Advertisement
MIRROR FOCUS

ಗಣೇಶ ಉತ್ಸವ ಸಂಭ್ರಮಗಳಲ್ಲಿ ಭಾಗಿಯಾದ ಅರುಣ್‌ ಪುತ್ತಿಲ | 40 ಕ್ಕೂ ಅಧಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವಕರ ನೆಚ್ಚಿನ “ಅರುಣಣ್ಣ” |

Share

ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ನಡೆಯಿತು. ಊರಿನ ಜನರೆಲ್ಲಾ ಸಂಭ್ರಮದಿಂದ ಈ ಉತ್ಸವಗಳಲ್ಲಿ ಭಾಗವಹಿಸುತ್ತಾರೆ.ಈ ಬಾರಿ ಬಹುತೇಕ ಕಡೆಗಳಲ್ಲಿ ಯುವಕರು ವಿಶೇಷವಾಗಿ ಆಹ್ವಾನಿಸಿದ್ದು, ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು. ಕಳೆದ ಒಂದು ವಾರಗಳಿಂದ 42 ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. 

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಸಂಘಟನೆಯ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ಬಾಲಗಂಗಾಧರ ತಿಲಕರು ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಆರಾಧನೆಯನ್ನು ಆರಂಭಿಸಿದ್ದರು. ಇಂದು ದೇಶದಾದ್ಯಂತ ಸಂಘಟನೆಯ ಉದ್ದೇಶದಿಂದಲೂ, ಸಾಮರಸ್ಯದ ಉದ್ದೇಶದಿಂದಲೂ ಗಣೇಶೋತ್ಸವ ಸೇರಿದಂತೆ ಹಲವು ಸಾರ್ವಜನಿಕ ಆಚರಣೆಗಳು ನಡೆಯುತ್ತದೆ. ಇಂತಹ ಆಚರಣೆಗಳಲ್ಲಿ ಯುವಕರು ಹೆಚ್ಚಾಗಿ ತಮ್ಮ ನೆಚ್ಚಿನ ನಾಯಕರನ್ನು ಇಂತಹ ಕಾರ್ಯಕ್ರಮದಲ್ಲಿ  ಅಪೇಕ್ಷೆ ಪಡುತ್ತಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ನೆನಪಾದ್ದು ಅರುಣ್‌ ಕುಮಾರ್‌ ಪುತ್ತಿಲ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಭಾಗವಹಿಸಿದ್ದರು. ಎಲ್ಲೆಡೆಯೂ ಕಾರ್ಯಕ್ರಮ ಆಯೋಜನೆ ಹಾಗೂ ಆ ಬಳಿಕ ಪುತ್ತಿಲ ಅವರಿಗೆ ಕರೆ ಮಾಡಿ, “ಅರುಣಣ್ಣ ಬರಲೇಬೇಕು” ಎಂದು ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಹೀಗಾಗಿ ಈ ಪ್ರೀತಿಗೆ ಗೌರವ ನೀಡಿ ಬಹುತೇಕ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದುವರೆಗೆ 42 ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಕಡಬ ಹೀಗೇ  ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಳಿಂದ ಪ್ರವಾಸ ಮಾಡಿದರು. ಹಿಂದೂ ಮುಖಂಡನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಯುವಕರು ಮನ ಗೆದ್ದ ದ ಕ ಜಿಲ್ಲೆಯ ಒಬ್ಬ ನಾಯಕನಾಗಿ ಬೆಳೆದಿದ್ದಾರೆ.

ಕಳೆದ ತಿಂಗಳಿನಿಂದಲೇ ಯುವಕರು ಕರೆ ಮಾಡಿ ನಮ್ಮ ಊರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಒಂದು ಕ್ಷಣಕ್ಕಾದರೂ ಬರಲೇಬೇಕು ಎಂದು ಕರೆ ಮಾಡುತ್ತಿದ್ದರು. ಈ ಪ್ರೀತಿಗೆ ಬೆಲೆ ನೀಡಬೇಕಾದ್ದು ನನ್ನ ಕರ್ತವ್ಯ ಎಂದು ಭಾವಿಸಿ ಗಣೇಶೋತ್ಸವಗಳಲ್ಲಿ ಭಾಗವಹಿಸಿದ್ದೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ಆದರೆ ನಮಗೆ ಹಿಂದೂ ನಾಯಕನಾಗಿ, ಯುವಕರಿಗೆ ತಕ್ಷಣ ಸ್ಪಂದಿಸುವ ನಾಯಕನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಮಾತ್ರವೇ  ಎನ್ನುತ್ತಾರೆ ಯುವಕ ಹರೀಶ್‌ ನಾಯ್ಕ್.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

10 minutes ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

14 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

22 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago