Advertisement
ಸುದ್ದಿಗಳು

ಕಲಾವಿದರು ಅನೇಕರ ಬದುಕಿಗೆ ಪ್ರೇರಣೆ ನೀಡಬಲ್ಲರು

Share

ಯಕ್ಷಗಾನ ಕಲೆ ಅಥವಾ ಇನ್ಯಾವುದೇ ಕಲೆಯು ಕೇವಲ ಮನರಂಜನೆಯಷ್ಟೇ ಅಲ್ಲ. ಪ್ರತೀ ಕಲೆ ಹಾಗೂ ಕಲಾವಿದರು ಇನ್ನಷ್ಟು ಮಂದಿಯ ಬದುಕಿಗೆ ಪ್ರೇರಣೆಯಾಗುತ್ತಾರೆ. ಅಂತಹ ಕಲಾವಿದರ ಸಾಲಿನಲ್ಲಿ ಪ್ರಸಿದ್ಧ ಹಿಮ್ಮೇಳವಾದಕ ದೇಲಂತಮಜಲು ಸುಬ್ರಹ್ಮಣ್ಯ ಭಟ್‌ ಅವರು ಇದ್ದಾರೆ ಎಂದು ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಟಾನದ ಸಂಚಾಲಕ ರಾಮಕೃಷ್ಣ ಮಯ್ಯ ಹೇಳಿದರು.

ಅವರು ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯ ನೂತನ ಸಭಾಗೃಹದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಯಕ್ಷಮಿತ್ರರು ಬಳಗ ಕುಕ್ಕೆ ಸುಬ್ರಹ್ಮಣ್ಯ ಆಯೋಜಿಸಿದ ಸನ್ಮಾನ ಕಾರ್ಯಕ್ರಮ ಹಾಗೂ ಶ್ರೀದೇವೀಮಹಾತ್ಮ್ಯೆ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಕ್ಷಗಾನ ಪ್ರದರ್ಶನ ಮಾತ್ರವಲ್ಲ, ಕಲೆ, ಕಲಾವಿದರಿಗೆ ಪ್ರೋತ್ಸಾಹ, ಅಭಿನಂದನೆ ಹಾಗೂ ಗುರುತಿಸುವ ಕೆಲಸ ಅಕಾಡೆಮಿ ಕಡೆಯಿಂದಲೂ ನಡೆಯುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಹಿರಿಯ ಹಿಮ್ಮೇಳ ವಾದಕ ದೇಲಂತಮಜಲು ಸುಬ್ರಹ್ಮಣ್ಯ ಭಟ್‌ ಅವರು ಯಕ್ಷಗಾನಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. 40 ವರ್ಷಗಳಿಂದಲೂ ಅನೇಕರಿಗೆ ಕಲಾ ರಸದೌತಣ ನೀಡಿದ್ದಷ್ಟೇ ಅಲ್ಲ, ಅನೇಕರಿಗೆ ಪ್ರೇರಣೆಯೂ ಆಗಿದ್ದಾರೆ. ಇಂತಹ ಶ್ರೇಷ್ಟ ಕಲಾವಿದರಿಗೆ ಗೌರವಿಸುವುದು ಅಗತ್ಯವಾದ ಕೆಲಸ. ಯಕ್ಷಗಾನ ಅಕಾಡೆಮಿ ಹಾಗೂ ಯಕ್ಷಮಿತ್ರರ ಬಳಗ ಮಾಡಿರುವ ಕೆಲಸ ಸ್ತುತ್ಯರ್ಹ ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಕಲಾಸಂಘಟಕ ಯಜ್ಞೇಶ್‌ ಆಚಾರ್‌, ಕಲಾವಿದರನ್ನು ಗೌರವಿಸುವ ಮೂಲಕ ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಇಂತಹ ಕಾರ್ಯಗಳು ಹೆಚ್ಚು ನಡೆಯಲಿ ಎಂದರು.

ಯಕ್ಷಮಿತ್ರರು ಬಳಗ ಕುಕ್ಕೆ ಸುಬ್ರಹ್ಮಣ್ಯ ಇದರ ಸಂಚಾಲಕ ಶಂಭಯ್ಯ ಕಂಜರ್ಪಣೆ ಪ್ರಸ್ತಾವನೆಗೈದು, ಕುಕ್ಕೆ ಸುಬ್ರಹ್ಮಣ್ಯದ ಯಕ್ಷಮಿತ್ರ ಬಳಗವು ಅನೇಕ ವರ್ಷಗಳಿಂದ ಯಕ್ಷಗಾನ ರಂಗಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಗ್ರಾಮೀಣ ಭಾಗದಲ್ಲೂ ನಮ್ಮ ಮಣ್ಣಿನ ಕಲೆ ಯಕ್ಷಗಾನವನ್ನು ಗಟ್ಟಿಗೊಳಿಸುವಲ್ಲಿ ಶ್ರಮ ವಹಿಸಿದೆ. ಊರಿನಲ್ಲಿ ಮಾತ್ರವಲ್ಲ ಪರವೂರಿನಲ್ಲೂ ಯಕ್ಷಗಾನ ರಂಗಕ್ಕಾಗಿ ಯಕ್ಷಮಿತ್ರರ ಬಳಗವು ಕೆಲಸ ಮಾಡಿದೆ. ಯಕ್ಷಗಾನ ಸಂಘಟನೆ ಮಾತ್ರವಲ್ಲ, ಯಕ್ಷಗಾನ ರಂಗದ ಒಬ್ಬ ಸಾಧಕನನ್ನು ಗುರುತಿಸುವ ಮೂಲಕ ಈಗ ಇನ್ನೊಂದು ಹೆಜ್ಜೆಯತ್ತ ಸಾಗಿದೆ ಎಂದರು.

ವೇದಿಕೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪುರೋಹಿತ ಸರ್ವೇಶ್ವರ ಭಟ್‌ ಅವರು ಉಪಸ್ಥಿತರಿದ್ದರು. ಕಲಾವಿದ ಲಕ್ಷ್ಮಣ ಕುಮಾರ್ ಮರಕಡ ಸನ್ಮಾನ ಪತ್ರ ವಾಚಿಸಿದರು. ಇದೇ ವೇಳೆ, ಈಚೆಗಷ್ಟೆ ಅಗಲಿದ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಅವರಿಗೆ ಶ್ರದ್ಧಾಂಜಲಿ ನಡೆಯಿತು. ಕರ್ನಾಟಕ ಯಕ್ಷಗಾನ ಅಕಾಡಮಿ ಬೆಂಗಳೂರು ಇದರ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗೆ ಕಾರ್ಯಕ್ರಮ ಉದ್ಘಾಟನೆ ಮತ್ತು ಚಿಂತನಾಗೋಷ್ಠಿ ನಡೆಯಿತು. ಸಂಜೆ ಶ್ರೀದೇವೀ ಮಹಾತ್ಮ್ಯೆ ಯಕ್ಷಗಾನ ಪ್ರದರ್ಶನ ನಡೆಯಿತು. ನೂರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

15 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

1 day ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago