ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯಕರ್ತರ ಅಭಿಲಾಷೆಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ಧಿಸಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಪರವಾಗಿ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಬ್ಯಾಟಿಂಗ್ ಶುರುವಾಗಿದೆ. ಅರುಣ್ ಕುಮಾರ್ ಪುತ್ತಿಲ ಅವರೇ ನಿಜವಾದ ಹಿಂದೂ ನಾಯಕ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಬ್ಯಾಂಟಿಗ್ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ಪೇಸ್ಬುಕ್ನ ನಿಲುಮೆ ಗುಂಪಿನಲ್ಲೂ ಚರ್ಚೆಯಾಗಿದೆ.
ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಭೇಟಿ, ನೆರವು ಇತ್ಯಾದಿಗಳ ಮೂಲಕ ಗಮನ ಸೆಳೆದಿದ್ದರು. ಈಚೆಗೆ ಗಣೇಶೋತ್ಸವ ಸಂದರ್ಭ 50 ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಿವಮೊಗ್ಗ ಘಟನೆ, ಪುನೀತ್ ಕೆರೆಹಳ್ಳಿ ಅವರ ಉಪವಾಸ ಕಾರ್ಯಕ್ರಮ ಹಾಗೂ ಆ ಬಳಿಕದ ಘಟನೆಗಳ ಮೂಲಕ ಮತ್ತೆ ಅರುಣ್ ಕುಮಾರ್ ಪುತ್ತಿಲ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ಮತ್ತೆ ಸಂಚಲನ ಆರಂಭವಾಗಿದೆ.
ಈಚೆಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ನಿಲುಮೆ ಗುಂಪಿನಲ್ಲೂ ಅರುಣ್ ಕುಮಾರ್ ಪುತ್ತಿಲ ಅವರ ಬಗ್ಗೆ ಚರ್ಚೆಯಾಗಿದೆ. ಒಬ್ಬ ನಾಯಕ ಬೆಳೆಯಬೇಕಾದ್ದು ತಾನೇ ಆಗಿ ಎನ್ನುವ ಪೋಸ್ಟ್ ಒಂದು ಕಂಡುಬಂದಿತ್ತು. ಇದರಲ್ಲಿ ಅನೇಕ ಪ್ರತಿಕ್ರಿಯೆಗಳು ಕಂಡುಬಂದಿದೆ. ಅರುಣ್ ಕುಮಾರ್ ಪುತ್ತಿಲ ಅವರಂತಹ ನಾಯಕರು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಅಗತ್ಯ ಇದ್ದಾರೆ ಎಂದು ಚರ್ಚೆಯಾಗಿದೆ.
ಈ ನಡುವೆ ಶಿವಮೊಗ್ಗ ಘಟನೆಗೆ ಇನ್ನೊಂದು ಪ್ರತಿಕ್ರಿಯೆ ನೀಡಿದ ಅರುಣ್ ಕುಮಾರ್ ಪುತ್ತಿಲ, ರಾಗಿಗುಡ್ಡದಂತೆ ಕಾಂಗ್ರೇಸ್ ಶಾಸಕ ಅಖಂಡ ಶ್ರೀನಿವಾಸರ ಮನೆಗೆ ದಾಳಿ ಮಾಡುವಾಗ ಮತಾಂಧರು ಪಕ್ಷ ನೋಡಿಲ್ಲ – ಸಿದ್ದರಾಮಯ್ಯ , ಪರಮೇಶ್ವರ್ ರವರೂ ಕೂಡ ಹಿಂದೂಗಳೇ, ಓಲೈಕೆ ರಾಜಕಾರಣ ಮಾಡಿದರೆ ಮುಂದೊಂದು ದಿನ ನಿಮಗೂ ದೊಡ್ಡದಾಗಿರುವ ಗಂಡಾಂತರ ತಪ್ಪಿದ್ದಲ್ಲ.ರಾಗಿಗುಡ್ಡದಲ್ಲಿ ಪ್ರತಿ ಮನೆ ಮನೆಗೆ ಹೋಗಿದ್ದೇನೆ ಅನ್ಯಾಯಕ್ಕೊಳಕ್ಕಾದವರ ಸ್ಥಿತಿ ಕಂಡಾಗ ಕಣ್ಣೀರು ಬರ್ತದೆ. ಮತಾಂಧರು ಈ ರೀತಿಯ ಭಯೋತ್ಪಾದನೆಗೆ ಇಳಿದರೆ ನಾವು ನಮ್ಮ ರಕ್ಷಣೆಗೆ ತಲವಾರು ಹಿಡಿಯಲೇಬೇಕು. ಶಿವಮೊಗ್ಗದಲ್ಲಿ ಹೇಳಿದ ಈ ಮಾತಿಗೆ ನಾನು ಈಗಲೂ ಬದ್. ಕೇಸಿಗೆ ಹೆದರುವ ಜಾಯಮಾನ ನನ್ನದಲ್ಲ – ಹಿಂದೂಗಳೊಂದಿಗೆ ಸದಾ ಜೊತೆಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಳಿಕ ಮತ್ತಷ್ಟು ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಪುತ್ತಿಲ ಅವರ ನಡೆ ಇಷ್ಟವಾಗಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…