Advertisement
MIRROR FOCUS

ಕೃಷಿ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಮಹತ್ವದ ಬದಲಾವಣೆ ತರುತ್ತಿದೆ

Share

ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತರಬಲ್ಲ ತಾಂತ್ರಿಕತೆಯಾಗಿ ಹೊರಹೊಮ್ಮುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.

‘ರೇಡಿಯೊ ಕಿಸಾನ್ ದಿವಸ’ದ ಅಂಗವಾಗಿ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಹಾಗೂ ಕೃಷಿ ಅಭಿವೃದ್ಧಿ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹವಾಮಾನ ಮುನ್ಸೂಚನೆ, ಮಣ್ಣು ಪರೀಕ್ಷೆ, ಬೆಳೆ ಸಂರಕ್ಷಣೆ ಹಾಗೂ ಮಾರುಕಟ್ಟೆ ದರಗಳ ವಿಶ್ಲೇಷಣೆಯಲ್ಲಿ AI ತಂತ್ರಜ್ಞಾನ ರೈತರಿಗೆ ಬಹುಮುಖ್ಯ ಸಹಾಯವಾಗುತ್ತಿದೆ ಎಂದರು. ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಕೃಷಿ ಚಟುವಟಿಕೆಗಳು ಹೆಚ್ಚು ವೈಜ್ಞಾನಿಕವಾಗುತ್ತಿದ್ದು, ಉತ್ಪಾದನಾ ವೆಚ್ಚ ಕಡಿಮೆಯಾಗುವುದರ ಜೊತೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಹಾಸನ ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಅರಕಲಗೂಡು ವಿ. ಮಧುಸೂದನ್ ಮಾತನಾಡಿ, ಭಾರತೀಯ ಮಾಧ್ಯಮ ಕ್ಷೇತ್ರದಲ್ಲಿ ಆಕಾಶವಾಣಿಯು ಅತ್ಯಂತ ದೊಡ್ಡ ಜಾಲವನ್ನು ಹೊಂದಿದೆ ಎಂದು ಹೇಳಿದರು.

ದೇಶದಾದ್ಯಂತ 591 ಆಕಾಶವಾಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ 188 ಕೇಂದ್ರಗಳು ಕೃಷಿ ಕಾರ್ಯಕ್ರಮಗಳನ್ನು ನಿರ್ಮಿಸಿ ಪ್ರಸಾರ ಮಾಡುತ್ತಿವೆ ಎಂದು ಮಾಹಿತಿ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಅದೇ ರೀತಿ ದೇಶದ 97 ಆಕಾಶವಾಣಿ ಕೇಂದ್ರಗಳಲ್ಲಿ ‘ಕಿಸಾನ್ವಾಣಿ’ ಕಾರ್ಯಕ್ರಮಗಳು ಪ್ರಸಾರವಾಗುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಹಾಗೂ ಕೃಷಿಕರ ಕಲ್ಯಾಣ ಸಚಿವಾಲಯದ ಪ್ರಾಯೋಜಕತ್ವದಲ್ಲಿ ದೇಶದಲ್ಲೇ ಮೊದಲ ಬಾರಿಗೆ 2004ರಲ್ಲಿ ಹಾಸನ ಆಕಾಶವಾಣಿ ಕೇಂದ್ರದಿಂದ ‘ಕಿಸಾನ್ವಾಣಿ’ ಕಾರ್ಯಕ್ರಮ ಪ್ರಸಾರ ಆರಂಭಗೊಂಡಿತ್ತು ಎಂದು ತಿಳಿಸಿದರು.

Hassan Deputy Commissioner KS Lathakumari stated that Artificial Intelligence is bringing significant transformation to agriculture by supporting weather forecasting, soil testing, crop protection, and market price analysis. Speaking at a seminar organized during Radio Kisan Day at Hassan Akashvani, officials highlighted the role of All India Radio’s vast network in broadcasting agricultural programs, including the Kisanvani initiative launched from Hassan in 2004.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

1 day ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

1 day ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

4 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

4 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago