Advertisement
MIRROR FOCUS

ಗಣೇಶ ಉತ್ಸವ ಸಂಭ್ರಮಗಳಲ್ಲಿ ಭಾಗಿಯಾದ ಅರುಣ್‌ ಪುತ್ತಿಲ | 40 ಕ್ಕೂ ಅಧಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವಕರ ನೆಚ್ಚಿನ “ಅರುಣಣ್ಣ” |

Share

ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ನಡೆಯಿತು. ಊರಿನ ಜನರೆಲ್ಲಾ ಸಂಭ್ರಮದಿಂದ ಈ ಉತ್ಸವಗಳಲ್ಲಿ ಭಾಗವಹಿಸುತ್ತಾರೆ.ಈ ಬಾರಿ ಬಹುತೇಕ ಕಡೆಗಳಲ್ಲಿ ಯುವಕರು ವಿಶೇಷವಾಗಿ ಆಹ್ವಾನಿಸಿದ್ದು, ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು. ಕಳೆದ ಒಂದು ವಾರಗಳಿಂದ 42 ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. 

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಸಂಘಟನೆಯ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ಬಾಲಗಂಗಾಧರ ತಿಲಕರು ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಆರಾಧನೆಯನ್ನು ಆರಂಭಿಸಿದ್ದರು. ಇಂದು ದೇಶದಾದ್ಯಂತ ಸಂಘಟನೆಯ ಉದ್ದೇಶದಿಂದಲೂ, ಸಾಮರಸ್ಯದ ಉದ್ದೇಶದಿಂದಲೂ ಗಣೇಶೋತ್ಸವ ಸೇರಿದಂತೆ ಹಲವು ಸಾರ್ವಜನಿಕ ಆಚರಣೆಗಳು ನಡೆಯುತ್ತದೆ. ಇಂತಹ ಆಚರಣೆಗಳಲ್ಲಿ ಯುವಕರು ಹೆಚ್ಚಾಗಿ ತಮ್ಮ ನೆಚ್ಚಿನ ನಾಯಕರನ್ನು ಇಂತಹ ಕಾರ್ಯಕ್ರಮದಲ್ಲಿ  ಅಪೇಕ್ಷೆ ಪಡುತ್ತಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ನೆನಪಾದ್ದು ಅರುಣ್‌ ಕುಮಾರ್‌ ಪುತ್ತಿಲ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಭಾಗವಹಿಸಿದ್ದರು. ಎಲ್ಲೆಡೆಯೂ ಕಾರ್ಯಕ್ರಮ ಆಯೋಜನೆ ಹಾಗೂ ಆ ಬಳಿಕ ಪುತ್ತಿಲ ಅವರಿಗೆ ಕರೆ ಮಾಡಿ, “ಅರುಣಣ್ಣ ಬರಲೇಬೇಕು” ಎಂದು ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಹೀಗಾಗಿ ಈ ಪ್ರೀತಿಗೆ ಗೌರವ ನೀಡಿ ಬಹುತೇಕ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದುವರೆಗೆ 42 ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಕಡಬ ಹೀಗೇ  ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಳಿಂದ ಪ್ರವಾಸ ಮಾಡಿದರು. ಹಿಂದೂ ಮುಖಂಡನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಯುವಕರು ಮನ ಗೆದ್ದ ದ ಕ ಜಿಲ್ಲೆಯ ಒಬ್ಬ ನಾಯಕನಾಗಿ ಬೆಳೆದಿದ್ದಾರೆ.

ಕಳೆದ ತಿಂಗಳಿನಿಂದಲೇ ಯುವಕರು ಕರೆ ಮಾಡಿ ನಮ್ಮ ಊರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಒಂದು ಕ್ಷಣಕ್ಕಾದರೂ ಬರಲೇಬೇಕು ಎಂದು ಕರೆ ಮಾಡುತ್ತಿದ್ದರು. ಈ ಪ್ರೀತಿಗೆ ಬೆಲೆ ನೀಡಬೇಕಾದ್ದು ನನ್ನ ಕರ್ತವ್ಯ ಎಂದು ಭಾವಿಸಿ ಗಣೇಶೋತ್ಸವಗಳಲ್ಲಿ ಭಾಗವಹಿಸಿದ್ದೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ಆದರೆ ನಮಗೆ ಹಿಂದೂ ನಾಯಕನಾಗಿ, ಯುವಕರಿಗೆ ತಕ್ಷಣ ಸ್ಪಂದಿಸುವ ನಾಯಕನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಮಾತ್ರವೇ  ಎನ್ನುತ್ತಾರೆ ಯುವಕ ಹರೀಶ್‌ ನಾಯ್ಕ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

9 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

9 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

10 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

12 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

23 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

23 hours ago