ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ.
ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ ಸಭೆ ಆಯೋಜನೆಯಾಗಿತ್ತು. ಸಭಾಂಗಣವು ಕಿಕ್ಕಿರಿದು ತುಂಬಿತ್ತು. ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷೇತರವಾದರೂ ಸ್ಫರ್ಧೆ ಮಾಡಲೇಬೇಕು, ಹಿಂದುತ್ವಕ್ಕೆ ನಿಜವಾದ ಬೆಲೆ ಸಿಗಬೇಕು ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಕಳೆದ ಬಾರಿ ಕೂಡಾ ಇದೇ ರೀತಿ ಮಾಡಲಾಗಿತ್ತು. ಕೊನೆಯ ಕ್ಷಣದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪ್ರಮುಖರು ನೀಡಿದ್ದರು. ಆದರೆ ಇಂದಿನವರೆಗೂ ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿ ಈ ಬಾರಿ ಸ್ಫರ್ಧೆ ಮಾಡಲೇಬೇಕು ಎಂದು ಅರುಣ್ ಕುಮಾರ್ ಬೆಂಬಲಿಗರು ಪ್ರತಿಪಾದನೆ ಮಾಡುತ್ತಿದ್ದಾರೆ.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…