Advertisement
MIRROR FOCUS

ಗಣೇಶ ಉತ್ಸವ ಸಂಭ್ರಮಗಳಲ್ಲಿ ಭಾಗಿಯಾದ ಅರುಣ್‌ ಪುತ್ತಿಲ | 40 ಕ್ಕೂ ಅಧಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವಕರ ನೆಚ್ಚಿನ “ಅರುಣಣ್ಣ” |

Share

ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ನಡೆಯಿತು. ಊರಿನ ಜನರೆಲ್ಲಾ ಸಂಭ್ರಮದಿಂದ ಈ ಉತ್ಸವಗಳಲ್ಲಿ ಭಾಗವಹಿಸುತ್ತಾರೆ.ಈ ಬಾರಿ ಬಹುತೇಕ ಕಡೆಗಳಲ್ಲಿ ಯುವಕರು ವಿಶೇಷವಾಗಿ ಆಹ್ವಾನಿಸಿದ್ದು, ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು. ಕಳೆದ ಒಂದು ವಾರಗಳಿಂದ 42 ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. 

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಸಂಘಟನೆಯ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ಬಾಲಗಂಗಾಧರ ತಿಲಕರು ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಆರಾಧನೆಯನ್ನು ಆರಂಭಿಸಿದ್ದರು. ಇಂದು ದೇಶದಾದ್ಯಂತ ಸಂಘಟನೆಯ ಉದ್ದೇಶದಿಂದಲೂ, ಸಾಮರಸ್ಯದ ಉದ್ದೇಶದಿಂದಲೂ ಗಣೇಶೋತ್ಸವ ಸೇರಿದಂತೆ ಹಲವು ಸಾರ್ವಜನಿಕ ಆಚರಣೆಗಳು ನಡೆಯುತ್ತದೆ. ಇಂತಹ ಆಚರಣೆಗಳಲ್ಲಿ ಯುವಕರು ಹೆಚ್ಚಾಗಿ ತಮ್ಮ ನೆಚ್ಚಿನ ನಾಯಕರನ್ನು ಇಂತಹ ಕಾರ್ಯಕ್ರಮದಲ್ಲಿ  ಅಪೇಕ್ಷೆ ಪಡುತ್ತಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ನೆನಪಾದ್ದು ಅರುಣ್‌ ಕುಮಾರ್‌ ಪುತ್ತಿಲ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಭಾಗವಹಿಸಿದ್ದರು. ಎಲ್ಲೆಡೆಯೂ ಕಾರ್ಯಕ್ರಮ ಆಯೋಜನೆ ಹಾಗೂ ಆ ಬಳಿಕ ಪುತ್ತಿಲ ಅವರಿಗೆ ಕರೆ ಮಾಡಿ, “ಅರುಣಣ್ಣ ಬರಲೇಬೇಕು” ಎಂದು ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಹೀಗಾಗಿ ಈ ಪ್ರೀತಿಗೆ ಗೌರವ ನೀಡಿ ಬಹುತೇಕ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದುವರೆಗೆ 42 ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಕಡಬ ಹೀಗೇ  ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಳಿಂದ ಪ್ರವಾಸ ಮಾಡಿದರು. ಹಿಂದೂ ಮುಖಂಡನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಯುವಕರು ಮನ ಗೆದ್ದ ದ ಕ ಜಿಲ್ಲೆಯ ಒಬ್ಬ ನಾಯಕನಾಗಿ ಬೆಳೆದಿದ್ದಾರೆ.

ಕಳೆದ ತಿಂಗಳಿನಿಂದಲೇ ಯುವಕರು ಕರೆ ಮಾಡಿ ನಮ್ಮ ಊರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಒಂದು ಕ್ಷಣಕ್ಕಾದರೂ ಬರಲೇಬೇಕು ಎಂದು ಕರೆ ಮಾಡುತ್ತಿದ್ದರು. ಈ ಪ್ರೀತಿಗೆ ಬೆಲೆ ನೀಡಬೇಕಾದ್ದು ನನ್ನ ಕರ್ತವ್ಯ ಎಂದು ಭಾವಿಸಿ ಗಣೇಶೋತ್ಸವಗಳಲ್ಲಿ ಭಾಗವಹಿಸಿದ್ದೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ಆದರೆ ನಮಗೆ ಹಿಂದೂ ನಾಯಕನಾಗಿ, ಯುವಕರಿಗೆ ತಕ್ಷಣ ಸ್ಪಂದಿಸುವ ನಾಯಕನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಮಾತ್ರವೇ  ಎನ್ನುತ್ತಾರೆ ಯುವಕ ಹರೀಶ್‌ ನಾಯ್ಕ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

3 hours ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

4 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

5 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

5 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

5 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

15 hours ago