Advertisement
ಪ್ರಮುಖ

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

Share

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ. ಹಾಗೆ ಅದು ಮುಂದೆ ಮೀನುಗಾರಿಕೆಗೆ(Fishery) ಹೆಚ್ಚು ಅನುಕೂಲವಾಗಲಿದೆ. ಕಡಲಿಗೆ ಬೃಹತ್‌ ಆಕಾರದ ಕಾಂಕ್ರೀಟ್ ಬಂಡೆಗಳು ಲಗ್ಗೆ ಇಟ್ಟಿವೆ. ಈಗಾಗಲೇ ಇರುವ ನೈಸರ್ಗಿಕ ಬಂಡೆಗಳಲ್ಲದೇ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಈಗ ಕೃತಕ ಬಂಡೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಸಾಂಪ್ರದಾಯಿಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಂತಾಗಲಿದೆ.

ಇದರ ಮೊದಲ ಭಾಗವಾಗಿ ಭಟ್ಕಳದ ಬೆಳಕೆ ಸಮುದ್ರದಲ್ಲಿ 4-5 ನಾಟಿಕಲ್ ಮೈಲು ದೂರದಲ್ಲಿ ಈ ಬಂಡೆಗಳನ್ನು ಹಾಕಲಾಗಿದೆ. ಒಂದೊಂದು ಬಂಡೆ ಕೂಡ 400 ಕೆಜಿ ತೂಕವನ್ನು ಹೊಂದಿದೆ. ಕ್ರೇನ್ ಸಹಾಯದಿಂದ ಈ ಬಂಡೆಗಳನ್ನು ಹಾಕುತ್ತಿದ್ದು, ಕರ್ನಾಟಕದ 56 ಸಮುದ್ರ ತೀರಗಳಲ್ಲಿ ಈ ಯೋಜನೆ ಜಾರಿ ಬರಲಿದೆ.

ಉಡುಪಿಯಲ್ಲಿ 31 ಹಾಗೂ ಉತ್ತರಕನ್ನಡದಲ್ಲಿ 25 ಜಾಗವನ್ನು ಇದಕ್ಕಾಗಿ ನಿಗದಿ ಪಡಿಸಲಾಗಿದೆ. ಹೀಗೆ ಎಸೆಯುವ ಬಂಡೆಗಳು ಆಳ ಸಮುದ್ರದ ಜೀವ ಸಂತತಿಯ ಹೆಚ್ಚಳದಲ್ಲಿ ಗಣನೀಯ ಪಾತ್ರವಹಿಸುತ್ತವೆ. ಆಳ ಸಮುದ್ರದಲ್ಲಿ ಮೀನುಗಳ ಸಂತತಿ ಹೆಚ್ಚಿಸಲು ಸ‌ಹಾಯಕವಾಗುವ ಈ ಬಂಡೆಗಳು ಜಿಲ್ಲೆಯ ಮೀನುಗಾರರಲ್ಲಿ ಹೊಸ ಭರವಸೆ ಮೂಡಿ‌ಸಿವೆ.

Artificial reefs have been deployed in the sea off these hamlets to attract fish and help re-establish biodiversity in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

6 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

7 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

19 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

20 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

20 hours ago