Advertisement
ಪ್ರಮುಖ

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

Share

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ. ಹಾಗೆ ಅದು ಮುಂದೆ ಮೀನುಗಾರಿಕೆಗೆ(Fishery) ಹೆಚ್ಚು ಅನುಕೂಲವಾಗಲಿದೆ. ಕಡಲಿಗೆ ಬೃಹತ್‌ ಆಕಾರದ ಕಾಂಕ್ರೀಟ್ ಬಂಡೆಗಳು ಲಗ್ಗೆ ಇಟ್ಟಿವೆ. ಈಗಾಗಲೇ ಇರುವ ನೈಸರ್ಗಿಕ ಬಂಡೆಗಳಲ್ಲದೇ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಈಗ ಕೃತಕ ಬಂಡೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಸಾಂಪ್ರದಾಯಿಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಂತಾಗಲಿದೆ.

ಇದರ ಮೊದಲ ಭಾಗವಾಗಿ ಭಟ್ಕಳದ ಬೆಳಕೆ ಸಮುದ್ರದಲ್ಲಿ 4-5 ನಾಟಿಕಲ್ ಮೈಲು ದೂರದಲ್ಲಿ ಈ ಬಂಡೆಗಳನ್ನು ಹಾಕಲಾಗಿದೆ. ಒಂದೊಂದು ಬಂಡೆ ಕೂಡ 400 ಕೆಜಿ ತೂಕವನ್ನು ಹೊಂದಿದೆ. ಕ್ರೇನ್ ಸಹಾಯದಿಂದ ಈ ಬಂಡೆಗಳನ್ನು ಹಾಕುತ್ತಿದ್ದು, ಕರ್ನಾಟಕದ 56 ಸಮುದ್ರ ತೀರಗಳಲ್ಲಿ ಈ ಯೋಜನೆ ಜಾರಿ ಬರಲಿದೆ.

ಉಡುಪಿಯಲ್ಲಿ 31 ಹಾಗೂ ಉತ್ತರಕನ್ನಡದಲ್ಲಿ 25 ಜಾಗವನ್ನು ಇದಕ್ಕಾಗಿ ನಿಗದಿ ಪಡಿಸಲಾಗಿದೆ. ಹೀಗೆ ಎಸೆಯುವ ಬಂಡೆಗಳು ಆಳ ಸಮುದ್ರದ ಜೀವ ಸಂತತಿಯ ಹೆಚ್ಚಳದಲ್ಲಿ ಗಣನೀಯ ಪಾತ್ರವಹಿಸುತ್ತವೆ. ಆಳ ಸಮುದ್ರದಲ್ಲಿ ಮೀನುಗಳ ಸಂತತಿ ಹೆಚ್ಚಿಸಲು ಸ‌ಹಾಯಕವಾಗುವ ಈ ಬಂಡೆಗಳು ಜಿಲ್ಲೆಯ ಮೀನುಗಾರರಲ್ಲಿ ಹೊಸ ಭರವಸೆ ಮೂಡಿ‌ಸಿವೆ.

Artificial reefs have been deployed in the sea off these hamlets to attract fish and help re-establish biodiversity in the area.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

1 hour ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

2 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

2 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

6 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

6 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

17 hours ago