ಕಲೆ ಯಾರ ಸ್ವತ್ತು ಅಲ್ಲ ಅನ್ನೋ ಮಾತಿದೆ. ಕಲಾವಿದರು ಅಂದ್ರೆ ಬರೇ ಕಾಗದದ ಮೇಲೆ ಕುಂಚ ಹಿಡಿದು ಚಿತ್ರ ಬಿಡುಸುವವರು ಮಾತ್ರ ಅಲ್ಲ. ಕೆಲವರು ತಮ್ಮ ವೃತ್ತಿಯಲ್ಲೆ ಹೊಸದಾದ ನೈಪುಣ್ಯತೆಯನ್ನು ಕಲೆಯ ರೂಪದಲ್ಲಿ ತೋರಿಸುತ್ತಾರೆ.
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ #MeghrajGudatti ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ #NationalFlag ಮತ್ತು ಚಂದ್ರಯಾನ-3 #Chandrayaan-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.
ದೇಶದಲ್ಲೇ ಪ್ರಖ್ಯಾತಿ ಹಾಗೂ ಪ್ರಸಿದ್ದಿಯನ್ನು ಪಡೆದಿರುವ ಇಳಕಲ್ ಸೀರೆಯ ಮೇಲೆ ಮೇಘರಾಜ್ ಅವರು ಕಲಾ ನೈಪುಣ್ಯ ಪ್ರದರ್ಶಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಅಯೋಧ್ಯೆಯ ರಾಮಮಂದಿರದ ಅಡಿಗಲ್ಲು ಹಾಕುವಾಗ ಸೀರೆಯಲ್ಲಿ ರಾಮಮಂದಿರದ ನೀಲನಕ್ಷೆಯನ್ನು ಬಿಡಿಸಿ ಅಭಿಮಾನ ಮೆರೆದಿದ್ದರು.
ಪುನೀತ್ ರಾಜ್ಕುಮಾರ್ ಅವರ ಕೊನೆಯ ಜೇಮ್ಸ್ ಚಿತ್ರಕ್ಕೆ ವಿಶೇಷ ಶುಭಾಶಯಗಳನ್ನು ಕೋರಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದ್ದರು. ಅಲ್ಲದೇ ಕಾಂತಾರ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗಲಿ ಎಂದು ಸೀರೆಯಲ್ಲಿ ಶುಭ ಕೋರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…