Advertisement
MIRROR FOCUS

ಗಣೇಶ ಉತ್ಸವ ಸಂಭ್ರಮಗಳಲ್ಲಿ ಭಾಗಿಯಾದ ಅರುಣ್‌ ಪುತ್ತಿಲ | 40 ಕ್ಕೂ ಅಧಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವಕರ ನೆಚ್ಚಿನ “ಅರುಣಣ್ಣ” |

Share

ಎಲ್ಲೆಡೆ ಗಣೇಶೋತ್ಸವ ಸಂಭ್ರಮ, ಸಡಗರದಿಂದ ನಡೆಯಿತು. ಊರಿನ ಜನರೆಲ್ಲಾ ಸಂಭ್ರಮದಿಂದ ಈ ಉತ್ಸವಗಳಲ್ಲಿ ಭಾಗವಹಿಸುತ್ತಾರೆ.ಈ ಬಾರಿ ಬಹುತೇಕ ಕಡೆಗಳಲ್ಲಿ ಯುವಕರು ವಿಶೇಷವಾಗಿ ಆಹ್ವಾನಿಸಿದ್ದು, ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು. ಕಳೆದ ಒಂದು ವಾರಗಳಿಂದ 42 ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. 

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭ ಸಂಘಟನೆಯ ಉದ್ದೇಶದಿಂದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಆರಂಭಗೊಂಡಿತು. ಬಾಲಗಂಗಾಧರ ತಿಲಕರು ಒಳ್ಳೆಯ ಉದ್ದೇಶದಿಂದ ಸಾರ್ವಜನಿಕ ಆರಾಧನೆಯನ್ನು ಆರಂಭಿಸಿದ್ದರು. ಇಂದು ದೇಶದಾದ್ಯಂತ ಸಂಘಟನೆಯ ಉದ್ದೇಶದಿಂದಲೂ, ಸಾಮರಸ್ಯದ ಉದ್ದೇಶದಿಂದಲೂ ಗಣೇಶೋತ್ಸವ ಸೇರಿದಂತೆ ಹಲವು ಸಾರ್ವಜನಿಕ ಆಚರಣೆಗಳು ನಡೆಯುತ್ತದೆ. ಇಂತಹ ಆಚರಣೆಗಳಲ್ಲಿ ಯುವಕರು ಹೆಚ್ಚಾಗಿ ತಮ್ಮ ನೆಚ್ಚಿನ ನಾಯಕರನ್ನು ಇಂತಹ ಕಾರ್ಯಕ್ರಮದಲ್ಲಿ  ಅಪೇಕ್ಷೆ ಪಡುತ್ತಾರೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ನೆನಪಾದ್ದು ಅರುಣ್‌ ಕುಮಾರ್‌ ಪುತ್ತಿಲ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಯ ಗಣೇಶೋತ್ಸವ ಕಾರ್ಯಕ್ರಮಗಳಲ್ಲಿ ಅರುಣ್‌ ಕುಮಾರ್‌ ಪುತ್ತಿಲ ಭಾಗವಹಿಸಿದ್ದರು. ಎಲ್ಲೆಡೆಯೂ ಕಾರ್ಯಕ್ರಮ ಆಯೋಜನೆ ಹಾಗೂ ಆ ಬಳಿಕ ಪುತ್ತಿಲ ಅವರಿಗೆ ಕರೆ ಮಾಡಿ, “ಅರುಣಣ್ಣ ಬರಲೇಬೇಕು” ಎಂದು ಪ್ರೀತಿಯಿಂದ ಆಹ್ವಾನಿಸಿದ್ದಾರೆ. ಹೀಗಾಗಿ ಈ ಪ್ರೀತಿಗೆ ಗೌರವ ನೀಡಿ ಬಹುತೇಕ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದುವರೆಗೆ 42 ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸುಳ್ಯ, ಪುತ್ತೂರು, ವಿಟ್ಲ, ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಕಡಬ ಹೀಗೇ  ದ ಕ ಜಿಲ್ಲೆಯ ಹಲವು ಕಡೆಗಳಲ್ಲಿ ವಾರಗಳಿಂದ ಪ್ರವಾಸ ಮಾಡಿದರು. ಹಿಂದೂ ಮುಖಂಡನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಯುವಕರು ಮನ ಗೆದ್ದ ದ ಕ ಜಿಲ್ಲೆಯ ಒಬ್ಬ ನಾಯಕನಾಗಿ ಬೆಳೆದಿದ್ದಾರೆ.

ಕಳೆದ ತಿಂಗಳಿನಿಂದಲೇ ಯುವಕರು ಕರೆ ಮಾಡಿ ನಮ್ಮ ಊರಿನ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು, ಒಂದು ಕ್ಷಣಕ್ಕಾದರೂ ಬರಲೇಬೇಕು ಎಂದು ಕರೆ ಮಾಡುತ್ತಿದ್ದರು. ಈ ಪ್ರೀತಿಗೆ ಬೆಲೆ ನೀಡಬೇಕಾದ್ದು ನನ್ನ ಕರ್ತವ್ಯ ಎಂದು ಭಾವಿಸಿ ಗಣೇಶೋತ್ಸವಗಳಲ್ಲಿ ಭಾಗವಹಿಸಿದ್ದೇನೆ ಎಂದು ಅರುಣ್‌ ಕುಮಾರ್‌ ಪುತ್ತಿಲ ಹೇಳುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ಆದರೆ ನಮಗೆ ಹಿಂದೂ ನಾಯಕನಾಗಿ, ಯುವಕರಿಗೆ ತಕ್ಷಣ ಸ್ಪಂದಿಸುವ ನಾಯಕನಾಗಿ ಅರುಣ್‌ ಕುಮಾರ್‌ ಪುತ್ತಿಲ ಅವರು ಮಾತ್ರವೇ  ಎನ್ನುತ್ತಾರೆ ಯುವಕ ಹರೀಶ್‌ ನಾಯ್ಕ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

2 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

10 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

19 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago