Advertisement
ಸುದ್ದಿಗಳು

ನಿಲುಮೆಯಲ್ಲಿ ಅರುಣ್‌ ಕುಮಾರ್‌ ಪುತ್ತಿಲ ನಾಯಕನಾಗಿ ಬೆಳೆದ ಬಗ್ಗೆ ಚರ್ಚೆ | ಅರುಣ್‌ ಪುತ್ತಿಲ ಪರವಾಗಿಯೇ ಹಿಂದೂ ಕಾರ್ಯಕರ್ತರಿಂದ ಬ್ಯಾಟಿಂಗ್‌ |

Share

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯಕರ್ತರ ಅಭಿಲಾಷೆಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ಧಿಸಿದ್ದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರ ಪರವಾಗಿ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಬ್ಯಾಟಿಂಗ್‌ ಶುರುವಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ನಿಜವಾದ ಹಿಂದೂ ನಾಯಕ ಎಂದು  ಹಿಂದೂ ಸಂಘಟನೆಗಳ ಕಾರ್ಯಕರ್ತರು ಬ್ಯಾಂಟಿಗ್‌ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ಪೇಸ್‌ಬುಕ್‌ನ ನಿಲುಮೆ ಗುಂಪಿನಲ್ಲೂ ಚರ್ಚೆಯಾಗಿದೆ.

ಅರುಣ್‌ ಕುಮಾರ್‌ ಪುತ್ತಿಲ ಅವರು ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಭೇಟಿ, ನೆರವು ಇತ್ಯಾದಿಗಳ ಮೂಲಕ ಗಮನ ಸೆಳೆದಿದ್ದರು. ಈಚೆಗೆ ಗಣೇಶೋತ್ಸವ ಸಂದರ್ಭ 50 ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಿವಮೊಗ್ಗ ಘಟನೆ, ಪುನೀತ್‌ ಕೆರೆಹಳ್ಳಿ ಅವರ ಉಪವಾಸ ಕಾರ್ಯಕ್ರಮ ಹಾಗೂ ಆ ಬಳಿಕದ ಘಟನೆಗಳ ಮೂಲಕ ಮತ್ತೆ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ಮತ್ತೆ ಸಂಚಲನ ಆರಂಭವಾಗಿದೆ.

Advertisement

ಈಚೆಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ನಿಲುಮೆ ಗುಂಪಿನಲ್ಲೂ ಅರುಣ್‌ ಕುಮಾರ್‌ ಪುತ್ತಿಲ ಅವರ ಬಗ್ಗೆ ಚರ್ಚೆಯಾಗಿದೆ. ಒಬ್ಬ ನಾಯಕ ಬೆಳೆಯಬೇಕಾದ್ದು ತಾನೇ ಆಗಿ ಎನ್ನುವ ಪೋಸ್ಟ್‌ ಒಂದು ಕಂಡುಬಂದಿತ್ತು. ಇದರಲ್ಲಿ ಅನೇಕ ಪ್ರತಿಕ್ರಿಯೆಗಳು ಕಂಡುಬಂದಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರಂತಹ ನಾಯಕರು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಅಗತ್ಯ ಇದ್ದಾರೆ ಎಂದು ಚರ್ಚೆಯಾಗಿದೆ.

Advertisement

ಈ ನಡುವೆ ಶಿವಮೊಗ್ಗ ಘಟನೆಗೆ ಇನ್ನೊಂದು ಪ್ರತಿಕ್ರಿಯೆ ನೀಡಿದ ಅರುಣ್‌ ಕುಮಾರ್‌ ಪುತ್ತಿಲ,  ರಾಗಿಗುಡ್ಡದಂತೆ ಕಾಂಗ್ರೇಸ್‍ ಶಾಸಕ ಅಖಂಡ ಶ್ರೀನಿವಾಸರ ಮನೆಗೆ ದಾಳಿ ಮಾಡುವಾಗ ಮತಾಂಧರು ಪಕ್ಷ ನೋಡಿಲ್ಲ – ಸಿದ್ದರಾಮಯ್ಯ , ಪರಮೇಶ್ವರ್ ರವರೂ ಕೂಡ ಹಿಂದೂಗಳೇ, ಓಲೈಕೆ ರಾಜಕಾರಣ ಮಾಡಿದರೆ ಮುಂದೊಂದು ದಿನ ನಿಮಗೂ ದೊಡ್ಡದಾಗಿರುವ ಗಂಡಾಂತರ ತಪ್ಪಿದ್ದಲ್ಲ.ರಾಗಿಗುಡ್ಡದಲ್ಲಿ ಪ್ರತಿ ಮನೆ ಮನೆಗೆ ಹೋಗಿದ್ದೇನೆ ಅನ್ಯಾಯಕ್ಕೊಳಕ್ಕಾದವರ ಸ್ಥಿತಿ ಕಂಡಾಗ ಕಣ್ಣೀರು ಬರ್ತದೆ. ಮತಾಂಧರು ಈ ರೀತಿಯ ಭಯೋತ್ಪಾದನೆಗೆ ಇಳಿದರೆ ನಾವು ನಮ್ಮ ರಕ್ಷಣೆಗೆ ತಲವಾರು ಹಿಡಿಯಲೇಬೇಕು. ಶಿವಮೊಗ್ಗದಲ್ಲಿ ಹೇಳಿದ ಈ ಮಾತಿಗೆ ನಾನು ಈಗಲೂ ಬದ್. ಕೇಸಿಗೆ ಹೆದರುವ ಜಾಯಮಾನ ನನ್ನದಲ್ಲ – ಹಿಂದೂಗಳೊಂದಿಗೆ ಸದಾ ಜೊತೆಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಳಿಕ ಮತ್ತಷ್ಟು ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಪುತ್ತಿಲ ಅವರ ನಡೆ ಇಷ್ಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago