Advertisement
ಸುದ್ದಿಗಳು

#ಪಾಸಿಟಿವ್‌ | 5 ಬಾರಿ ವಿಶ್ವ ದಾಖಲೆ ಬರೆದ ನೆಲ್ಯಾಡಿಯ ಯುವಕ…!

Share

ಬ್ಲೂ ಇಂಕ್ ಪ್ಯಾಡ್ ಸಹಾಯದೊಂದಿಗೆ ಹೆಬ್ಬೆರಳು ಮತ್ತು ತೋರು ಬೆರಳುಗಳನ್ನು ಬಳಸಿಕೊಂಡು 20 ನಿಮಿಷದಲ್ಲಿ ಗಾಂಧೀಜಿಯ ಭಾವಚಿತ್ರ, 3.12  ಸೆಕೆಂಡುಗಳಲ್ಲಿ ಪ್ರಧಾನಿ ಮೋದಿಯವರ ಚಿತ್ರ, 5 ನಿಮಿಷಗಳಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರ….. ! ಹೀಗೇ ಹಲವು ಚಿತ್ರ ಬಿಡಿಸಿ ಇದುವರೆಗೆ ಐದು ವಿಶ್ವ ದಾಖಲೆಯನ್ನು ಮಾಡಿದ್ದಾರೆ ಈ ಯುವಕ. ಅವರು ಮೂಲತ: ನೆಲ್ಯಾಡಿಯ ಸದ್ಯ ಮಂಗಳೂರಿನ ಟಿವಿಎಸ್ ಕಂಪನಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಪರೀಕ್ಷಿತ್.

Advertisement
Advertisement

Advertisement

ಗಾಂಧೀಜಿಯ ಭಾವಚಿತ್ರವನ್ನು ಕೇವಲ 20 ನಿಮಿಷದಲ್ಲಿ ಚಿತ್ರಿಸುವ ಮೂಲಕ 5ನೇ ಬಾರಿ ವಿಶ್ವ ದಾಖಲೆಯನ್ನು ಬರೆದಿದ್ದಾರೆ 21  ಹರೆಯದ ನೆಲ್ಯಾಡಿಯ ಯುವಕ. ನೆಲ್ಯಾಡಿಯ ಕುಂಡಡ್ಕ ನಿವಾಸಿ  ಶ್ರೀಧರ ಶೆಟ್ಟಿ ಮತ್ತು ಸುಧಾಮಣಿ ದಂಪತಿಯ ಪುತ್ರ ಪ್ರಸ್ತುತ ಮಂಗಳೂರಿನ ಟಿವಿಎಸ್ ಕಂಪನಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿರುವ ಪರೀಕ್ಷಿತ್ ಈ ಸಾಧನೆಯ ರುವಾರಿ. ಎ1 ಶೀಟ್ ನಲ್ಲಿ ಬ್ಲೂ ಇಂಕ್ ಪ್ಯಾಡ್ ಸಹಾಯದೊಂದಿಗೆ ಹೆಬ್ಬೆರಳು ಮತ್ತು ತೋರು ಬೆರಳುಗಳನ್ನು ಬಳಸಿಕೊಂಡು 20 ನಿಮಿಷದಲ್ಲಿ ಗಾಂಧೀಜಿಯ ಭಾವಚಿತ್ರವನ್ನು ಬಿಡಿಸಿ ಆ ಮೂಲಕ ವಿಶ್ವ ದಾಖಲೆಯನ್ನು ಮಾಡಿದ್ದಾರೆ.

ಈತ ಬಾಲ್ಯದಿಂದ 9 ನೇ ತರಗತಿವರೆಗೆ ನೆಲ್ಯಾಡಿಯ ಜ್ಞಾನೋದಯ ಬೆಥನಿ ಶಾಲೆಯಲ್ಲಿ ಕಲಿತು ನಂತರ 10 ನೇ ತರಗತಿಯಿಂದ ಪಿಯುಸಿವರೆಗಿನ ಶಿಕ್ಷಣವನ್ನು ಮಂಗಳೂರಿನ ಗೋಪಾಡ್ಕರ್‌ರವರ ಸ್ವರೂಪ ಸಂಸ್ಥೆಯಲ್ಲಿ ಪೂರೈಸಿದ. ಸ್ವರೂಪ ಸಂಸ್ಥೆಗೆ ಸೇರಿದ ಮೇಲೆಯೇ ಈತನ ಕಲಿಕಾಸಕ್ತಿ ಬೆಳೆಯಲಾರಂಬಿಸಿತು. ಅಲ್ಲಿನ ಮಾರ್ಗದರ್ಶಕರ ಸಹಾಯದಿಂದ ಯಕ್ಷಗಾನ, ಭರತನಾಟ್ಯ, ಗಿಟಾರ್, ಕ್ರೀಯೇಟೀವ್ ಆರ್ಟ್, ವಿಶುವಲ್ ಆರ್ಟ್, ಬೀಟ್ ಬಾಕ್ಸ್ ನಲ್ಲೂ ಈತ ಪರಿಣಿತ.

