ಶಿವಮೊಗ್ಗ ರಾಗಿಗುಡ್ಡದಲ್ಲಿ ಹಿಂಸಾಚಾರ | ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ | ನ್ಯಾಯಾಂಗ ತನಿಖೆಗೆ ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯ |

October 6, 2023
7:30 PM
ಸರ್ಕಾರ ಶಿವಮೊಗ್ಗದಲ್ಲಿ ನಡೆದ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯಿಸಿದ್ದಾರೆ.

ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.

ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.

ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror