ಕಲೆ ಯಾರ ಸ್ವತ್ತು ಅಲ್ಲ ಅನ್ನೋ ಮಾತಿದೆ. ಕಲಾವಿದರು ಅಂದ್ರೆ ಬರೇ ಕಾಗದದ ಮೇಲೆ ಕುಂಚ ಹಿಡಿದು ಚಿತ್ರ ಬಿಡುಸುವವರು ಮಾತ್ರ ಅಲ್ಲ. ಕೆಲವರು ತಮ್ಮ ವೃತ್ತಿಯಲ್ಲೆ ಹೊಸದಾದ ನೈಪುಣ್ಯತೆಯನ್ನು ಕಲೆಯ ರೂಪದಲ್ಲಿ ತೋರಿಸುತ್ತಾರೆ.
ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ #MeghrajGudatti ಅವರು ಇಳಕಲ್ ಸೀರೆಯಲ್ಲಿ ರಾಷ್ಟ್ರಧ್ವಜ #NationalFlag ಮತ್ತು ಚಂದ್ರಯಾನ-3 #Chandrayaan-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.
ದೇಶದಲ್ಲೇ ಪ್ರಖ್ಯಾತಿ ಹಾಗೂ ಪ್ರಸಿದ್ದಿಯನ್ನು ಪಡೆದಿರುವ ಇಳಕಲ್ ಸೀರೆಯ ಮೇಲೆ ಮೇಘರಾಜ್ ಅವರು ಕಲಾ ನೈಪುಣ್ಯ ಪ್ರದರ್ಶಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಅಯೋಧ್ಯೆಯ ರಾಮಮಂದಿರದ ಅಡಿಗಲ್ಲು ಹಾಕುವಾಗ ಸೀರೆಯಲ್ಲಿ ರಾಮಮಂದಿರದ ನೀಲನಕ್ಷೆಯನ್ನು ಬಿಡಿಸಿ ಅಭಿಮಾನ ಮೆರೆದಿದ್ದರು.
ಪುನೀತ್ ರಾಜ್ಕುಮಾರ್ ಅವರ ಕೊನೆಯ ಜೇಮ್ಸ್ ಚಿತ್ರಕ್ಕೆ ವಿಶೇಷ ಶುಭಾಶಯಗಳನ್ನು ಕೋರಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದ್ದರು. ಅಲ್ಲದೇ ಕಾಂತಾರ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗಲಿ ಎಂದು ಸೀರೆಯಲ್ಲಿ ಶುಭ ಕೋರಿದ್ದರು.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…