Advertisement

ಈತ ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಅವರ ಭಾವಚಿತ್ರವನ್ನು ಪೇಪರ್ ಕಟ್ಟಿಂಗ್ ಆರ್ಟ್( ಸ್ಟೆನ್ಸಿಲ್ )ನ ಮೂಲಕ ಚಿತ್ರಿಸಿ ಸ್ಥಳದಲ್ಲಿ ಅವರಿಂದ ಗೌರವಾರ್ಪಣೆ ಯನ್ನು ಸ್ವೀಕರಿಸಿದ್ದಾನೆ. ಅದಲ್ಲದೆ ಈತನ ಸಾಧನೆಗಾಗಿ ಹಲವು ಸಂಘ ಸಂಸ್ಥೆಗಳು ಇವರನ್ನು ಗುರುತಿಸಿ ಸನ್ಮಾನಿಸಿವೆ. ಭವಿಷ್ಯದಲ್ಲಿ ಗಿನ್ನಿಸ್ ರೆಕಾರ್ಡ್ ಮಾಡುವ ಕುರಿತು ಯೋಜನೆಯಿದ್ದು, ಅದಕ್ಕಾಗಿ ತಯಾರಿ ನಡೆಸುತ್ತಿದ್ದಾನೆ.

Advertisement

ಇದುರೆಗಿನ ವಿಶ್ವ ದಾಖಲೆಗಳು :

This is box title
Advertisement

# 3.12 ಸೆಕೆಂಡುಗಳಲ್ಲಿ ಪ್ರಧಾನಿ ಮೋದಿಯವರ ಚಿತ್ರವನ್ನು ರಚಿಸಿದ್ದಕ್ಕಾಗಿ -ವಲ್ಡ್ ಫಾಸ್ಟೆಸ್ಟ್ ಪೇಪರ್ ಕಟ್ಟಿಂಗ್ (ಬಿಳಿ ಮತ್ತು ಕಪ್ಪು ಡ್ರಾಯಿಂಗ್ ಶೀಟ್ ಬಳಸಿಕೊಡು ರಚಿಸುವ ಚಿತ್ರ) ಆರ್ಟಿಸ್ಟ್ ಎಂಬ ಪ್ರಮಾಣ ಪತ್ರ. ಈ ಸಾಧನೆಯಲ್ಲಿ ಈತನೇ ಮೊದಲಿಗ.

# 5 ನಿಮಿಷಗಳಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ಫೈರ್ ಆರ್ಟ್ (ಬೆಂಕಿಯ ದೀವಟಿಗೆಯನ್ನು ಪೇಪರ್‌ಗೆ ಹಿಡಿದು ಆ ಮೂಲಕ ಭಾವಚಿತ್ರ ಬಿಡಿಸುವ ಕಲೆ) ಎಂಬ ಪರಿಕಲ್ಪನೆಯ ಮೂಲಕ ಜಗತ್ತಿಗೆ ಪರಿಚಿಸಿದ ಮೊದಲಿಗ.

Advertisement

# 35 ವಿದ್ಯಾರ್ಥಿಗಳನ್ನೊಳಗೊಂಡ ಟೀಂನ ಲೀಡರ್ ಆಗಿ 30*30  ಫೀಟ್ ಎತ್ತರದ ಲಾರ್ಜ್ ಮೋಸ್ಟ್ ಪೇಪರ್ ಕಟ್ಟಿಂಗ್ ಅನ್ನುವ ಪರಿಕಲ್ಪನೆಯಲ್ಲಿ ಮೂಲಕ ಐರನ್ ಮ್ಯಾನ್ ಆಫ್ ಇಂಡಿಯಾ 1 ಗಂಟೆಯ ಅವಧಿಯಲ್ಲಿ “ಎಕ್ಸ್ಕ್ಲೂಸಿವ್ ವಲ್ಡ್ ರೆಕಾರ್ಡ್” ಮತ್ತು “ವಲ್ಡ್ ರೆಕಾರ್ಡ್ ಆಫ್ ಇಂಡಿಯಾ” ಎನ್ನುವ 2 ವಿಶ್ವ ದಾಖಲೆ.

# 20 ನಿಮಿಷಗಲ್ಲಿ ನೀಲಿ ಇಂಕ್ ಪ್ಯಾಡ್ ಅನ್ನು ಬಳಸಿಕೊಂಡು ಹೆಬ್ಬೆರಳು ಮತ್ತು ತೋರು ಬೆರಳಿನ ಸಹಾಯದಿಂದ ಗಾಂಧೀಜಿಯ ಬಾವಚಿತ್ರವನ್ನು ರಚಿಸಿ ವಿಶ್ವದಾಖಲೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಸಮನ್ವಯ

ಮಿರರ್‌ ನ್ಯೂಸ್ ನೆಟ್ವರ್ಕ್

Published by
ಮಿರರ್‌ ಸಮನ್ವಯ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

4 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

10 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

11 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago