Advertisement
ಸುದ್ದಿಗಳು

ನೆರವಿಗೆ ನೆರವು…! | ಪುತ್ತೂರಿನ ಚುನಾವಣಾ ಕಣದಲ್ಲಿ ಇತಿಹಾಸ ಬರೆದ ಅರುಣ್‌ ಪುತ್ತಿಲ | ಅದ್ಭುತ ಪ್ರತಿಕ್ರಿಯೆ ನೀಡಿದ ಮತದಾರರು |

Share

ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಪರವಾಗಿ ಇದೀಗ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಂದು ನಮಗೆ ನೆರವು ನೀಡಿದ್ದಾರೆ, ಈಗ ನಿಮಗೆ ನೆರವು ನೀಡುತ್ತೇವೆ ಎಂದು  ಹೇಳುವ ಅಭಿಪ್ರಾಯ ಬಂದಿದೆ.

ಚುನಾವಣಾ ಕಣದಲ್ಲಿ ಕಾರ್ಯಕರ್ತರ ಮನವಿ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ  ಸ್ಫರ್ಧೆಗೆ ಇಳಿದಿದ್ದ ಅರುಣ್‌ ಕುಮಾರ್‌ ಪುತ್ತಿಲ  ಅವರ ವಿರುದ್ಧ ಇತರ ಪಕ್ಷಗಳು ಹಲವು ಆರೋಪಗಳನ್ನು, ಸುಳ್ಳು ಪ್ರಚಾರಗಳನ್ನು ಮಾಡುತ್ತಿರುವುದರಿಂದ ಬೇಸತ್ತ ಅರುಣ್ ಕುಮಾರ್ ಪುತ್ತಿಲರು ಎ.28ರ ಮಹಿಳಾ ಸಮಾವೇಶ ಸೀತಾ ಪರಿವಾರದಲ್ಲಿ ಚುನಾವಣೆ ಎದುರಿಸುವುದು ಕಷ್ಟಸಾಧ್ಯ ಅದಕ್ಕೆ ಅಧಿಕಾರ ಹಾಗೂ ಹಣ ಬಲ ಬೇಕು . ನಿಮ್ಮ ಓಟಿನ ಜೊತೆಗೆ 10 ರೂಪಾಯಿಯಂತೆ ನೀಡಿ ನಿಮ್ಮ ಮನೆ ಮಗನ ರೀತಿ ಬೆಂಬಲಿಸಿ ಎಂದು  ಮನವಿ ಮಾಡಿದ್ದರು. ಪುತ್ತಿಲರ ಮನವಿಗೆ ಮಿಡಿದ ಮತದಾರರು  ಸಹಾಯವನ್ನು ನೀಡುತ್ತಿದ್ದಾರೆ.ಕೇವಲ 12 ಗಂಟೆಯಲ್ಲಿ ಹರಿದು ಬಂತು 7.80 ಲಕ್ಷ ರೂಪಾಯಿ ಹರಿದುಬಂದಿದೆ.

ಪುತ್ತಿಲರ ಚುನಾವಣಾ ನಿರ್ವಹಣೆಯ ಐಟಿ ಸೆಲ್ ವತಿಯಿಂದ ಎ.29ರ ಮಧ್ಯಾಹ್ನ ಸಮಯ ಅಕೌಂಟ್ ನಂಬರ್ , ಕ್ಯೂ ಆರ್ ಕೋಡ್, ಯುಪಿಐ ನಂಬರ್ ನ ಅಧಿಕೃತ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಈ ಪೋಸ್ಟರ್ ರೀಲೀಸ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷದಷ್ಟು ಸಂಗ್ರಹ ಆಗಿತ್ತು. ಕುರಿಯದ ಬೆನ್ನುಮೂಲೆ ಮುರಿತಕ್ಕೊಳಕ್ಕಾದ ಸತೀಶ್ ಎನ್ನುವವರು 5 ಸಾವಿರ ಹಣ ಅರುಣ್ ಪುತ್ತಿಲರಿಗೆ ಹಾಕಿ ನಮಗೋಸ್ಕರ ದುಡಿಯುವವರು ಯಾವತ್ತೂ ಸೋಲಬಾರದು ಎನ್ನುವ ಸಂದೇಶ ಹಾಕಿದ್ದು ಅಭಿಮಾನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯೋರ್ವರು 30000 ಹಣ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಮನೆ ಮನೆಯಿಂದ 10,50, 100, 500, 1000 ದಂತೆ ಹಣ ಸಂದಾಯವಾಗಿದೆ. ಹೊರ ತಾಲೂಕಿನವರೂ ಸ್ಪಂದಿಸಿದ್ದಾರೆ.12 ಗಂಟೆ ಅವಧಿಯಲ್ಲಿ ಈ ಖಾತೆಗೆ 7.80 ಲಕ್ಷ ರೂಪಾಯಿ ಹಣ ಹರಿದು ಬಂದಿದೆ.

ಕ್ಷೇತ್ರದಾದ್ಯಂತ ಅರುಣ್ ಪುತ್ತಿಲರ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ.ಅನೇಕರು ಅಂದು ನಮಗೆ ಸಹಾಯ ಮಾಡಿದ್ದೀರಿ, ಇಂದು ನಾವು ನಿಮ್ಮ ಜೊತೆಗಿದ್ದೇವೆ ಎಂದು ಹೇಳುತ್ತಿರುವುದು  ವಿಶೇಷವಾಗಿದೆ. ವ್ಯಕ್ತಿಯೊಬ್ಬರು ಅಪಘಾತಕ್ಕೆ ಒಳಗಾಗಿ ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಸಾಗಿಸಿದ್ದು ಅರುಣ್‌ ಕುಮಾರ್‌ ಪುತ್ತಿಲ ಅವರು, ಅಂತಹ ವ್ಯಕ್ತಿಗಳೂ ಕಳೆದ ಕೆಲವು ದಿನಗಳಿಂದ ತಡರಾತ್ರಿವರೆಗೂ ಪುತ್ತಿಲ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಪಕ್ಷೇತರ ಅಭ್ಯರ್ಥಿ ಪುತ್ತೂರಿನಲ್ಲಿ ಹವಾ ಎಬ್ಬಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 hour ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

18 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago