Advertisement
ಸುದ್ದಿಗಳು

ನೆರವಿಗೆ ನೆರವು…! | ಪುತ್ತೂರಿನ ಚುನಾವಣಾ ಕಣದಲ್ಲಿ ಇತಿಹಾಸ ಬರೆದ ಅರುಣ್‌ ಪುತ್ತಿಲ | ಅದ್ಭುತ ಪ್ರತಿಕ್ರಿಯೆ ನೀಡಿದ ಮತದಾರರು |

Share

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಪರವಾಗಿ ಇದೀಗ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಂದು ನಮಗೆ ನೆರವು ನೀಡಿದ್ದಾರೆ, ಈಗ ನಿಮಗೆ ನೆರವು ನೀಡುತ್ತೇವೆ ಎಂದು  ಹೇಳುವ ಅಭಿಪ್ರಾಯ ಬಂದಿದೆ.

Advertisement
Advertisement

ಚುನಾವಣಾ ಕಣದಲ್ಲಿ ಕಾರ್ಯಕರ್ತರ ಮನವಿ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ  ಸ್ಫರ್ಧೆಗೆ ಇಳಿದಿದ್ದ ಅರುಣ್‌ ಕುಮಾರ್‌ ಪುತ್ತಿಲ  ಅವರ ವಿರುದ್ಧ ಇತರ ಪಕ್ಷಗಳು ಹಲವು ಆರೋಪಗಳನ್ನು, ಸುಳ್ಳು ಪ್ರಚಾರಗಳನ್ನು ಮಾಡುತ್ತಿರುವುದರಿಂದ ಬೇಸತ್ತ ಅರುಣ್ ಕುಮಾರ್ ಪುತ್ತಿಲರು ಎ.28ರ ಮಹಿಳಾ ಸಮಾವೇಶ ಸೀತಾ ಪರಿವಾರದಲ್ಲಿ ಚುನಾವಣೆ ಎದುರಿಸುವುದು ಕಷ್ಟಸಾಧ್ಯ ಅದಕ್ಕೆ ಅಧಿಕಾರ ಹಾಗೂ ಹಣ ಬಲ ಬೇಕು . ನಿಮ್ಮ ಓಟಿನ ಜೊತೆಗೆ 10 ರೂಪಾಯಿಯಂತೆ ನೀಡಿ ನಿಮ್ಮ ಮನೆ ಮಗನ ರೀತಿ ಬೆಂಬಲಿಸಿ ಎಂದು  ಮನವಿ ಮಾಡಿದ್ದರು. ಪುತ್ತಿಲರ ಮನವಿಗೆ ಮಿಡಿದ ಮತದಾರರು  ಸಹಾಯವನ್ನು ನೀಡುತ್ತಿದ್ದಾರೆ.ಕೇವಲ 12 ಗಂಟೆಯಲ್ಲಿ ಹರಿದು ಬಂತು 7.80 ಲಕ್ಷ ರೂಪಾಯಿ ಹರಿದುಬಂದಿದೆ.

ಪುತ್ತಿಲರ ಚುನಾವಣಾ ನಿರ್ವಹಣೆಯ ಐಟಿ ಸೆಲ್ ವತಿಯಿಂದ ಎ.29ರ ಮಧ್ಯಾಹ್ನ ಸಮಯ ಅಕೌಂಟ್ ನಂಬರ್ , ಕ್ಯೂ ಆರ್ ಕೋಡ್, ಯುಪಿಐ ನಂಬರ್ ನ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈ ಪೋಸ್ಟರ್ ರೀಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷದಷ್ಟು ಸಂಗ್ರಹ ಆಗಿತ್ತು. ಕುರಿಯದ ಬೆನ್ನುಮೂಲೆ ಮುರಿತಕ್ಕೊಳಕ್ಕಾದ ಸತೀಶ್ ಎನ್ನುವವರು 5 ಸಾವಿರ ಹಣ ಅರುಣ್ ಪುತ್ತಿಲರಿಗೆ ಹಾಕಿ ನಮಗೋಸ್ಕರ ದುಡಿಯುವವರು ಯಾವತ್ತೂ ಸೋಲಬಾರದು ಎನ್ನುವ ಸಂದೇಶ ಹಾಕಿದ್ದು ಅಭಿಮಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯೋರ್ವರು 30000 ಹಣ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮನೆ ಮನೆಯಿಂದ 10,50, 100, 500, 1000 ದಂತೆ ಹಣ ಸಂದಾಯವಾಗಿದೆ. ಹೊರ ತಾಲೂಕಿನವರೂ ಸ್ಪಂದಿಸಿದ್ದಾರೆ.12 ಗಂಟೆ ಅವಧಿಯಲ್ಲಿ ಈ ಖಾತೆಗೆ 7.80 ಲಕ್ಷ ರೂಪಾಯಿ ಹಣ ಹರಿದು ಬಂದಿದೆ.

ಕ್ಷೇತ್ರದಾದ್ಯಂತ ಅರುಣ್ ಪುತ್ತಿಲರ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ.ಅನೇಕರು ಅಂದು ನಮಗೆ ಸಹಾಯ ಮಾಡಿದ್ದೀರಿ, ಇಂದು ನಾವು ನಿಮ್ಮ ಜೊತೆಗಿದ್ದೇವೆ ಎಂದು ಹೇಳುತ್ತಿರುವುದು  ವಿಶೇಷವಾಗಿದೆ. ವ್ಯಕ್ತಿಯೊಬ್ಬರು ಅಪಘಾತಕ್ಕೆ ಒಳಗಾಗಿ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅರುಣ್‌ ಕುಮಾರ್‌ ಪುತ್ತಿಲ ಅವರು, ಅಂತಹ ವ್ಯಕ್ತಿಗಳೂ ಕಳೆದ ಕೆಲವು ದಿನಗಳಿಂದ ತಡರಾತ್ರಿವರೆಗೂ ಪುತ್ತಿಲ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಪಕ್ಷೇತರ ಅಭ್ಯರ್ಥಿ ಪುತ್ತೂರಿನಲ್ಲಿ ಹವಾ ಎಬ್ಬಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

15 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

24 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago