ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.
ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.
ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…