ಬೆಳ್ತಂಗಡಿಯಲ್ಲಿ ಮನೆ ಅಡಿಪಾಯ ತೆರವು ಪ್ರಕರಣ | ಪ್ರತಿಭಟನಾ ನಿರತರಿಗೆ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲ

October 9, 2023
6:59 PM

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್‌ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.

ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror