Advertisement
ಸುದ್ದಿಗಳು

#ಪಾಸಿಟಿವ್‌ | 5 ಬಾರಿ ವಿಶ್ವ ದಾಖಲೆ ಬರೆದ ನೆಲ್ಯಾಡಿಯ ಯುವಕ…!

Share

ಬ್ಲೂ ಇಂಕ್ ಪ್ಯಾಡ್ ಸಹಾಯದೊಂದಿಗೆ ಹೆಬ್ಬೆರಳು ಮತ್ತು ತೋರು ಬೆರಳುಗಳನ್ನು ಬಳಸಿಕೊಂಡು 20 ನಿಮಿಷದಲ್ಲಿ ಗಾಂಧೀಜಿಯ ಭಾವಚಿತ್ರ, 3.12  ಸೆಕೆಂಡುಗಳಲ್ಲಿ ಪ್ರಧಾನಿ ಮೋದಿಯವರ ಚಿತ್ರ, 5 ನಿಮಿಷಗಳಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರ….. ! ಹೀಗೇ ಹಲವು ಚಿತ್ರ ಬಿಡಿಸಿ ಇದುವರೆಗೆ ಐದು ವಿಶ್ವ ದಾಖಲೆಯನ್ನು ಮಾಡಿದ್ದಾರೆ ಈ ಯುವಕ. ಅವರು ಮೂಲತ: ನೆಲ್ಯಾಡಿಯ ಸದ್ಯ ಮಂಗಳೂರಿನ ಟಿವಿಎಸ್ ಕಂಪನಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಪರೀಕ್ಷಿತ್.

Advertisement
Advertisement

ಗಾಂಧೀಜಿಯ ಭಾವಚಿತ್ರವನ್ನು ಕೇವಲ 20 ನಿಮಿಷದಲ್ಲಿ ಚಿತ್ರಿಸುವ ಮೂಲಕ 5ನೇ ಬಾರಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ 21  ಹರೆಯದ ನೆಲ್ಯಾಡಿಯ ಯುವಕ. ನೆಲ್ಯಾಡಿಯ ಕುಂಡಡ್ಕ ನಿವಾಸಿ  ಶ್ರೀಧರ ಶೆಟ್ಟಿ ಮತ್ತು ಸುಧಾಮಣಿ ದಂಪತಿಯ ಪುತ್ರ ಪ್ರಸ್ತುತ ಮಂಗಳೂರಿನ ಟಿವಿಎಸ್ ಕಂಪನಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಪರೀಕ್ಷಿತ್ ಈ ಸಾಧನೆಯ ರುವಾರಿ. ಎ1 ಶೀಟ್ ನಲ್ಲಿ ಬ್ಲೂ ಇಂಕ್ ಪ್ಯಾಡ್ ಸಹಾಯದೊಂದಿಗೆ ಹೆಬ್ಬೆರಳು ಮತ್ತು ತೋರು ಬೆರಳುಗಳನ್ನು ಬಳಸಿಕೊಂಡು 20 ನಿಮಿಷದಲ್ಲಿ ಗಾಂಧೀಜಿಯ ಭಾವಚಿತ್ರವನ್ನು ಬಿಡಿಸಿ ಆ ಮೂಲಕ ವಿಶ್ವ ದಾಖಲೆಯನ್ನು ಮಾಡಿದ್ದಾರೆ.

ಈತ ಬಾಲ್ಯದಿಂದ 9 ನೇ ತರಗತಿವರೆಗೆ ನೆಲ್ಯಾಡಿಯ ಜ್ಞಾನೋದಯ ಬೆಥನಿ ಶಾಲೆಯಲ್ಲಿ ಕಲಿತು ನಂತರ 10 ನೇ ತರಗತಿಯಿಂದ ಪಿಯುಸಿವರೆಗಿನ ಶಿಕ್ಷಣವನ್ನು ಮಂಗಳೂರಿನ ಗೋಪಾಡ್ಕರ್‌ರವರ ಸ್ವರೂಪ ಸಂಸ್ಥೆಯಲ್ಲಿ ಪೂರೈಸಿದ. ಸ್ವರೂಪ ಸಂಸ್ಥೆಗೆ ಸೇರಿದ ಮೇಲೆಯೇ ಈತನ ಕಲಿಕಾಸಕ್ತಿ ಬೆಳೆಯಲಾರಂಬಿಸಿತು. ಅಲ್ಲಿನ ಮಾರ್ಗದರ್ಶಕರ ಸಹಾಯದಿಂದ ಯಕ್ಷಗಾನ, ಭರತನಾಟ್ಯ, ಗಿಟಾರ್, ಕ್ರೀಯೇಟೀವ್ ಆರ್ಟ್, ವಿಶುವಲ್ ಆರ್ಟ್, ಬೀಟ್ ಬಾಕ್ಸ್ ನಲ್ಲೂ ಈತ ಪರಿಣಿತ.

ಈತ ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಅವರ ಭಾವಚಿತ್ರವನ್ನು ಪೇಪರ್ ಕಟ್ಟಿಂಗ್ ಆರ್ಟ್( ಸ್ಟೆನ್ಸಿಲ್ )ನ ಮೂಲಕ ಚಿತ್ರಿಸಿ ಸ್ಥಳದಲ್ಲಿ ಅವರಿಂದ ಗೌರವಾರ್ಪಣೆ ಯನ್ನು ಸ್ವೀಕರಿಸಿದ್ದಾನೆ. ಅದಲ್ಲದೆ ಈತನ ಸಾಧನೆಗಾಗಿ ಹಲವು ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಸನ್ಮಾನಿಸಿವೆ. ಭವಿಷ್ಯದಲ್ಲಿ ಗಿನ್ನಿಸ್ ರೆಕಾರ್ಡ್ ಮಾಡುವ ಕುರಿತು ಯೋಜನೆಯಿದ್ದು, ಅದಕ್ಕಾಗಿ ತಯಾರಿ ನಡೆಸುತ್ತಿದ್ದಾನೆ.

ಇದುರೆಗಿನ ವಿಶ್ವ ದಾಖಲೆಗಳು :

This is box title

# 3.12 ಸೆಕೆಂಡುಗಳಲ್ಲಿ ಪ್ರಧಾನಿ ಮೋದಿಯವರ ಚಿತ್ರವನ್ನು ರಚಿಸಿದ್ದಕ್ಕಾಗಿ -ವಲ್ಡ್ ಫಾಸ್ಟೆಸ್ಟ್ ಪೇಪರ್ ಕಟ್ಟಿಂಗ್ (ಬಿಳಿ ಮತ್ತು ಕಪ್ಪು ಡ್ರಾಯಿಂಗ್ ಶೀಟ್ ಬಳಸಿಕೊಡು ರಚಿಸುವ ಚಿತ್ರ) ಆರ್ಟಿಸ್ಟ್ ಎಂಬ ಪ್ರಮಾಣ ಪತ್ರ. ಈ ಸಾಧನೆಯಲ್ಲಿ ಈತನೇ ಮೊದಲಿಗ.

# 5 ನಿಮಿಷಗಳಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಫೈರ್ ಆರ್ಟ್ (ಬೆಂಕಿಯ ದೀವಟಿಗೆಯನ್ನು ಪೇಪರ್‌ಗೆ ಹಿಡಿದು ಆ ಮೂಲಕ ಭಾವಚಿತ್ರ ಬಿಡಿಸುವ ಕಲೆ) ಎಂಬ ಪರಿಕಲ್ಪನೆಯ ಮೂಲಕ ಜಗತ್ತಿಗೆ ಪರಿಚಿಸಿದ ಮೊದಲಿಗ.

# 35 ವಿದ್ಯಾರ್ಥಿಗಳನ್ನೊಳಗೊಂಡ ಟೀಂನ ಲೀಡರ್ ಆಗಿ 30*30  ಫೀಟ್ ಎತ್ತರದ ಲಾರ್ಜ್ ಮೋಸ್ಟ್ ಪೇಪರ್ ಕಟ್ಟಿಂಗ್ ಅನ್ನುವ ಪರಿಕಲ್ಪನೆಯಲ್ಲಿ ಮೂಲಕ ಐರನ್ ಮ್ಯಾನ್ ಆಫ್ ಇಂಡಿಯಾ 1 ಗಂಟೆಯ ಅವಧಿಯಲ್ಲಿ “ಎಕ್ಸ್ಕ್ಲೂಸಿವ್ ವಲ್ಡ್ ರೆಕಾರ್ಡ್” ಮತ್ತು “ವಲ್ಡ್ ರೆಕಾರ್ಡ್ ಆಫ್ ಇಂಡಿಯಾ” ಎನ್ನುವ 2 ವಿಶ್ವ ದಾಖಲೆ.

# 20 ನಿಮಿಷಗಲ್ಲಿ ನೀಲಿ ಇಂಕ್ ಪ್ಯಾಡ್ ಅನ್ನು ಬಳಸಿಕೊಂಡು ಹೆಬ್ಬೆರಳು ಮತ್ತು ತೋರು ಬೆರಳಿನ ಸಹಾಯದಿಂದ ಗಾಂಧೀಜಿಯ ಬಾವಚಿತ್ರವನ್ನು ರಚಿಸಿ ವಿಶ್ವದಾಖಲೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

19 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago