ಸುದ್ದಿಗಳು

ನಿಲುಮೆಯಲ್ಲಿ ಅರುಣ್‌ ಕುಮಾರ್‌ ಪುತ್ತಿಲ ನಾಯಕನಾಗಿ ಬೆಳೆದ ಬಗ್ಗೆ ಚರ್ಚೆ | ಅರುಣ್‌ ಪುತ್ತಿಲ ಪರವಾಗಿಯೇ ಹಿಂದೂ ಕಾರ್ಯಕರ್ತರಿಂದ ಬ್ಯಾಟಿಂಗ್‌ |

Share

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯಕರ್ತರ ಅಭಿಲಾಷೆಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ಧಿಸಿದ್ದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರ ಪರವಾಗಿ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಬ್ಯಾಟಿಂಗ್‌ ಶುರುವಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ನಿಜವಾದ ಹಿಂದೂ ನಾಯಕ ಎಂದು  ಹಿಂದೂ ಸಂಘಟನೆಗಳ ಕಾರ್ಯಕರ್ತರು ಬ್ಯಾಂಟಿಗ್‌ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ಪೇಸ್‌ಬುಕ್‌ನ ನಿಲುಮೆ ಗುಂಪಿನಲ್ಲೂ ಚರ್ಚೆಯಾಗಿದೆ.

Advertisement

ಅರುಣ್‌ ಕುಮಾರ್‌ ಪುತ್ತಿಲ ಅವರು ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಭೇಟಿ, ನೆರವು ಇತ್ಯಾದಿಗಳ ಮೂಲಕ ಗಮನ ಸೆಳೆದಿದ್ದರು. ಈಚೆಗೆ ಗಣೇಶೋತ್ಸವ ಸಂದರ್ಭ 50 ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಿವಮೊಗ್ಗ ಘಟನೆ, ಪುನೀತ್‌ ಕೆರೆಹಳ್ಳಿ ಅವರ ಉಪವಾಸ ಕಾರ್ಯಕ್ರಮ ಹಾಗೂ ಆ ಬಳಿಕದ ಘಟನೆಗಳ ಮೂಲಕ ಮತ್ತೆ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ಮತ್ತೆ ಸಂಚಲನ ಆರಂಭವಾಗಿದೆ.

ಈಚೆಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ನಿಲುಮೆ ಗುಂಪಿನಲ್ಲೂ ಅರುಣ್‌ ಕುಮಾರ್‌ ಪುತ್ತಿಲ ಅವರ ಬಗ್ಗೆ ಚರ್ಚೆಯಾಗಿದೆ. ಒಬ್ಬ ನಾಯಕ ಬೆಳೆಯಬೇಕಾದ್ದು ತಾನೇ ಆಗಿ ಎನ್ನುವ ಪೋಸ್ಟ್‌ ಒಂದು ಕಂಡುಬಂದಿತ್ತು. ಇದರಲ್ಲಿ ಅನೇಕ ಪ್ರತಿಕ್ರಿಯೆಗಳು ಕಂಡುಬಂದಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರಂತಹ ನಾಯಕರು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಅಗತ್ಯ ಇದ್ದಾರೆ ಎಂದು ಚರ್ಚೆಯಾಗಿದೆ.

ಈ ನಡುವೆ ಶಿವಮೊಗ್ಗ ಘಟನೆಗೆ ಇನ್ನೊಂದು ಪ್ರತಿಕ್ರಿಯೆ ನೀಡಿದ ಅರುಣ್‌ ಕುಮಾರ್‌ ಪುತ್ತಿಲ,  ರಾಗಿಗುಡ್ಡದಂತೆ ಕಾಂಗ್ರೇಸ್‍ ಶಾಸಕ ಅಖಂಡ ಶ್ರೀನಿವಾಸರ ಮನೆಗೆ ದಾಳಿ ಮಾಡುವಾಗ ಮತಾಂಧರು ಪಕ್ಷ ನೋಡಿಲ್ಲ – ಸಿದ್ದರಾಮಯ್ಯ , ಪರಮೇಶ್ವರ್ ರವರೂ ಕೂಡ ಹಿಂದೂಗಳೇ, ಓಲೈಕೆ ರಾಜಕಾರಣ ಮಾಡಿದರೆ ಮುಂದೊಂದು ದಿನ ನಿಮಗೂ ದೊಡ್ಡದಾಗಿರುವ ಗಂಡಾಂತರ ತಪ್ಪಿದ್ದಲ್ಲ.ರಾಗಿಗುಡ್ಡದಲ್ಲಿ ಪ್ರತಿ ಮನೆ ಮನೆಗೆ ಹೋಗಿದ್ದೇನೆ ಅನ್ಯಾಯಕ್ಕೊಳಕ್ಕಾದವರ ಸ್ಥಿತಿ ಕಂಡಾಗ ಕಣ್ಣೀರು ಬರ್ತದೆ. ಮತಾಂಧರು ಈ ರೀತಿಯ ಭಯೋತ್ಪಾದನೆಗೆ ಇಳಿದರೆ ನಾವು ನಮ್ಮ ರಕ್ಷಣೆಗೆ ತಲವಾರು ಹಿಡಿಯಲೇಬೇಕು. ಶಿವಮೊಗ್ಗದಲ್ಲಿ ಹೇಳಿದ ಈ ಮಾತಿಗೆ ನಾನು ಈಗಲೂ ಬದ್. ಕೇಸಿಗೆ ಹೆದರುವ ಜಾಯಮಾನ ನನ್ನದಲ್ಲ – ಹಿಂದೂಗಳೊಂದಿಗೆ ಸದಾ ಜೊತೆಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಳಿಕ ಮತ್ತಷ್ಟು ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಪುತ್ತಿಲ ಅವರ ನಡೆ ಇಷ್ಟವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

2 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

3 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

3 hours ago

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…

10 hours ago

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ

ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…

11 hours ago

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…

12 hours ago