ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.
ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.
ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.
ಭಾರತದ 11,000 ಕಿ.ಮೀ ಕರಾವಳಿಗೆ ಮುಂದಿನ 15 ವರ್ಷಗಳಲ್ಲಿ ಹವಾಮಾನ ಬದಲಾವಣೆಯ ಗಂಭೀರ…
ಸೂಪರ್ ಎಲ್ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…
ಗ್ರಾಮೀಣ ಪ್ರವಾಸೋದ್ಯಮದ ಮೂಲಕ ವಿಯೆಟ್ನಾಂನಲ್ಲಿ ಸಾಂಪ್ರದಾಯಿಕ ಕರಕುಶಲ ಗ್ರಾಮಗಳಿಗೆ ಹೊಸ ಜೀವ ಸಿಕ್ಕಿದೆ.…
ಮಿಜೋರಾಂನಲ್ಲಿ ₹339 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಹೂಡಿಕೆ ಮಾಡಿರುವ NEC, ಕೃಷಿ, ಅಡಿಕೆ…
ಹಸುವಿಗೆ ರಾಷ್ಟ್ರೀಯ ಪ್ರಾಣಿಯ ಸ್ಥಾನಮಾನ ನೀಡುವುದು ಅಥವಾ ದೇಶವ್ಯಾಪಿ ಗೋಹತ್ಯೆ ನಿಷೇಧ ಜಾರಿಗೊಳಿಸುವ…
ಬೆಳೆ ವೈರಸ್ ರೋಗಗಳಿಗೆ ಇನ್ನೂ ವ್ಯಾಕ್ಸಿನ್ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…