Advertisement
ಪ್ರಮುಖ

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

Share

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ. ಹಾಗೆ ಅದು ಮುಂದೆ ಮೀನುಗಾರಿಕೆಗೆ(Fishery) ಹೆಚ್ಚು ಅನುಕೂಲವಾಗಲಿದೆ. ಕಡಲಿಗೆ ಬೃಹತ್‌ ಆಕಾರದ ಕಾಂಕ್ರೀಟ್ ಬಂಡೆಗಳು ಲಗ್ಗೆ ಇಟ್ಟಿವೆ. ಈಗಾಗಲೇ ಇರುವ ನೈಸರ್ಗಿಕ ಬಂಡೆಗಳಲ್ಲದೇ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಈಗ ಕೃತಕ ಬಂಡೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಸಾಂಪ್ರದಾಯಿಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಂತಾಗಲಿದೆ.

ಇದರ ಮೊದಲ ಭಾಗವಾಗಿ ಭಟ್ಕಳದ ಬೆಳಕೆ ಸಮುದ್ರದಲ್ಲಿ 4-5 ನಾಟಿಕಲ್ ಮೈಲು ದೂರದಲ್ಲಿ ಈ ಬಂಡೆಗಳನ್ನು ಹಾಕಲಾಗಿದೆ. ಒಂದೊಂದು ಬಂಡೆ ಕೂಡ 400 ಕೆಜಿ ತೂಕವನ್ನು ಹೊಂದಿದೆ. ಕ್ರೇನ್ ಸಹಾಯದಿಂದ ಈ ಬಂಡೆಗಳನ್ನು ಹಾಕುತ್ತಿದ್ದು, ಕರ್ನಾಟಕದ 56 ಸಮುದ್ರ ತೀರಗಳಲ್ಲಿ ಈ ಯೋಜನೆ ಜಾರಿ ಬರಲಿದೆ.

ಉಡುಪಿಯಲ್ಲಿ 31 ಹಾಗೂ ಉತ್ತರಕನ್ನಡದಲ್ಲಿ 25 ಜಾಗವನ್ನು ಇದಕ್ಕಾಗಿ ನಿಗದಿ ಪಡಿಸಲಾಗಿದೆ. ಹೀಗೆ ಎಸೆಯುವ ಬಂಡೆಗಳು ಆಳ ಸಮುದ್ರದ ಜೀವ ಸಂತತಿಯ ಹೆಚ್ಚಳದಲ್ಲಿ ಗಣನೀಯ ಪಾತ್ರವಹಿಸುತ್ತವೆ. ಆಳ ಸಮುದ್ರದಲ್ಲಿ ಮೀನುಗಳ ಸಂತತಿ ಹೆಚ್ಚಿಸಲು ಸ‌ಹಾಯಕವಾಗುವ ಈ ಬಂಡೆಗಳು ಜಿಲ್ಲೆಯ ಮೀನುಗಾರರಲ್ಲಿ ಹೊಸ ಭರವಸೆ ಮೂಡಿ‌ಸಿವೆ.

Artificial reefs have been deployed in the sea off these hamlets to attract fish and help re-establish biodiversity in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

16 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

16 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

21 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

21 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

21 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 days ago