ನೆರವಿಗೆ ನೆರವು…! | ಪುತ್ತೂರಿನ ಚುನಾವಣಾ ಕಣದಲ್ಲಿ ಇತಿಹಾಸ ಬರೆದ ಅರುಣ್‌ ಪುತ್ತಿಲ | ಅದ್ಭುತ ಪ್ರತಿಕ್ರಿಯೆ ನೀಡಿದ ಮತದಾರರು |

April 30, 2023
9:22 AM

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಪರವಾಗಿ ಇದೀಗ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಂದು ನಮಗೆ ನೆರವು ನೀಡಿದ್ದಾರೆ, ಈಗ ನಿಮಗೆ ನೆರವು ನೀಡುತ್ತೇವೆ ಎಂದು  ಹೇಳುವ ಅಭಿಪ್ರಾಯ ಬಂದಿದೆ.

ಚುನಾವಣಾ ಕಣದಲ್ಲಿ ಕಾರ್ಯಕರ್ತರ ಮನವಿ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ  ಸ್ಫರ್ಧೆಗೆ ಇಳಿದಿದ್ದ ಅರುಣ್‌ ಕುಮಾರ್‌ ಪುತ್ತಿಲ  ಅವರ ವಿರುದ್ಧ ಇತರ ಪಕ್ಷಗಳು ಹಲವು ಆರೋಪಗಳನ್ನು, ಸುಳ್ಳು ಪ್ರಚಾರಗಳನ್ನು ಮಾಡುತ್ತಿರುವುದರಿಂದ ಬೇಸತ್ತ ಅರುಣ್ ಕುಮಾರ್ ಪುತ್ತಿಲರು ಎ.28ರ ಮಹಿಳಾ ಸಮಾವೇಶ ಸೀತಾ ಪರಿವಾರದಲ್ಲಿ ಚುನಾವಣೆ ಎದುರಿಸುವುದು ಕಷ್ಟಸಾಧ್ಯ ಅದಕ್ಕೆ ಅಧಿಕಾರ ಹಾಗೂ ಹಣ ಬಲ ಬೇಕು . ನಿಮ್ಮ ಓಟಿನ ಜೊತೆಗೆ 10 ರೂಪಾಯಿಯಂತೆ ನೀಡಿ ನಿಮ್ಮ ಮನೆ ಮಗನ ರೀತಿ ಬೆಂಬಲಿಸಿ ಎಂದು  ಮನವಿ ಮಾಡಿದ್ದರು. ಪುತ್ತಿಲರ ಮನವಿಗೆ ಮಿಡಿದ ಮತದಾರರು  ಸಹಾಯವನ್ನು ನೀಡುತ್ತಿದ್ದಾರೆ.ಕೇವಲ 12 ಗಂಟೆಯಲ್ಲಿ ಹರಿದು ಬಂತು 7.80 ಲಕ್ಷ ರೂಪಾಯಿ ಹರಿದುಬಂದಿದೆ.

ಪುತ್ತಿಲರ ಚುನಾವಣಾ ನಿರ್ವಹಣೆಯ ಐಟಿ ಸೆಲ್ ವತಿಯಿಂದ ಎ.29ರ ಮಧ್ಯಾಹ್ನ ಸಮಯ ಅಕೌಂಟ್ ನಂಬರ್ , ಕ್ಯೂ ಆರ್ ಕೋಡ್, ಯುಪಿಐ ನಂಬರ್ ನ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈ ಪೋಸ್ಟರ್ ರೀಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷದಷ್ಟು ಸಂಗ್ರಹ ಆಗಿತ್ತು. ಕುರಿಯದ ಬೆನ್ನುಮೂಲೆ ಮುರಿತಕ್ಕೊಳಕ್ಕಾದ ಸತೀಶ್ ಎನ್ನುವವರು 5 ಸಾವಿರ ಹಣ ಅರುಣ್ ಪುತ್ತಿಲರಿಗೆ ಹಾಕಿ ನಮಗೋಸ್ಕರ ದುಡಿಯುವವರು ಯಾವತ್ತೂ ಸೋಲಬಾರದು ಎನ್ನುವ ಸಂದೇಶ ಹಾಕಿದ್ದು ಅಭಿಮಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯೋರ್ವರು 30000 ಹಣ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮನೆ ಮನೆಯಿಂದ 10,50, 100, 500, 1000 ದಂತೆ ಹಣ ಸಂದಾಯವಾಗಿದೆ. ಹೊರ ತಾಲೂಕಿನವರೂ ಸ್ಪಂದಿಸಿದ್ದಾರೆ.12 ಗಂಟೆ ಅವಧಿಯಲ್ಲಿ ಈ ಖಾತೆಗೆ 7.80 ಲಕ್ಷ ರೂಪಾಯಿ ಹಣ ಹರಿದು ಬಂದಿದೆ.

ಕ್ಷೇತ್ರದಾದ್ಯಂತ ಅರುಣ್ ಪುತ್ತಿಲರ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ.ಅನೇಕರು ಅಂದು ನಮಗೆ ಸಹಾಯ ಮಾಡಿದ್ದೀರಿ, ಇಂದು ನಾವು ನಿಮ್ಮ ಜೊತೆಗಿದ್ದೇವೆ ಎಂದು ಹೇಳುತ್ತಿರುವುದು  ವಿಶೇಷವಾಗಿದೆ. ವ್ಯಕ್ತಿಯೊಬ್ಬರು ಅಪಘಾತಕ್ಕೆ ಒಳಗಾಗಿ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅರುಣ್‌ ಕುಮಾರ್‌ ಪುತ್ತಿಲ ಅವರು, ಅಂತಹ ವ್ಯಕ್ತಿಗಳೂ ಕಳೆದ ಕೆಲವು ದಿನಗಳಿಂದ ತಡರಾತ್ರಿವರೆಗೂ ಪುತ್ತಿಲ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಪಕ್ಷೇತರ ಅಭ್ಯರ್ಥಿ ಪುತ್ತೂರಿನಲ್ಲಿ ಹವಾ ಎಬ್ಬಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror