Advertisement
ಸುದ್ದಿಗಳು

ನಿಲುಮೆಯಲ್ಲಿ ಅರುಣ್‌ ಕುಮಾರ್‌ ಪುತ್ತಿಲ ನಾಯಕನಾಗಿ ಬೆಳೆದ ಬಗ್ಗೆ ಚರ್ಚೆ | ಅರುಣ್‌ ಪುತ್ತಿಲ ಪರವಾಗಿಯೇ ಹಿಂದೂ ಕಾರ್ಯಕರ್ತರಿಂದ ಬ್ಯಾಟಿಂಗ್‌ |

Share

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯಕರ್ತರ ಅಭಿಲಾಷೆಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ಧಿಸಿದ್ದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರ ಪರವಾಗಿ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಬ್ಯಾಟಿಂಗ್‌ ಶುರುವಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ನಿಜವಾದ ಹಿಂದೂ ನಾಯಕ ಎಂದು  ಹಿಂದೂ ಸಂಘಟನೆಗಳ ಕಾರ್ಯಕರ್ತರು ಬ್ಯಾಂಟಿಗ್‌ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ಪೇಸ್‌ಬುಕ್‌ನ ನಿಲುಮೆ ಗುಂಪಿನಲ್ಲೂ ಚರ್ಚೆಯಾಗಿದೆ.

Advertisement
Advertisement
Advertisement
Advertisement

ಅರುಣ್‌ ಕುಮಾರ್‌ ಪುತ್ತಿಲ ಅವರು ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಭೇಟಿ, ನೆರವು ಇತ್ಯಾದಿಗಳ ಮೂಲಕ ಗಮನ ಸೆಳೆದಿದ್ದರು. ಈಚೆಗೆ ಗಣೇಶೋತ್ಸವ ಸಂದರ್ಭ 50 ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಿವಮೊಗ್ಗ ಘಟನೆ, ಪುನೀತ್‌ ಕೆರೆಹಳ್ಳಿ ಅವರ ಉಪವಾಸ ಕಾರ್ಯಕ್ರಮ ಹಾಗೂ ಆ ಬಳಿಕದ ಘಟನೆಗಳ ಮೂಲಕ ಮತ್ತೆ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ಮತ್ತೆ ಸಂಚಲನ ಆರಂಭವಾಗಿದೆ.

Advertisement

ಈಚೆಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ನಿಲುಮೆ ಗುಂಪಿನಲ್ಲೂ ಅರುಣ್‌ ಕುಮಾರ್‌ ಪುತ್ತಿಲ ಅವರ ಬಗ್ಗೆ ಚರ್ಚೆಯಾಗಿದೆ. ಒಬ್ಬ ನಾಯಕ ಬೆಳೆಯಬೇಕಾದ್ದು ತಾನೇ ಆಗಿ ಎನ್ನುವ ಪೋಸ್ಟ್‌ ಒಂದು ಕಂಡುಬಂದಿತ್ತು. ಇದರಲ್ಲಿ ಅನೇಕ ಪ್ರತಿಕ್ರಿಯೆಗಳು ಕಂಡುಬಂದಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರಂತಹ ನಾಯಕರು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಅಗತ್ಯ ಇದ್ದಾರೆ ಎಂದು ಚರ್ಚೆಯಾಗಿದೆ.

Advertisement

ಈ ನಡುವೆ ಶಿವಮೊಗ್ಗ ಘಟನೆಗೆ ಇನ್ನೊಂದು ಪ್ರತಿಕ್ರಿಯೆ ನೀಡಿದ ಅರುಣ್‌ ಕುಮಾರ್‌ ಪುತ್ತಿಲ,  ರಾಗಿಗುಡ್ಡದಂತೆ ಕಾಂಗ್ರೇಸ್‍ ಶಾಸಕ ಅಖಂಡ ಶ್ರೀನಿವಾಸರ ಮನೆಗೆ ದಾಳಿ ಮಾಡುವಾಗ ಮತಾಂಧರು ಪಕ್ಷ ನೋಡಿಲ್ಲ – ಸಿದ್ದರಾಮಯ್ಯ , ಪರಮೇಶ್ವರ್ ರವರೂ ಕೂಡ ಹಿಂದೂಗಳೇ, ಓಲೈಕೆ ರಾಜಕಾರಣ ಮಾಡಿದರೆ ಮುಂದೊಂದು ದಿನ ನಿಮಗೂ ದೊಡ್ಡದಾಗಿರುವ ಗಂಡಾಂತರ ತಪ್ಪಿದ್ದಲ್ಲ.ರಾಗಿಗುಡ್ಡದಲ್ಲಿ ಪ್ರತಿ ಮನೆ ಮನೆಗೆ ಹೋಗಿದ್ದೇನೆ ಅನ್ಯಾಯಕ್ಕೊಳಕ್ಕಾದವರ ಸ್ಥಿತಿ ಕಂಡಾಗ ಕಣ್ಣೀರು ಬರ್ತದೆ. ಮತಾಂಧರು ಈ ರೀತಿಯ ಭಯೋತ್ಪಾದನೆಗೆ ಇಳಿದರೆ ನಾವು ನಮ್ಮ ರಕ್ಷಣೆಗೆ ತಲವಾರು ಹಿಡಿಯಲೇಬೇಕು. ಶಿವಮೊಗ್ಗದಲ್ಲಿ ಹೇಳಿದ ಈ ಮಾತಿಗೆ ನಾನು ಈಗಲೂ ಬದ್. ಕೇಸಿಗೆ ಹೆದರುವ ಜಾಯಮಾನ ನನ್ನದಲ್ಲ – ಹಿಂದೂಗಳೊಂದಿಗೆ ಸದಾ ಜೊತೆಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಳಿಕ ಮತ್ತಷ್ಟು ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಪುತ್ತಿಲ ಅವರ ನಡೆ ಇಷ್ಟವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

4 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

4 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

5 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

5 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

19 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

19 hours ago