಳೆಲ್ಲಾ ಒಂದು ತೆರನಾದ ಕೆಟ್ಟ ವಾಸನೆ ಬರಲು ಪ್ರಾರಂಭವಾಗುತ್ತದೆ. ದುಬಾರಿ ಬೆಲೆ ತೆತ್ತು, ಇಷ್ಟ ಪಟ್ಟು ತಂದ ಡ್ರೆಸ್ ಹಾಳಾಗುವುದನ್ನು ಯಾರು ತಾನೇ ಸಹಿಸಿಯಾರು..?

ಹೀಗಾಗಿ ಕಪಾಟಿನಲ್ಲಿಟ್ಟ ಬಟ್ಟೆ-ಬರೆಗಳನ್ನು ಕೆಟ್ಟ ವಾಸನೆ ಬಾರದಂತೆ ಎಚ್ಚರ ವಹಿಸುವುದು ಅತೀ ಅಗತ್ಯ. ಇದಲ್ಲದೆ ಧರಿಸುವಾಗ ಬಟ್ಟೆ ಸುವಾಸನೆ ಬೀರುತ್ತಿದ್ದರೆ ಮನಸ್ಸಿಗೆ ಹಿತವಾಗುವುದು.

Advertisement

• ದೇವರ ಪೂಜೆಗೆಂದು ತರುವ ಅಗರಬತ್ತಿಗಳ ಪ್ಯಾಕೆಟ್‍ ಅಥವಾ ನಾಲ್ಕೈದು ಅಗರಬತ್ತಿಯ ಕಡ್ಡಿಗಳನ್ನು ಪೇಪರ್ ಒಳಗೆ ಇಟ್ಟು ಬಟ್ಟೆಗಳ ಜೊತೆ ಇಡುವುದರಿಂದ ಕಪಾಟು ಪರಿಮಳಯುಕ್ತವಾಗಿರುತ್ತದೆ. ಇದಲ್ಲದೆ ಮೈ ತೊಳೆಯಲು ಬಳಸುವ ಸೋಪ್‍ಗಳ ಪ್ಯಾಕೆಟ್‍ಗಳನ್ನು ಕೂಡಾ ಇದೇ ರೀತಿ ಬಳಸಬಹುದು.

• ಉತ್ತಮ ಔಷಧೀಯ ಗುಣವುಳ್ಳ ಲಾವಂಛ ಬೇರುಗಳು ಕೂಡಾ ಕಪಾಟನ್ನು ಪರಿಮಳಯುಕ್ತವಾಗಿರಿಸಬಲ್ಲುದು.

Advertisement

• ಒಂದು ಪೇಪರ್/ಕವರ್‍ನಲ್ಲಿ ಎರಡು ಹಿಡಿಯಷ್ಟು ಕರಿಮೆಣಸನ್ನು ಗಂಟುಕಟ್ಟಿ ಇಟ್ಟರೆ ಅದರ ಪರಿಮಳ ಕಪಾಟಿನಲ್ಲಿರುವ ಉಡುಪಿಗೆ ಒಳ್ಳೆಯ ಪರಿಮಳವನ್ನು ತರಿಸುವುದು.

• ಬೆಡ್‍ಶೀಟ್, ಕಾಟನ್ ಬಟ್ಟೆಗಳಿಗೆ ಗಂಜಿ(ಕುಚ್ಚಿಲಕ್ಕಿ ಗಂಜಿಯ ನೀರು) ನೀರು ಹಾಕಿ ಬಿಸಿಲಲ್ಲಿ ಒಣಗಿಸುವುದರಿಂದ ಫ್ರೆಶ್ ಆಗಿ ಬಹು ಸಮಯದವರೆಗೆ ಇರುವುದು.

Advertisement

• ಬಟ್ಟೆಗಳನ್ನು ಬಹು ಸಮಯದವರೆಗೆ ಬಳಸದೇ ಇದ್ದರೆ ಒಮ್ಮೆ ಬಿಸಿಲಲ್ಲಿ ಹಾಕಿ ಮಡಚಿಟ್ಟರೆ ನಳನಳಿಸುವುದು.

• ಕ್ರಿಮಿ-ಕೀಟಗಳ ಹಾವಳಿಯನ್ನು ತಪ್ಪಿಸಲು ನೆಪ್ತಾಲಿನ್ ಬಾಲ್‍ಗಳನ್ನು ಸಹ ಬಳಸಬಹುದು. ಇವುಗಳನ್ನು ಪೇಪರ್‍ನೊಳಗಡೆ ಇಡುವುದರಿಂದ ಬೇಗನೆ ಗಾಳಿಗೆ ಆವಿಯಾಗುವುದಿಲ್ಲ.

Advertisement

• ಸಂಪಿಗೆ ಹೂ, ಕೇದಗೆಯನ್ನುಕೂಡಾ ಕಪಾಟಿನಲ್ಲಿಡುವುದರಿಂದ ಒಳ್ಳೆಯ ಪರಿಮಳ ಹೊರಹೊಮ್ಮುವುದು. ಹೂಗಳು ಒಣಗಿದರೂ ಪರಿಮಳ ಬಹು ಸಮಯದವರೆಗೆ ಇರುವುದು.

 

Advertisement

ವಂದನಾ ರವಿ.ಕೆ.ವೈ.ವೇಣೂರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago