Advertisement
ಸುದ್ದಿಗಳು

ನಿಲುಮೆಯಲ್ಲಿ ಅರುಣ್‌ ಕುಮಾರ್‌ ಪುತ್ತಿಲ ನಾಯಕನಾಗಿ ಬೆಳೆದ ಬಗ್ಗೆ ಚರ್ಚೆ | ಅರುಣ್‌ ಪುತ್ತಿಲ ಪರವಾಗಿಯೇ ಹಿಂದೂ ಕಾರ್ಯಕರ್ತರಿಂದ ಬ್ಯಾಟಿಂಗ್‌ |

Share

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಕಾರ್ಯಕರ್ತರ ಅಭಿಲಾಷೆಯಂತೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ಧಿಸಿದ್ದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರ ಪರವಾಗಿ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಬ್ಯಾಟಿಂಗ್‌ ಶುರುವಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ನಿಜವಾದ ಹಿಂದೂ ನಾಯಕ ಎಂದು  ಹಿಂದೂ ಸಂಘಟನೆಗಳ ಕಾರ್ಯಕರ್ತರು ಬ್ಯಾಂಟಿಗ್‌ ಮಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ಪೇಸ್‌ಬುಕ್‌ನ ನಿಲುಮೆ ಗುಂಪಿನಲ್ಲೂ ಚರ್ಚೆಯಾಗಿದೆ.

ಅರುಣ್‌ ಕುಮಾರ್‌ ಪುತ್ತಿಲ ಅವರು ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಭೇಟಿ, ನೆರವು ಇತ್ಯಾದಿಗಳ ಮೂಲಕ ಗಮನ ಸೆಳೆದಿದ್ದರು. ಈಚೆಗೆ ಗಣೇಶೋತ್ಸವ ಸಂದರ್ಭ 50 ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಿವಮೊಗ್ಗ ಘಟನೆ, ಪುನೀತ್‌ ಕೆರೆಹಳ್ಳಿ ಅವರ ಉಪವಾಸ ಕಾರ್ಯಕ್ರಮ ಹಾಗೂ ಆ ಬಳಿಕದ ಘಟನೆಗಳ ಮೂಲಕ ಮತ್ತೆ ಅರುಣ್‌ ಕುಮಾರ್‌ ಪುತ್ತಿಲ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲಿ ಮತ್ತೆ ಸಂಚಲನ ಆರಂಭವಾಗಿದೆ.

ಈಚೆಗೆ ಸಾಮಾಜಿಕ ಸಂಗತಿಗಳ ಬಗ್ಗೆ ಚರ್ಚೆಯಾಗುವ ನಿಲುಮೆ ಗುಂಪಿನಲ್ಲೂ ಅರುಣ್‌ ಕುಮಾರ್‌ ಪುತ್ತಿಲ ಅವರ ಬಗ್ಗೆ ಚರ್ಚೆಯಾಗಿದೆ. ಒಬ್ಬ ನಾಯಕ ಬೆಳೆಯಬೇಕಾದ್ದು ತಾನೇ ಆಗಿ ಎನ್ನುವ ಪೋಸ್ಟ್‌ ಒಂದು ಕಂಡುಬಂದಿತ್ತು. ಇದರಲ್ಲಿ ಅನೇಕ ಪ್ರತಿಕ್ರಿಯೆಗಳು ಕಂಡುಬಂದಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರಂತಹ ನಾಯಕರು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಅಗತ್ಯ ಇದ್ದಾರೆ ಎಂದು ಚರ್ಚೆಯಾಗಿದೆ.

ಈ ನಡುವೆ ಶಿವಮೊಗ್ಗ ಘಟನೆಗೆ ಇನ್ನೊಂದು ಪ್ರತಿಕ್ರಿಯೆ ನೀಡಿದ ಅರುಣ್‌ ಕುಮಾರ್‌ ಪುತ್ತಿಲ,  ರಾಗಿಗುಡ್ಡದಂತೆ ಕಾಂಗ್ರೇಸ್‍ ಶಾಸಕ ಅಖಂಡ ಶ್ರೀನಿವಾಸರ ಮನೆಗೆ ದಾಳಿ ಮಾಡುವಾಗ ಮತಾಂಧರು ಪಕ್ಷ ನೋಡಿಲ್ಲ – ಸಿದ್ದರಾಮಯ್ಯ , ಪರಮೇಶ್ವರ್ ರವರೂ ಕೂಡ ಹಿಂದೂಗಳೇ, ಓಲೈಕೆ ರಾಜಕಾರಣ ಮಾಡಿದರೆ ಮುಂದೊಂದು ದಿನ ನಿಮಗೂ ದೊಡ್ಡದಾಗಿರುವ ಗಂಡಾಂತರ ತಪ್ಪಿದ್ದಲ್ಲ.ರಾಗಿಗುಡ್ಡದಲ್ಲಿ ಪ್ರತಿ ಮನೆ ಮನೆಗೆ ಹೋಗಿದ್ದೇನೆ ಅನ್ಯಾಯಕ್ಕೊಳಕ್ಕಾದವರ ಸ್ಥಿತಿ ಕಂಡಾಗ ಕಣ್ಣೀರು ಬರ್ತದೆ. ಮತಾಂಧರು ಈ ರೀತಿಯ ಭಯೋತ್ಪಾದನೆಗೆ ಇಳಿದರೆ ನಾವು ನಮ್ಮ ರಕ್ಷಣೆಗೆ ತಲವಾರು ಹಿಡಿಯಲೇಬೇಕು. ಶಿವಮೊಗ್ಗದಲ್ಲಿ ಹೇಳಿದ ಈ ಮಾತಿಗೆ ನಾನು ಈಗಲೂ ಬದ್. ಕೇಸಿಗೆ ಹೆದರುವ ಜಾಯಮಾನ ನನ್ನದಲ್ಲ – ಹಿಂದೂಗಳೊಂದಿಗೆ ಸದಾ ಜೊತೆಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬಳಿಕ ಮತ್ತಷ್ಟು ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ಪುತ್ತಿಲ ಅವರ ನಡೆ ಇಷ್ಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

6 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago