ಕಲೆ ಯಾರ ಸ್ವತ್ತು ಅಲ್ಲ ಅನ್ನೋ ಮಾತಿದೆ. ಕಲಾವಿದರು ಅಂದ್ರೆ ಬರೇ ಕಾಗದದ ಮೇಲೆ ಕುಂಚ ಹಿಡಿದು ಚಿತ್ರ ಬಿಡುಸುವವರು ಮಾತ್ರ ಅಲ್ಲ. ಕೆಲವರು ತಮ್ಮ ವೃತ್ತಿಯಲ್ಲೆ ಹೊಸದಾದ ನೈಪುಣ್ಯತೆಯನ್ನು ಕಲೆಯ ರೂಪದಲ್ಲಿ ತೋರಿಸುತ್ತಾರೆ.
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ #MeghrajGudatti ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ #NationalFlag ಮತ್ತು ಚಂದ್ರಯಾನ-3 #Chandrayaan-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.
ದೇಶದಲ್ಲೇ ಪ್ರಖ್ಯಾತಿ ಹಾಗೂ ಪ್ರಸಿದ್ದಿಯನ್ನು ಪಡೆದಿರುವ ಇಳಕಲ್ ಸೀರೆಯ ಮೇಲೆ ಮೇಘರಾಜ್ ಅವರು ಕಲಾ ನೈಪುಣ್ಯ ಪ್ರದರ್ಶಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಅಯೋಧ್ಯೆಯ ರಾಮಮಂದಿರದ ಅಡಿಗಲ್ಲು ಹಾಕುವಾಗ ಸೀರೆಯಲ್ಲಿ ರಾಮಮಂದಿರದ ನೀಲನಕ್ಷೆಯನ್ನು ಬಿಡಿಸಿ ಅಭಿಮಾನ ಮೆರೆದಿದ್ದರು.
ಪುನೀತ್ ರಾಜ್ಕುಮಾರ್ ಅವರ ಕೊನೆಯ ಜೇಮ್ಸ್ ಚಿತ್ರಕ್ಕೆ ವಿಶೇಷ ಶುಭಾಶಯಗಳನ್ನು ಕೋರಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದ್ದರು. ಅಲ್ಲದೇ ಕಾಂತಾರ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗಲಿ ಎಂದು ಸೀರೆಯಲ್ಲಿ ಶುಭ ಕೋರಿದ್ದರು.
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…
ರಾಜ್ಯದಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗಿದ್ದು, ಮೇ ಅಂತ್ಯದವರೆಗೂ ಜೋರು ಮಳೆಯ ಸಾಧ್ಯತೆ ಕಡಿಮೆ…
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…